<p><strong>ಹೈದರಾಬಾದ್:</strong> ಕಾಲ್ತುಳಿತ ವಿವಾದದ ನಡುವೆ ಪುಷ್ಪ–2 ಚಿತ್ರದ 'ದಮ್ಮಿದ್ರೆ ನನ್ನನ್ನು ಹಿಡಿಯಿರಿ' (Dammunte Pattukora) ಹಾಡು ಟೀಕೆಗೆ ಗುರಿಯಾಗಿತ್ತು. ಹೀಗಾಗಿ ಚಿತ್ರ ತಂಡ ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳು ಮತ್ತು ಯೂಟ್ಯೂಬ್ನಿಂದ ಈ ಹಾಡನ್ನು ತೆಗೆದುಹಾಕಿದೆ.</p>.<p>ಈ ಬಗ್ಗೆ ಸುದ್ದಿಸಂಸ್ಥೆ ‘ಎನ್ಡಿ ಟಿವಿ’ ವರದಿ ಮಾಡಿದೆ.</p>.<p>ಅಲ್ಲು ಅರ್ಜುನ್ ಹಾಡಿರುವ 'Dammunte Pattukora' ಹಾಡು ಡಿಸೆಂಬರ್ 24 ರಂದು ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿತ್ತು. ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳಸಾಗಣೆದಾರರ ಸಿಂಡಿಕೇಟ್ನ ಮುಖಂಡ. ಚಿತ್ರದಲ್ಲಿ ಅಲ್ಲು ಅರ್ಜುನ್ ಅನ್ನು ಹಿಡಿಯಲು ಪೊಲೀಸ್ (ಶೆಖಾವತ್) ಒಬ್ಬ ಬಹಳ ಪ್ರಯತ್ನ ಪಡುತ್ತಿರುತ್ತಾನೆ.</p>.‘ಪುಷ್ಪ 2’ ಕಾಲ್ತುಳಿತ ದುರಂತ: ನಟ ಅಲ್ಲು ಅರ್ಜುನ್ಗೆ 14 ದಿನ ನ್ಯಾಯಾಂಗ ಬಂಧನ.<p>ದೃಶ್ಯವೊಂದರಲ್ಲಿ ಶೆಖಾವತ್ಗೆ ಸವಾಲು ಹಾಕುವ ಪುಷ್ಪ (ಅಲ್ಲು ಅರ್ಜುನ್) ‘ದಮ್ಮಿದ್ರೆ ನನ್ನನ್ನು ಹಿಡಿಯಿರಿ (Dammunte Pattukora) ಶೆಖಾವತ್ ’(ಫಹದ್ ಫಾಸಿಲ್) ಎಂದು ಹಾಡು ಹೇಳುತ್ತಾ ಸವಾಲು ಹಾಕುತ್ತಾನೆ. ಈ ಸಾಲು ಟೀಕೆಗೆ ಗುರಿಯಾಗಿತ್ತು. ಪೊಲೀಸರನ್ನು ಗೇಲಿ ಮಾಡಲಾಗಿದೆ ಎಂದೂ ಹೇಳಲಾಗಿತ್ತು. ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಬಂಧನ ಹಾಗೂ ನಂತರದ ಬೆಳವಣಿಗೆಗಳ ನಡುವೆ ಚಿತ್ರ ತಂಡ ಈ ಹಾಡಿಗೆ ಕತ್ತರಿ ಹಾಕಿದೆ.</p>.<p>ಇನ್ನು ವಿವಾದಗಳ ನಡುವೆಯೇ ಪುಷ್ಪ 2 ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಡಿಸೆಂಬರ್ 5 ರಂದು ಬಿಡುಗಡೆಯಾದ ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ 21 ದಿನಗಳನ್ನು ಪೂರೈಸಿದೆ. ಸದ್ಯ ಭಾರತದಲ್ಲಿ ₹1100 ಕೋಟಿ ಗಳಿಕೆ ಮಾಡಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.</p>.