<p>ವಿನಯ್ ರಾಜ್ಕುಮಾರ್, ಅದಿತಿ ಪ್ರಭುದೇವ ಹಾಗೂ ನಿಶಾ ರವಿಕೃಷ್ಣನ್ ನಟಿಸಿರುವ, ಕೀರ್ತಿ ಕೃಷ್ಣ ನಿರ್ದೇಶನದ ‘ಅಂದೊಂದಿತ್ತು ಕಾಲ’ ಸಿನಿಮಾ ಆ.29ರಂದು ಬಿಡುಗಡೆಯಾಗಲಿದೆ. </p>.<p>90ರ ಕಾಲಘಟ್ಟದ ಪ್ರೇಮಕಥೆಯನ್ನು ಹೊಂದಿರುವ ಈ ಸಿನಿಮಾವನ್ನು ಭುವನ್ ಸಿನಿಮಾಸ್ ಮೂಲಕ ಭುವನ್ ಸುರೇಶ್ ನಿರ್ಮಾಣ ಮಾಡಿದ್ದಾರೆ. ಧನಂಜಯ್ ರಂಜನ್ ಸಾಹಿತ್ಯದಲ್ಲಿ ಮೂಡಿಬಂದಿರುವ ಸಿನಿಮಾದ ‘ಮುಂಗಾರು ಮಳೆಯಲ್ಲಿ...’ ಹಾಡು ಈಗಾಗಲೇ ಪ್ರೇಕ್ಷಕರನ್ನು ಸೆಳೆದಿದ್ದು, ಸಿದ್ ಶ್ರೀರಾಮ್ ದನಿಗೆ ಮನಸೋತಿದ್ದಾರೆ. </p>.<p>ಚಿತ್ರದಲ್ಲಿ ವಿನಯ್ ರಾಜ್ಕುಮಾರ್ ಎರಡು ಶೇಡ್ಗಳಲ್ಲಿ ಕಾಣಿಸಿಕೊಳ್ಳಲಿದ್ದು, ಇದೊಬ್ಬ ನಿರ್ದೇಶಕನ ಜೀವನದ ಕಥೆಯಾಗಿದೆ ಎಂದಿದೆ ಚಿತ್ರತಂಡ. ಅತಿಥಿ ಪಾತ್ರದಲ್ಲಿ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅಭಿನಯಿಸಿದ್ದು, ಅರುಣಾ ಬಾಲರಾಜ್, ಜಗಪ್ಪ ಸೇರಿದಂತೆ ಅನೇಕ ಕಲಾವಿದರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಕಥೆ-ಚಿತ್ರಕಥೆಯನ್ನು ಕೀರ್ತಿ ಕೃಷ್ಣ ಅವರೇ ಬರೆದಿದ್ದು, ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರದ ಚಿತ್ರೀಕರಣ ನಡೆದಿದೆ. ಅಭಿಷೇಕ್ ಕಾಸರಗೋಡು ಛಾಯಾಚಿತ್ರಗ್ರಹಣ, ವಿ.ರಾಘವೇಂದ್ರ ಸಂಗೀತ, ಎ.ಆರ್.ಕೃಷ್ಣ, ಸುರೇಶ್ ಆರ್ಮುಗಂ ಸಂಕಲನ, ರವಿವರ್ಮ ಸಾಹಸ, ರಘು ಆರ್.ಜೆ. ನೃತ್ಯ ನಿರ್ದೇಶನ ಚಿತ್ರಕ್ಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿನಯ್ ರಾಜ್ಕುಮಾರ್, ಅದಿತಿ ಪ್ರಭುದೇವ ಹಾಗೂ ನಿಶಾ ರವಿಕೃಷ್ಣನ್ ನಟಿಸಿರುವ, ಕೀರ್ತಿ ಕೃಷ್ಣ ನಿರ್ದೇಶನದ ‘ಅಂದೊಂದಿತ್ತು ಕಾಲ’ ಸಿನಿಮಾ ಆ.29ರಂದು ಬಿಡುಗಡೆಯಾಗಲಿದೆ. </p>.<p>90ರ ಕಾಲಘಟ್ಟದ ಪ್ರೇಮಕಥೆಯನ್ನು ಹೊಂದಿರುವ ಈ ಸಿನಿಮಾವನ್ನು ಭುವನ್ ಸಿನಿಮಾಸ್ ಮೂಲಕ ಭುವನ್ ಸುರೇಶ್ ನಿರ್ಮಾಣ ಮಾಡಿದ್ದಾರೆ. ಧನಂಜಯ್ ರಂಜನ್ ಸಾಹಿತ್ಯದಲ್ಲಿ ಮೂಡಿಬಂದಿರುವ ಸಿನಿಮಾದ ‘ಮುಂಗಾರು ಮಳೆಯಲ್ಲಿ...’ ಹಾಡು ಈಗಾಗಲೇ ಪ್ರೇಕ್ಷಕರನ್ನು ಸೆಳೆದಿದ್ದು, ಸಿದ್ ಶ್ರೀರಾಮ್ ದನಿಗೆ ಮನಸೋತಿದ್ದಾರೆ. </p>.<p>ಚಿತ್ರದಲ್ಲಿ ವಿನಯ್ ರಾಜ್ಕುಮಾರ್ ಎರಡು ಶೇಡ್ಗಳಲ್ಲಿ ಕಾಣಿಸಿಕೊಳ್ಳಲಿದ್ದು, ಇದೊಬ್ಬ ನಿರ್ದೇಶಕನ ಜೀವನದ ಕಥೆಯಾಗಿದೆ ಎಂದಿದೆ ಚಿತ್ರತಂಡ. ಅತಿಥಿ ಪಾತ್ರದಲ್ಲಿ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅಭಿನಯಿಸಿದ್ದು, ಅರುಣಾ ಬಾಲರಾಜ್, ಜಗಪ್ಪ ಸೇರಿದಂತೆ ಅನೇಕ ಕಲಾವಿದರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಕಥೆ-ಚಿತ್ರಕಥೆಯನ್ನು ಕೀರ್ತಿ ಕೃಷ್ಣ ಅವರೇ ಬರೆದಿದ್ದು, ಬೆಂಗಳೂರು, ತೀರ್ಥಹಳ್ಳಿ ಮುಂತಾದ ಕಡೆ ಚಿತ್ರದ ಚಿತ್ರೀಕರಣ ನಡೆದಿದೆ. ಅಭಿಷೇಕ್ ಕಾಸರಗೋಡು ಛಾಯಾಚಿತ್ರಗ್ರಹಣ, ವಿ.ರಾಘವೇಂದ್ರ ಸಂಗೀತ, ಎ.ಆರ್.ಕೃಷ್ಣ, ಸುರೇಶ್ ಆರ್ಮುಗಂ ಸಂಕಲನ, ರವಿವರ್ಮ ಸಾಹಸ, ರಘು ಆರ್.ಜೆ. ನೃತ್ಯ ನಿರ್ದೇಶನ ಚಿತ್ರಕ್ಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>