<p><strong>ಬೆಂಗಳೂರು</strong>: ಕೆಜಿಎಫ್ ಚಿತ್ರದಲ್ಲಿ ಅಮ್ಮನ ಪಾತ್ರದ ಮೂಲಕ ಸಿನಿ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ಸದ್ದಿಲ್ಲದೆ ಸಜ್ಜಾಗಿದ್ದಾರೆ.</p>.<p>ಇ.ಕೆ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಜಿ.ಗಂಗಾಧರ್ ಅವರ ನಿರ್ಮಾಣದ ಹೊಸ ಚಿತ್ರ ‘#ಮ್ಯೂಟ್’ ನಲ್ಲಿ ಅರ್ಚನಾ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜಿ.ಗಂಗಾಧರ್ ಅವರು ಮುಂಗಾರುಮಳೆ ಹಾಗೂ ಮೊಗ್ಗಿನಮನಸು ಚಿತ್ರಗಳಲ್ಲೂ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದರು. ಮುಂಗಾರುಮಳೆ 2 ಚಿತ್ರದಲ್ಲಿ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ಅವರ ನಿರ್ದೇಶನದಲ್ಲಿ ಈ ಸಿನಿಮಾ ಚಿತ್ರೀಕರಣವನ್ನೂ ಪೂರ್ಣಗೊಳಿಸಿದೆ.</p>.<p>ಚಿತ್ರವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಸಿನಿಮಾದ ಶೀರ್ಷಿಕೆಯನ್ನು ನಟ ರಿಷಿ ಇತ್ತೀಚೆಗೆ ಬಿಡುಗಡೆಗೊಳಿಸಿದರು. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಪಾತ್ರಗಳ ಬಗ್ಗೆ ಸಿನಿಮಾ ತಂಡ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.</p>.<p>‘ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ. ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ಚಿತ್ರದಲ್ಲಿವೆ’ ಎನ್ನುತ್ತಾರೆ ನಿರ್ದೇಶಕ ಪ್ರಶಾಂತ್ ಚಂದ್ರ.</p>.<p><a href="https://www.prajavani.net/entertainment/cinema/diganth-new-kannada-film-kshamisi-nimma-katheyalli-hanavilla-822119.html" itemprop="url">ಶೀಘ್ರದಲ್ಲೇ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಎನ್ನಲಿದ್ದಾರೆ ದಿಗಂತ್! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಜಿಎಫ್ ಚಿತ್ರದಲ್ಲಿ ಅಮ್ಮನ ಪಾತ್ರದ ಮೂಲಕ ಸಿನಿ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ಸದ್ದಿಲ್ಲದೆ ಸಜ್ಜಾಗಿದ್ದಾರೆ.</p>.<p>ಇ.ಕೆ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಜಿ.ಗಂಗಾಧರ್ ಅವರ ನಿರ್ಮಾಣದ ಹೊಸ ಚಿತ್ರ ‘#ಮ್ಯೂಟ್’ ನಲ್ಲಿ ಅರ್ಚನಾ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜಿ.ಗಂಗಾಧರ್ ಅವರು ಮುಂಗಾರುಮಳೆ ಹಾಗೂ ಮೊಗ್ಗಿನಮನಸು ಚಿತ್ರಗಳಲ್ಲೂ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದರು. ಮುಂಗಾರುಮಳೆ 2 ಚಿತ್ರದಲ್ಲಿ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ಅವರ ನಿರ್ದೇಶನದಲ್ಲಿ ಈ ಸಿನಿಮಾ ಚಿತ್ರೀಕರಣವನ್ನೂ ಪೂರ್ಣಗೊಳಿಸಿದೆ.</p>.<p>ಚಿತ್ರವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಸಿನಿಮಾದ ಶೀರ್ಷಿಕೆಯನ್ನು ನಟ ರಿಷಿ ಇತ್ತೀಚೆಗೆ ಬಿಡುಗಡೆಗೊಳಿಸಿದರು. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಪಾತ್ರಗಳ ಬಗ್ಗೆ ಸಿನಿಮಾ ತಂಡ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.</p>.<p>‘ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ. ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ಚಿತ್ರದಲ್ಲಿವೆ’ ಎನ್ನುತ್ತಾರೆ ನಿರ್ದೇಶಕ ಪ್ರಶಾಂತ್ ಚಂದ್ರ.</p>.<p><a href="https://www.prajavani.net/entertainment/cinema/diganth-new-kannada-film-kshamisi-nimma-katheyalli-hanavilla-822119.html" itemprop="url">ಶೀಘ್ರದಲ್ಲೇ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಎನ್ನಲಿದ್ದಾರೆ ದಿಗಂತ್! </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>