<p>‘ಅನಿರೀಕ್ಷಿತ’ ಎಂಬ ಶೀರ್ಷಿಕೆಯ ಎರಡೇ ಪಾತ್ರಗಳಿರುವ ವಿಭಿನ್ನ ಸಿನಿಮಾವೊಂದು ತೆರೆಯ ಮೇಲೆ ಬರಲು ಸಿದ್ಧವಾಗಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರಕ್ಕೆ ಮಿಮಿಕ್ರಿ ದಯಾನಂದ್ ಅವರ ಪ್ರಧಾನ ಪಾತ್ರ ಹಾಗೂ ನಿರ್ದೇಶನವಿದೆ. ಅದೂ ಅವರಿಗೆ ಅನಿರೀಕ್ಷಿತವೇ ಅಂತೆ. ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಮಂಗಳೂರು ಹಾಗೂ ಕೇರಳದ ಕೆಲವು ಪ್ರದೇಶಗಳ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.<br /><br />ಸಮುದ್ರ ತೀರದ ಮನೆಯೊಂದರಲ್ಲಿ ಹೆಚ್ಚು ದಿನದ ಚಿತ್ರೀಕರಣ ನಡೆದಿತ್ತು. ಲಾಕ್ಡೌನ್ ಸಮಯವಾದುದ್ದರಿಂದ ಯಾರು ಆಚೆ ಹೋಗುವಂತಿರಲಿಲ್ಲ. ಅಡುಗೆ ಕೆಲಸದಿಂದ ಹಿಡಿದು ಎಲ್ಲವನ್ನೂ ನಾವೇ ಮಾಡಿಕೊಂಡೆವು. ಕೇರಳದವರೇ ಆದ ಭಾಮ ಅರುಣ್ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದ ದಯಾನಂದ್, ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಚಿತ್ರ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.</p>.<p>ಎಸ್.ಕೆ.ಟಾಕೀಸ್ ಲಾಂಛನದಲ್ಲಿ ಶಾಂತಕುಮಾರ್ ನಿರ್ಮಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸಂತೋಷ್ ಕೊಡಂಕೇರಿ, ರಘು ಎಸ್. ಹಾಗೂ ಮಿಮಿಕ್ರಿ ದಯಾನಂದ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಅನಿರೀಕ್ಷಿತ’ ಎಂಬ ಶೀರ್ಷಿಕೆಯ ಎರಡೇ ಪಾತ್ರಗಳಿರುವ ವಿಭಿನ್ನ ಸಿನಿಮಾವೊಂದು ತೆರೆಯ ಮೇಲೆ ಬರಲು ಸಿದ್ಧವಾಗಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿರುವ ಈ ಚಿತ್ರಕ್ಕೆ ಮಿಮಿಕ್ರಿ ದಯಾನಂದ್ ಅವರ ಪ್ರಧಾನ ಪಾತ್ರ ಹಾಗೂ ನಿರ್ದೇಶನವಿದೆ. ಅದೂ ಅವರಿಗೆ ಅನಿರೀಕ್ಷಿತವೇ ಅಂತೆ. ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಆಗಿದೆ. ಮಂಗಳೂರು ಹಾಗೂ ಕೇರಳದ ಕೆಲವು ಪ್ರದೇಶಗಳ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.<br /><br />ಸಮುದ್ರ ತೀರದ ಮನೆಯೊಂದರಲ್ಲಿ ಹೆಚ್ಚು ದಿನದ ಚಿತ್ರೀಕರಣ ನಡೆದಿತ್ತು. ಲಾಕ್ಡೌನ್ ಸಮಯವಾದುದ್ದರಿಂದ ಯಾರು ಆಚೆ ಹೋಗುವಂತಿರಲಿಲ್ಲ. ಅಡುಗೆ ಕೆಲಸದಿಂದ ಹಿಡಿದು ಎಲ್ಲವನ್ನೂ ನಾವೇ ಮಾಡಿಕೊಂಡೆವು. ಕೇರಳದವರೇ ಆದ ಭಾಮ ಅರುಣ್ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದ ದಯಾನಂದ್, ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಚಿತ್ರ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.</p>.<p>ಎಸ್.ಕೆ.ಟಾಕೀಸ್ ಲಾಂಛನದಲ್ಲಿ ಶಾಂತಕುಮಾರ್ ನಿರ್ಮಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸಂತೋಷ್ ಕೊಡಂಕೇರಿ, ರಘು ಎಸ್. ಹಾಗೂ ಮಿಮಿಕ್ರಿ ದಯಾನಂದ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>