‘ಏ.1ರಂದು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತ್ಯುತ್ಸವ ನಡೆಯಲಿದ್ದು, ಅಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಿರುಚಿತ್ರಗಳ ಸರಣಿಗೆ ಚಾಲನೆ ನೀಡಲಿದ್ದಾರೆ. ಸಿದ್ಧಗಂಗಾ ಶ್ರೀಗಳು ಮತ್ತು ಬಸವಣ್ಣನವರ ಕುರಿತು ನಿರ್ಮಾಣ ಆಗಲಿರುವ ಈ ಸರಣಿಯಲ್ಲಿ 52 ಎಪಿಸೋಡ್ಗಳಿರಲಿದ್ದು, ಏಳು ಭಾಷೆಗಳಲ್ಲಿ ಇದು ಮೂಡಿಬರಲಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್ ಮತ್ತು ಸಂಸ್ಕೃತ ಭಾಷೆಯಲ್ಲಿ ನಿರ್ಮಾಣ ಆಗಲಿದೆ. ಅದಕ್ಕಾಗಿ ಏಳು ತಂಡಗಳಲ್ಲಿ ಸುಮಾರು 300ಕ್ಕೂ ಅಧಿಕ ತಂತ್ರಜ್ಞರು ಕೆಲಸ ಮಾಡಲಿದ್ದಾರೆ’ ಎಂದು ಹಂಸಲೇಖ ತಿಳಿಸಿದರು.