ಭಾನುವಾರ ತಡರಾತ್ರಿ ಟ್ವೀಟ್ ಮಾಡಿರುವ ಅಮಿತಾಭ್ ಅವರು, ಎರಡನೇ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರುವ ಜತೆಗೆ, ಈ ಚಿಕಿತ್ಸೆ ನೀಡಿದ ವೈದ್ಯ ಡಾ. ಹಿಮಾಂಶು ಮೆಹ್ತಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ‘ಶಸ್ತ್ರಚಿಕಿತ್ಸೆಗಳ ನಂತರ ಜೀವನವೇ ಬದಲಾಗಿರುವಂತಹ ಅನುಭವವಾಗಿದೆ‘ ಎಂದು ಟ್ವಿಟರ್ನಲ್ಲಿ ಉಲ್ಲೇಖಿಸಿದ್ದಾರೆ.