ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅರ್ಜುನ್ ಜನ್ಯ, ‘ಅಣ್ಣ ಕೋವಿಡ್ನಿಂದ ಮೃತಪಟ್ಟಿದ್ದಾನೆ. ನೀನಿಲ್ಲದೆ ಇರುವ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎನ್ನುವುದು ತಿಳಿಯುತ್ತಿಲ್ಲ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ನನ್ನ ಉಸಿರಲ್ಲಿರುವೆ’ ಎಂದು ಬರೆದಿದ್ದಾರೆ. ಅನಾರೋಗ್ಯದ ಕಾರಣ 15 ದಿನಗಳ ಹಿಂದೆ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ಕಿರಣ್ ಅವರು, ಭಾನುವಾರ ರಾತ್ರಿ ಮೃತಪಟ್ಟಿದ್ದರು.