<p>ಗ್ರಾಮೀಣ ಸೊಗಡಿನ ಹಾಸ್ಯಮಯ ಕಥಾಹಂದರ ಹೊಂದಿರುವ ‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಯುವ ರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.</p><p>ಜೆ.ವಿ.ಆರ್ ದೀಪು ನಿರ್ದೇಶನದ ಚಿತ್ರವಿದು.‘ಫ್ರೆಂಚ್ ಬಿರಿಯಾನಿ’ ಖ್ಯಾತಿಯ ಮಹಾಂತೇಶ್ ಹಿರೇಮಠಗೆ ರಶ್ಮಿತ ಆರ್. ಗೌಡ ಜೋಡಿಯಾಗಿದ್ದಾರೆ.</p><p>‘ಲೂಸಿಯಾ ಪವನ್ ಕುಮಾರ್ ಅವರ ಬಳಿ ಕೆಲಸ ಮಾಡಿದ್ದೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಚಿತ್ರದ ಟೀಸರ್ ಹಾಗೂ ಹಾಡುಗಳು ಈಗಾಗಲೇ ಜನಮೆಚ್ಚಿಗೆ ಗಳಿಸಿವೆ. ಸೆಪ್ಟೆಂಬರ್ 19ರಂದು ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕರು.</p><p>‘ನಾನು ಜನರಿಗೆ ಪರಿಚಯವಾಗಿದ್ದೆ ಪುನೀತ್ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರದ ಮೂಲಕ. ಅವರ ಕುಟುಂಬದ ಯುವ ರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಇದೊಂದು ಹಾಸ್ಯಮಯ ಕಥೆ ಆಧಾರಿತ ಚಿತ್ರ’ ಎಂದರು ಮಹಾಂತೇಶ್ ಹಿರೇಮಠ.</p><p>ರಾಜೇಶ್ ಗೌಡ ಬಂಡವಾಳ ಹೂಡಿದ್ದಾರೆ. ಗುರುಪ್ರಸಾದ್ ನರ್ನಾಡ್ ಛಾಯಾಚಿತ್ರಗ್ರಹಣ, ಪ್ರವೀಣ್ -ಪ್ರದೀಪ್ ಸಂಗೀತ, ಸುನೀಲ್ ಕಶ್ಯಪ್ ಸಂಕಲನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗ್ರಾಮೀಣ ಸೊಗಡಿನ ಹಾಸ್ಯಮಯ ಕಥಾಹಂದರ ಹೊಂದಿರುವ ‘ಅರಸಯ್ಯನ ಪ್ರೇಮ ಪ್ರಸಂಗ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ಯುವ ರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.</p><p>ಜೆ.ವಿ.ಆರ್ ದೀಪು ನಿರ್ದೇಶನದ ಚಿತ್ರವಿದು.‘ಫ್ರೆಂಚ್ ಬಿರಿಯಾನಿ’ ಖ್ಯಾತಿಯ ಮಹಾಂತೇಶ್ ಹಿರೇಮಠಗೆ ರಶ್ಮಿತ ಆರ್. ಗೌಡ ಜೋಡಿಯಾಗಿದ್ದಾರೆ.</p><p>‘ಲೂಸಿಯಾ ಪವನ್ ಕುಮಾರ್ ಅವರ ಬಳಿ ಕೆಲಸ ಮಾಡಿದ್ದೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಚಿತ್ರದ ಟೀಸರ್ ಹಾಗೂ ಹಾಡುಗಳು ಈಗಾಗಲೇ ಜನಮೆಚ್ಚಿಗೆ ಗಳಿಸಿವೆ. ಸೆಪ್ಟೆಂಬರ್ 19ರಂದು ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ದೇಶಕರು.</p><p>‘ನಾನು ಜನರಿಗೆ ಪರಿಚಯವಾಗಿದ್ದೆ ಪುನೀತ್ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರದ ಮೂಲಕ. ಅವರ ಕುಟುಂಬದ ಯುವ ರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಇದೊಂದು ಹಾಸ್ಯಮಯ ಕಥೆ ಆಧಾರಿತ ಚಿತ್ರ’ ಎಂದರು ಮಹಾಂತೇಶ್ ಹಿರೇಮಠ.</p><p>ರಾಜೇಶ್ ಗೌಡ ಬಂಡವಾಳ ಹೂಡಿದ್ದಾರೆ. ಗುರುಪ್ರಸಾದ್ ನರ್ನಾಡ್ ಛಾಯಾಚಿತ್ರಗ್ರಹಣ, ಪ್ರವೀಣ್ -ಪ್ರದೀಪ್ ಸಂಗೀತ, ಸುನೀಲ್ ಕಶ್ಯಪ್ ಸಂಕಲನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>