<p>ಬರಗೂರು ರಾಮಚಂದ್ರಪ್ಪ ನಿರ್ದೇಶನದ‘ಅಮೃತಮತಿ’ ಚಿತ್ರವು ಅಮೆರಿಕದ ಅಟ್ಲಾಂಟದಲ್ಲಿ ನಡೆಯುವ ಸ್ಪರ್ಧಾತ್ಮಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾಗಿದೆ.</p>.<p>ಜುಲೈ 29ರಿಂದ ಆಗಸ್ಟ್ 12ರವರೆಗೆ ಆನ್ಲೈನ್ ಮೂಲಕ ಈ ಚಿತ್ರೋತ್ಸವ ನಡೆಯಲಿದೆ. ಎಲ್ಲ ವಿಭಾಗಗಳ ಪ್ರಶಸ್ತಿ ಸ್ಪರ್ಧೆಗೆ ಚಿತ್ರವು ಆಯ್ಕೆಯಾಗಿದೆ ಎಂದು ನಿರ್ದೇಶಕ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.</p>.<p>ಆಸ್ಟ್ರಿಯಾ ದೇಶದ ಅಂತರರಾಷ್ಟ್ರೀಯಚಲನಚಿತ್ರೋತ್ಸವಕ್ಕೂ ಈ ಚಿತ್ರ ಆಯ್ಕೆಯಾಗಿದ್ದು, ಜುಲೈ 22ರಿಂದ ಆಗಸ್ಟ್ 5ರವರೆಗೆಆನ್ಲೈನ್ ಸ್ಕ್ರೀನಿಂಗ್ ಮೂಲಕ ನಡೆಯಲಿರುವಈ ಚಿತ್ರೋತ್ಸವದಲ್ಲಿ ಪ್ರದರ್ಶನವನ್ನು ಕಾಣಲಿದೆ.</p>.<p>13ನೇ ಶತಮಾನದ ಕನ್ನಡ ಕವಿ ಜನ್ನನಿಂದ ರಚಿತವಾದ ‘ಯಶೋಧರ ಚರಿತೆ’ ಕಾವ್ಯವನ್ನು ಈ ಚಿತ್ರ ಆಧರಿಸಿದೆ. ಈ ಕಾವ್ಯದಲ್ಲಿ ಬರುವಅಮೃತಮತಿಪ್ರಸಂಗವನ್ನು ಮರುಸೃಷ್ಟಿಸಿ ಮತ್ತು ಮರು ವ್ಯಾಖ್ಯಾನಕ್ಕೆ ಒಳಪಡಿಸಿದ್ದಾರೆ ಬರಗೂರು. ಚಿತ್ರಕಥೆ, ಸಂಭಾಷಣೆ ಹೊಸೆಯುವ ಜತೆಗೆ ಎರಡು ಗೀತೆಗಳನ್ನು ರಚಿಸಿದ್ದಾರೆ.</p>.<p>ಈ ಚಿತ್ರ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು.</p>.<p>ಅಮೃತಮತಿಪಾತ್ರದಲ್ಲಿ ಬಹುಭಾಷಾ ನಟಿ ಹರಿಪ್ರಿಯ ಮತ್ತು ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಹಾಗೂ ಅಷ್ಟಾವಂಕನಾಗಿ ತಿಲಕ್ ನಟಿಸಿದ್ದಾರೆ. ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ಸುಪ್ರಿಯಾ ರಾವ್, ವತ್ಸಲಾ ಮೋಹನ್, ಅಂಬರೀಶ್ ಸಾರಂಗಿ, ಭೂಮಿಕಾ ಲಕ್ಷ್ಮಿನಾರಾಯಣ ತಾರಾಗಣವಿದೆ.</p>.<p>ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಸಂಸ್ಥೆಯಡಿವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಛಾಯಾಗ್ರಹಣ ನಾಗರಾಜು ಆದವಾನಿ, ಸಂಗೀತ ನಿರ್ದೇಶನ ಶಮಿತಾ ಮಲ್ನಾಡ್, ಸಂಕಲನ ಸುರೇಶ್ ಅರಸು ಅವರದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬರಗೂರು ರಾಮಚಂದ್ರಪ್ಪ ನಿರ್ದೇಶನದ‘ಅಮೃತಮತಿ’ ಚಿತ್ರವು ಅಮೆರಿಕದ ಅಟ್ಲಾಂಟದಲ್ಲಿ ನಡೆಯುವ ಸ್ಪರ್ಧಾತ್ಮಕ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾಗಿದೆ.