<p>‘ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಸಿನಿಮಾ ಖ್ಯಾತಿಯ ನಟ ರಿಷಿ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ‘ಮಂಗಳಾಪುರಂ’ ಹಾಗೂ ‘ಜವರ’ ಸಿನಿಮಾ ಘೋಷಣೆಯಾಗಿತ್ತು. ಇದೀಗ ನಟ ಪ್ರಕಾಶ್ ಬೆಳವಾಡಿಯವರ ಜೊತೆ ಲಾಂಗ್ಡ್ರೈವ್ಗೆ ಹೊರಡಲು ಸಜ್ಜಾಗಿರುವ ರಿಷಿ ‘ಅನಂತ ಪದ್ಮನಾಭ’ನಾಗಿದ್ದಾರೆ. </p>.<p>‘ಅಧ್ಯಕ್ಷ’, ‘ವಿಕ್ಟರಿ’, ‘ರನ್ನ’, ‘ಪೊಗರು’, ‘ತೀರ್ಥರೂಪ ತಂದೆಯವರಿಗೆ’, ‘ಅಣ್ಣ ಫ್ರಂ ಮೆಕ್ಸಿಕೋ’ ಸಿನಿಮಾಗಳಿಗೆ ಸಂಭಾಷಣೆ ಬರೆದಿರುವ ಪ್ರಶಾಂತ್ ರಾಜಪ್ಪ ನಿರ್ದೇಶನ ಮಾಡಿದ್ದಾರೆ. ‘ರಿಷಿ ನಾಯಕನಾಗಿ ಕಾಣಿಸಿಕೊಳ್ಳಲಿರುವ ‘ಅನಂತ ಪದ್ಮನಾಭ’ ಸಿನಿಮಾದಲ್ಲಿ ಪ್ರಕಾಶ್ ಬೆಳವಾಡಿ ಅವರದ್ದು ವಿಶೇಷ ಪಾತ್ರ. ನಾಯಕಿಯಾಗಿ ಅಂಜಲಿ ಅನೀಶ್ ಬಣ್ಣಹಚ್ಚಿದ್ದಾರೆ’ ಎಂದಿದೆ ಚಿತ್ರತಂಡ. </p>.<p>‘ಎರಡು ಪೀಳಿಗೆಯ ಬಗ್ಗೆ ಇರುವ ಈ ಸಿನಿಮಾ ಕಥೆಯಲ್ಲಿ ಜೀವನದ ಮೌಲ್ಯಗಳ ಬಗ್ಗೆ ಉಲ್ಲೇಖವಿರಲಿದೆ. ಕಾಮಿಡಿ ಡ್ರಾಮಾ ಜಾನರ್ನಲ್ಲಿರುವ ಈ ಸಿನಿಮಾದ ನಿರ್ಮಾಪಕ ಅಮ್ರೇಜ್ ಸೂರ್ಯವಂಶಿ. ಚಿತ್ರದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಎರಡು ಹಾಡುಗಳ ಚಿತ್ರೀಕರಣ ಬಾಕಿಯಿದೆ ಎಂದಿದೆ. </p>.<p>‘ಅನಂತ ಪದ್ಮನಾಭ’ ಸಿನಿಮಾವನ್ನು ಬೆಂಗಳೂರು, ಸಾಗರ, ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಸಿನಿಮಾಗೆ ಅಶ್ವಿನ್ ಪಿ. ಕುಮಾರ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಚಿತ್ರಗ್ರಹಣವಿದೆ. ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಆಪರೇಷನ್ ಅಲಮೇಲಮ್ಮ’, ‘ಕವಲುದಾರಿ’ ಸಿನಿಮಾ ಖ್ಯಾತಿಯ ನಟ ರಿಷಿ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ‘ಮಂಗಳಾಪುರಂ’ ಹಾಗೂ ‘ಜವರ’ ಸಿನಿಮಾ ಘೋಷಣೆಯಾಗಿತ್ತು. ಇದೀಗ ನಟ ಪ್ರಕಾಶ್ ಬೆಳವಾಡಿಯವರ ಜೊತೆ ಲಾಂಗ್ಡ್ರೈವ್ಗೆ ಹೊರಡಲು ಸಜ್ಜಾಗಿರುವ ರಿಷಿ ‘ಅನಂತ ಪದ್ಮನಾಭ’ನಾಗಿದ್ದಾರೆ. </p>.<p>‘ಅಧ್ಯಕ್ಷ’, ‘ವಿಕ್ಟರಿ’, ‘ರನ್ನ’, ‘ಪೊಗರು’, ‘ತೀರ್ಥರೂಪ ತಂದೆಯವರಿಗೆ’, ‘ಅಣ್ಣ ಫ್ರಂ ಮೆಕ್ಸಿಕೋ’ ಸಿನಿಮಾಗಳಿಗೆ ಸಂಭಾಷಣೆ ಬರೆದಿರುವ ಪ್ರಶಾಂತ್ ರಾಜಪ್ಪ ನಿರ್ದೇಶನ ಮಾಡಿದ್ದಾರೆ. ‘ರಿಷಿ ನಾಯಕನಾಗಿ ಕಾಣಿಸಿಕೊಳ್ಳಲಿರುವ ‘ಅನಂತ ಪದ್ಮನಾಭ’ ಸಿನಿಮಾದಲ್ಲಿ ಪ್ರಕಾಶ್ ಬೆಳವಾಡಿ ಅವರದ್ದು ವಿಶೇಷ ಪಾತ್ರ. ನಾಯಕಿಯಾಗಿ ಅಂಜಲಿ ಅನೀಶ್ ಬಣ್ಣಹಚ್ಚಿದ್ದಾರೆ’ ಎಂದಿದೆ ಚಿತ್ರತಂಡ. </p>.<p>‘ಎರಡು ಪೀಳಿಗೆಯ ಬಗ್ಗೆ ಇರುವ ಈ ಸಿನಿಮಾ ಕಥೆಯಲ್ಲಿ ಜೀವನದ ಮೌಲ್ಯಗಳ ಬಗ್ಗೆ ಉಲ್ಲೇಖವಿರಲಿದೆ. ಕಾಮಿಡಿ ಡ್ರಾಮಾ ಜಾನರ್ನಲ್ಲಿರುವ ಈ ಸಿನಿಮಾದ ನಿರ್ಮಾಪಕ ಅಮ್ರೇಜ್ ಸೂರ್ಯವಂಶಿ. ಚಿತ್ರದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು, ಎರಡು ಹಾಡುಗಳ ಚಿತ್ರೀಕರಣ ಬಾಕಿಯಿದೆ ಎಂದಿದೆ. </p>.<p>‘ಅನಂತ ಪದ್ಮನಾಭ’ ಸಿನಿಮಾವನ್ನು ಬೆಂಗಳೂರು, ಸಾಗರ, ತೀರ್ಥಹಳ್ಳಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಸಿನಿಮಾಗೆ ಅಶ್ವಿನ್ ಪಿ. ಕುಮಾರ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಚಿತ್ರಗ್ರಹಣವಿದೆ. ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>