<p>ದೀರ್ಘಕಾಲದ ಬಳಿಕ ಅನಂತನಾಗ್ ಮತ್ತು ಲಕ್ಷ್ಮಿ ತೆರೆಯ ಮೇಲೆ ಒಂದಾಗಿದ್ದಾರೆ. ‘ರಾಜದ್ರೋಹಿ’ ಚಿತ್ರದಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಮರ್ಥರಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಧನುಷ್ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಹದೇವಯ್ಯ ನಿರ್ಮಾಣ ಮಾಡಿದ್ದಾರೆ.</p>.<p>‘ಅಪ್ಪ-ಅಮ್ಮ ಕಣ್ಣಿನ ಮುಂದೆ ಇದ್ದರೂ ಗುರುತಿಸಲಾಗದಂಥ ಮಕ್ಕಳ ಸ್ಥಿತಿ ಒಂದೆಡೆ, ಅದೇ ರೀತಿ ತಂದೆ-ತಾಯಿಗೆ ಇವರೇ ತಮ್ಮ ಮಕ್ಕಳೆಂದು ತಿಳಿದಿರುವುದಿಲ್ಲ. ಇಂಥ ಸಂದರ್ಭವನ್ನು ಒಂದು ಕುಟುಂಬ ಹೇಗೆ ಎದುರಿಸುತ್ತದೆ ಎಂಬುದೇ ಚಿತ್ರಕಥೆ. ಇದೇ ರೀತಿ ಬೇರೆ ಬೇರೆ ಅವಘಡಗಳು ಸಂಭವಿಸಿದಾಗ ಚಿತ್ರ ಹೇಗೆಲ್ಲ ತಿರುವುಗಳು ಪಡೆದುಕೊಳ್ಳುತ್ತದೆ ಎಂಬುದನ್ನು ಚಿತ್ರದಲ್ಲಿಯೇ ನೋಡಬೇಕು’ ಎನ್ನುತ್ತಾರೆ ನಿರ್ದೇಶಕರು. </p>.<p>ಅಭಿಜಿತ್, ಒರಟ ಪ್ರಶಾಂತ್, ನೀನಾಸಂ ಅಶ್ವಥ್, ಅಚ್ಯುತಕುಮಾರ್, ಕುರಿಬಾಂಡ್ ಸುನಿಲ್, ಬ್ಯಾಂಕ್ ಜನಾರ್ದನ್ ಮುಂತಾದವರು ನಟಿಸಿದ್ದಾರೆ. ರಘು ತುಮಕೂರು ಸಂಗೀತ, ಸತೀಶ್ ಮನೋಹರ್-ವೀನಸ್ಮೂರ್ತಿ-ನಾಗರಾಜ್ ಛಾಯಾಚಿತ್ರಗ್ರಹಣ, ಕುಮಾರ್ ಕೊಟಿಕೊಪ್ಪ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೀರ್ಘಕಾಲದ ಬಳಿಕ ಅನಂತನಾಗ್ ಮತ್ತು ಲಕ್ಷ್ಮಿ ತೆರೆಯ ಮೇಲೆ ಒಂದಾಗಿದ್ದಾರೆ. ‘ರಾಜದ್ರೋಹಿ’ ಚಿತ್ರದಲ್ಲಿ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸಮರ್ಥರಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಧನುಷ್ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಹದೇವಯ್ಯ ನಿರ್ಮಾಣ ಮಾಡಿದ್ದಾರೆ.</p>.<p>‘ಅಪ್ಪ-ಅಮ್ಮ ಕಣ್ಣಿನ ಮುಂದೆ ಇದ್ದರೂ ಗುರುತಿಸಲಾಗದಂಥ ಮಕ್ಕಳ ಸ್ಥಿತಿ ಒಂದೆಡೆ, ಅದೇ ರೀತಿ ತಂದೆ-ತಾಯಿಗೆ ಇವರೇ ತಮ್ಮ ಮಕ್ಕಳೆಂದು ತಿಳಿದಿರುವುದಿಲ್ಲ. ಇಂಥ ಸಂದರ್ಭವನ್ನು ಒಂದು ಕುಟುಂಬ ಹೇಗೆ ಎದುರಿಸುತ್ತದೆ ಎಂಬುದೇ ಚಿತ್ರಕಥೆ. ಇದೇ ರೀತಿ ಬೇರೆ ಬೇರೆ ಅವಘಡಗಳು ಸಂಭವಿಸಿದಾಗ ಚಿತ್ರ ಹೇಗೆಲ್ಲ ತಿರುವುಗಳು ಪಡೆದುಕೊಳ್ಳುತ್ತದೆ ಎಂಬುದನ್ನು ಚಿತ್ರದಲ್ಲಿಯೇ ನೋಡಬೇಕು’ ಎನ್ನುತ್ತಾರೆ ನಿರ್ದೇಶಕರು. </p>.<p>ಅಭಿಜಿತ್, ಒರಟ ಪ್ರಶಾಂತ್, ನೀನಾಸಂ ಅಶ್ವಥ್, ಅಚ್ಯುತಕುಮಾರ್, ಕುರಿಬಾಂಡ್ ಸುನಿಲ್, ಬ್ಯಾಂಕ್ ಜನಾರ್ದನ್ ಮುಂತಾದವರು ನಟಿಸಿದ್ದಾರೆ. ರಘು ತುಮಕೂರು ಸಂಗೀತ, ಸತೀಶ್ ಮನೋಹರ್-ವೀನಸ್ಮೂರ್ತಿ-ನಾಗರಾಜ್ ಛಾಯಾಚಿತ್ರಗ್ರಹಣ, ಕುಮಾರ್ ಕೊಟಿಕೊಪ್ಪ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>