ಈ ಕುರಿತು ಟ್ವೀಟ್ ಮಾಡಿರುವ ಅಮೂಲ್ಯ, ‘ನಮ್ಮ ಕಡೆಯಿಂದ ಅಳಿಲು ಸೇವೆ ಸಲ್ಲಿಸಿರುವ ಖುಷಿ ನೀಡಿದೆ. ಇಂತಹ ಒಂದು ಉತ್ತಮ ಕಾರ್ಯಕ್ಕೆ ಬೆಂಬಲ ನೀಡಿ, ಪ್ರೋತ್ಸಾಹ ನೀಡುತ್ತಿರುವ ದರ್ಶನ್ ಅವರಿಗೆ ಧನ್ಯವಾದಗಳು’ ಎಂದು ತಿಳಿಸಿದ್ದಾರೆ. ಟ್ವೀಟ್ ಜೊತೆಗೆ ಕರ್ನಾಟಕದ ಮೃಗಾಲಯ ಪ್ರಾಧಿಕಾರ ನೀಡಿರುವ ಪ್ರಮಾಣ ಪತ್ರವನ್ನು ಅಮೂಲ್ಯ ಪೋಸ್ಟ್ ಮಾಡಿದ್ದಾರೆ. ಮುಂದಿನ ಒಂದು ವರ್ಷದವರೆಗೆ ಆ ಪ್ರಾಣಿಯ ನಿರ್ವಹಣಾ ವೆಚ್ಚವನ್ನು ನಟಿ ಅಮೂಲ್ಯ ಭರಿಸಿದ್ದಾರೆ.