ಪುಷ್ಪ–2ನಲ್ಲಿ ಪೊಲೀಸರಿಗೆ ಅವಮಾನ: ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಕಾಲ್ತುಳಿತ ವಿವಾದದ ನಡುವೆ ಪುಷ್ಪ–2 ಚಿತ್ರದ 'ದಮ್ಮಿದ್ರೆ ನನ್ನನ್ನು ಹಿಡಿಯಿರಿ' (Dammunte Pattukora) ಹಾಡು ಟೀಕೆಗೆ ಗುರಿಯಾಗಿತ್ತು. ಹೀಗಾಗಿ ಚಿತ್ರ ತಂಡ ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳು ಮತ್ತು ಯೂಟ್ಯೂಬ್ನಿಂದ ಈ ಹಾಡನ್ನು ತೆಗೆದುಹಾಕಿದೆ.</p>.<p>ಈ ಬಗ್ಗೆ ಸುದ್ದಿಸಂಸ್ಥೆ ‘ಎನ್ಡಿ ಟಿವಿ’ ವರದಿ ಮಾಡಿದೆ.</p>.<p>ಅಲ್ಲು ಅರ್ಜುನ್ ಹಾಡಿರುವ 'Dammunte Pattukora' ಹಾಡು ಡಿಸೆಂಬರ್ 24 ರಂದು ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿತ್ತು. ಪುಷ್ಪ 2 ಚಿತ್ರದಲ್ಲಿ ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳಸಾಗಣೆದಾರರ ಸಿಂಡಿಕೇಟ್ನ ಮುಖಂಡ. ಚಿತ್ರದಲ್ಲಿ ಅಲ್ಲು ಅರ್ಜುನ್ ಅನ್ನು ಹಿಡಿಯಲು ಪೊಲೀಸ್ (ಶೆಖಾವತ್) ಒಬ್ಬ ಬಹಳ ಪ್ರಯತ್ನ ಪಡುತ್ತಿರುತ್ತಾನೆ.</p>.‘ಪುಷ್ಪ 2’ ಕಾಲ್ತುಳಿತ ದುರಂತ: ನಟ ಅಲ್ಲು ಅರ್ಜುನ್ಗೆ 14 ದಿನ ನ್ಯಾಯಾಂಗ ಬಂಧನ.<p>ದೃಶ್ಯವೊಂದರಲ್ಲಿ ಶೆಖಾವತ್ಗೆ ಸವಾಲು ಹಾಕುವ ಪುಷ್ಪ (ಅಲ್ಲು ಅರ್ಜುನ್) ‘ದಮ್ಮಿದ್ರೆ ನನ್ನನ್ನು ಹಿಡಿಯಿರಿ (Dammunte Pattukora) ಶೆಖಾವತ್ ’(ಫಹದ್ ಫಾಸಿಲ್) ಎಂದು ಹಾಡು ಹೇಳುತ್ತಾ ಸವಾಲು ಹಾಕುತ್ತಾನೆ. ಈ ಸಾಲು ಟೀಕೆಗೆ ಗುರಿಯಾಗಿತ್ತು. ಪೊಲೀಸರನ್ನು ಗೇಲಿ ಮಾಡಲಾಗಿದೆ ಎಂದೂ ಹೇಳಲಾಗಿತ್ತು. ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಬಂಧನ ಹಾಗೂ ನಂತರದ ಬೆಳವಣಿಗೆಗಳ ನಡುವೆ ಚಿತ್ರ ತಂಡ ಈ ಹಾಡಿಗೆ ಕತ್ತರಿ ಹಾಕಿದೆ.</p>.<p>ಇನ್ನು ವಿವಾದಗಳ ನಡುವೆಯೇ ಪುಷ್ಪ 2 ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಡಿಸೆಂಬರ್ 5 ರಂದು ಬಿಡುಗಡೆಯಾದ ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ 21 ದಿನಗಳನ್ನು ಪೂರೈಸಿದೆ. ಸದ್ಯ ಭಾರತದಲ್ಲಿ ₹1100 ಕೋಟಿ ಗಳಿಕೆ ಮಾಡಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.</p>.ಪುಷ್ಪ–2ನಲ್ಲಿ ಪೊಲೀಸರಿಗೆ ಅವಮಾನ: ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>