</p>.<p>ಜುಲೈ 29ರಿಂದ ಆಗಸ್ಟ್ 12ರವರೆಗೆ ಆನ್ಲೈನ್ ಮೂಲಕ ಈ ಚಿತ್ರೋತ್ಸವ ನಡೆಯಲಿದೆ. ಎಲ್ಲ ವಿಭಾಗಗಳ ಪ್ರಶಸ್ತಿ ಸ್ಪರ್ಧೆಗೆ ಚಿತ್ರವು ಆಯ್ಕೆಯಾಗಿದೆ ಎಂದು ನಿರ್ದೇಶಕ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.</p>.<p>ಆಸ್ಟ್ರಿಯಾ ದೇಶದ ಅಂತರರಾಷ್ಟ್ರೀಯಚಲನಚಿತ್ರೋತ್ಸವಕ್ಕೂ ಈ ಚಿತ್ರ ಆಯ್ಕೆಯಾಗಿದ್ದು, ಜುಲೈ 22ರಿಂದ ಆಗಸ್ಟ್ 5ರವರೆಗೆಆನ್ಲೈನ್ ಸ್ಕ್ರೀನಿಂಗ್ ಮೂಲಕ ನಡೆಯಲಿರುವಈ ಚಿತ್ರೋತ್ಸವದಲ್ಲಿ ಪ್ರದರ್ಶನವನ್ನು ಕಾಣಲಿದೆ.</p>.<p>13ನೇ ಶತಮಾನದ ಕನ್ನಡ ಕವಿ ಜನ್ನನಿಂದ ರಚಿತವಾದ ‘ಯಶೋಧರ ಚರಿತೆ’ ಕಾವ್ಯವನ್ನು ಈ ಚಿತ್ರ ಆಧರಿಸಿದೆ. ಈ ಕಾವ್ಯದಲ್ಲಿ ಬರುವಅಮೃತಮತಿಪ್ರಸಂಗವನ್ನು ಮರುಸೃಷ್ಟಿಸಿ ಮತ್ತು ಮರು ವ್ಯಾಖ್ಯಾನಕ್ಕೆ ಒಳಪಡಿಸಿದ್ದಾರೆ ಬರಗೂರು. ಚಿತ್ರಕಥೆ, ಸಂಭಾಷಣೆ ಹೊಸೆಯುವ ಜತೆಗೆ ಎರಡು ಗೀತೆಗಳನ್ನು ರಚಿಸಿದ್ದಾರೆ.</p>.<p>ಈ ಚಿತ್ರ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗದ ಪ್ರದರ್ಶನಕ್ಕೆ ಆಯ್ಕೆಯಾಗಿತ್ತು.</p>.<p>ಅಮೃತಮತಿಪಾತ್ರದಲ್ಲಿ ಬಹುಭಾಷಾ ನಟಿ ಹರಿಪ್ರಿಯ ಮತ್ತು ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಹಾಗೂ ಅಷ್ಟಾವಂಕನಾಗಿ ತಿಲಕ್ ನಟಿಸಿದ್ದಾರೆ. ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ಸುಪ್ರಿಯಾ ರಾವ್, ವತ್ಸಲಾ ಮೋಹನ್, ಅಂಬರೀಶ್ ಸಾರಂಗಿ, ಭೂಮಿಕಾ ಲಕ್ಷ್ಮಿನಾರಾಯಣ ತಾರಾಗಣವಿದೆ.</p>.<p>ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಸಂಸ್ಥೆಯಡಿವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಛಾಯಾಗ್ರಹಣ ನಾಗರಾಜು ಆದವಾನಿ, ಸಂಗೀತ ನಿರ್ದೇಶನ ಶಮಿತಾ ಮಲ್ನಾಡ್, ಸಂಕಲನ ಸುರೇಶ್ ಅರಸು ಅವರದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>