ಈ ಚಿತ್ರ ಕನ್ನಡ ಸೇರಿದಂತೆ ತಮಿಳು, ತೆಲುಗು ಭಾಷೆಯಲ್ಲಿಯೂ ತೆರೆ ಕಾಣಲಿದೆ. ಚಿತ್ರದ ಮೂರು ಹಾಡುಗಳಿಗೆ ಶ್ರೀಧರ್ ಕಶ್ಯಪ್ ಸಂಗೀತ ಸಂಯೋಜಿಸಿದ್ದಾರೆ. ಎ.ಆರ್. ನಿರಂಜನ್ ಬಾಬು ಅವರ ಛಾಯಾಗ್ರಹಣವಿದೆ. ಅರವಿಂದ್ ಕುಮಾರ್ ಗೌಡ ಬಂಡವಾಳ ಹೂಡಿದ್ದಾರೆ. ವಿಜಯ್ ಶಂಕರ್, ಅರವಿಂದ್ ಕುಮಾರ್ ಗೌಡ, ಕೃಷ್ಣ ಹನಗಿ, ಶುಭರಕ್ಷ, ಚೈತ್ರಾ ಶೆಟ್ಟಿ, ರಂಗಸ್ವಾಮಿ, ಹರಿಚಂದ್ರ ತಾರಾಗಣದಲ್ಲಿದ್ದಾರೆ. ಇದೇ ವೇಳೆ ಚಿತ್ರದ ಆಡಿಯೊ ಮತ್ತು ಟ್ರೇಲರ್ ಅನ್ನು ಬಿಡುಗಡೆ ಮಾಡಲಾಯಿತು.