<p><strong>ಬೆಂಗಳೂರು</strong>: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ತವರು ರಾಜ್ಯ ಉತ್ತರ ಪ್ರದೇಶದ ಜೊತೆಗಿನ ನಂಟನ್ನು ಸದಾ ಕಾಪಾಡಿಕೊಂಡು ಬಂದಿದ್ದಾರೆ.</p><p>2024 ರಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದಾಗ ಅಯೋಧ್ಯೆಯಲ್ಲಿ ಬಿಗ್ ಬಿ ಅವರು ದುಬಾರಿ ಬೆಲೆಗೆ ಜಮೀನು ಖರೀದಿಸಿ ಗಮನ ಸೆಳೆದಿದ್ದರು. ಇದೀಗ ಅಯೋಧ್ಯೆಯಲ್ಲಿ ಮತ್ತೊಂದು ಜಾಗವನ್ನು ಅವರು ಖರೀದಿಸಿದ್ದಾರೆ.</p><p>ಈಗ ಖರೀದಿಸಿರುವ ಹೊಸ ಜಾಗ ರಾಮ ಮಂದಿರದ ಸನಿಹವೇ ಇದೆ. ಸುಮಾರು 54,454 ಚದರ ಅಡಿ ಜಾಗ ಇದಾಗಿದೆ. ಈ ಜಾಗದಲ್ಲಿ ಅಮಿತಾಭ್ ಅವರು ತಮ್ಮ ತಂದೆ ಹರಿವಂಶರಾಯ್ ಬಚ್ಚನ್ ಅವರ ಸ್ಮಾರಕವನ್ನು ನಿರ್ಮಿಸಲಿದ್ದಾರೆ ಎಂದು ನ್ಯೂಸ್ 18 ವೆಬ್ಸೈಟ್ ವರದಿ ಮಾಡಿದೆ.</p><p>ಜಾಗ ಖರೀದಿಗೆ ಸಂಬಂಧಿಸಿದಂತೆ ಎಲ್ಲ ಒಪ್ಪಂದಗಳು ಅಂತಿಮಗೊಂಡಿವೆ. ಶೀಘ್ರದಲ್ಲಿಯೇ ಸ್ಮಾರಕ ನಿರ್ಮಾಣವಾಗಲಿದೆ ಎಂದು ತಿಳಿಸಿದೆ.</p><p>ಅಯೋಧ್ಯೆಯ ಹವೇಲಿ ಅವಧ್ ಬಳಿ ಈ ಮೊದಲು ಮನೆ ಕಟ್ಟುವ ಸಲುವಾಗಿ ನಟ ಜಾಗ ಖರೀದಿಸಿದ್ದರು. ಹೊಸ ಜಾಗದಲ್ಲಿ ಸ್ಮಾರಕ ಹಾಗೂ ವಸ್ತು ಸಂಗ್ರಹಾಲಯವನ್ನು ಹರಿವಂಶರಾಯ್ ಬಚ್ಚನ್ ಟ್ರಸ್ಟ್ ನೋಡಿಕೊಳ್ಳಲಿದೆ ಎಂದು ತಿಳಿದು ಬಂದಿದೆ.</p><p>ಹರಿವಂಶರಾಯ್ ಬಚ್ಚನ್ ಅವರು ಹಿಂದಿ ಭಾಷೆಯ ಖ್ಯಾತ ಕವಿ, ಸಾಹಿತಿಯಾಗಿದ್ದರು. ನಟನೆ ಜೊತೆಗೆ ಹೂಡಿಕೆಯಲ್ಲಿ ಆಸಕ್ತಿ ಹೊಂದಿರುವ ನಟ ಅಮಿತಾಭ್ ಬಚ್ಚನ್ ಅವರು ಸುಮಾರು ₹3 ಸಾವಿರ ಕೋಟಿಗೂ ಅಧಿಕ ಸಂಪತ್ತನ್ನು ಹೊಂದಿದ್ದಾರೆ ಎಂದು ಹೇಳಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ತವರು ರಾಜ್ಯ ಉತ್ತರ ಪ್ರದೇಶದ ಜೊತೆಗಿನ ನಂಟನ್ನು ಸದಾ ಕಾಪಾಡಿಕೊಂಡು ಬಂದಿದ್ದಾರೆ.