ತಮಿಳಿನ ನಿರ್ದೇಶಕ ಮುರುಗದಾಸ್ ಅವರು ಈ ಹಿಂದೆ ತೆಲುಗಿನ ಚಿರಂಜೀವಿ ಮತ್ತು ಮಹೇಶ್ ಬಾಬು ಅವರಿಗೆ ಆ್ಯಕ್ಷನ್ ಕಟ್ ಹೇಳಿದ್ದರು. ಈಗ ಅಲ್ಲು ಅರ್ಜುನ್ ಜೊತೆ ಸಿನಿಮಾ ಮಾಡುವ ಇಂಗಿತ ಹೊಂದಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಮುರುಗದಾಸ್ ನಿರ್ದೇಶನದ ದರ್ಬಾರ್ ಸೋಲು ಕಂಡಿರುವುದರಿಂದ, ಅವರೊಂದಿಗೆ ಸಿನಿಮಾ ಮಾಡಲು ಅಲ್ಲು ಅರ್ಜುನ್ ಒಪ್ಪುದಿಲ್ಲ ಎಂದೇ ಅನೇಕರು ಊಹಿಸಿದ್ದರು. ಆದರೆ, ಅದ್ಯಾವುದನ್ನು ಲೆಕ್ಕಿಸದ ಅಲ್ಲು,ಪೂರ್ಣ ಕಥೆ ಹೇಳುವಂತೆ ಕೇಳಿದ್ದಾರೆ.