</p><p>2024 ರಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದಾಗ ಅಯೋಧ್ಯೆಯಲ್ಲಿ ಬಿಗ್ ಬಿ ಅವರು ದುಬಾರಿ ಬೆಲೆಗೆ ಜಮೀನು ಖರೀದಿಸಿ ಗಮನ ಸೆಳೆದಿದ್ದರು. ಇದೀಗ ಅಯೋಧ್ಯೆಯಲ್ಲಿ ಮತ್ತೊಂದು ಜಾಗವನ್ನು ಅವರು ಖರೀದಿಸಿದ್ದಾರೆ.</p><p>ಈಗ ಖರೀದಿಸಿರುವ ಹೊಸ ಜಾಗ ರಾಮ ಮಂದಿರದ ಸನಿಹವೇ ಇದೆ. ಸುಮಾರು 54,454 ಚದರ ಅಡಿ ಜಾಗ ಇದಾಗಿದೆ. ಈ ಜಾಗದಲ್ಲಿ ಅಮಿತಾಭ್ ಅವರು ತಮ್ಮ ತಂದೆ ಹರಿವಂಶರಾಯ್ ಬಚ್ಚನ್ ಅವರ ಸ್ಮಾರಕವನ್ನು ನಿರ್ಮಿಸಲಿದ್ದಾರೆ ಎಂದು ನ್ಯೂಸ್ 18 ವೆಬ್ಸೈಟ್ ವರದಿ ಮಾಡಿದೆ.</p><p>ಜಾಗ ಖರೀದಿಗೆ ಸಂಬಂಧಿಸಿದಂತೆ ಎಲ್ಲ ಒಪ್ಪಂದಗಳು ಅಂತಿಮಗೊಂಡಿವೆ. ಶೀಘ್ರದಲ್ಲಿಯೇ ಸ್ಮಾರಕ ನಿರ್ಮಾಣವಾಗಲಿದೆ ಎಂದು ತಿಳಿಸಿದೆ.</p><p>ಅಯೋಧ್ಯೆಯ ಹವೇಲಿ ಅವಧ್ ಬಳಿ ಈ ಮೊದಲು ಮನೆ ಕಟ್ಟುವ ಸಲುವಾಗಿ ನಟ ಜಾಗ ಖರೀದಿಸಿದ್ದರು. ಹೊಸ ಜಾಗದಲ್ಲಿ ಸ್ಮಾರಕ ಹಾಗೂ ವಸ್ತು ಸಂಗ್ರಹಾಲಯವನ್ನು ಹರಿವಂಶರಾಯ್ ಬಚ್ಚನ್ ಟ್ರಸ್ಟ್ ನೋಡಿಕೊಳ್ಳಲಿದೆ ಎಂದು ತಿಳಿದು ಬಂದಿದೆ.</p><p>ಹರಿವಂಶರಾಯ್ ಬಚ್ಚನ್ ಅವರು ಹಿಂದಿ ಭಾಷೆಯ ಖ್ಯಾತ ಕವಿ, ಸಾಹಿತಿಯಾಗಿದ್ದರು. ನಟನೆ ಜೊತೆಗೆ ಹೂಡಿಕೆಯಲ್ಲಿ ಆಸಕ್ತಿ ಹೊಂದಿರುವ ನಟ ಅಮಿತಾಭ್ ಬಚ್ಚನ್ ಅವರು ಸುಮಾರು ₹3 ಸಾವಿರ ಕೋಟಿಗೂ ಅಧಿಕ ಸಂಪತ್ತನ್ನು ಹೊಂದಿದ್ದಾರೆ ಎಂದು ಹೇಳಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>