‘45’ ಎಂಬ ಶೀರ್ಷಿಕೆಯಡಿ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ನಿರ್ಮಾಣವಾಗಲಿರುವ ಈ ಚಿತ್ರಕ್ಕೆ ಸ್ವತಃ ಅರ್ಜುನ್ ಜನ್ಯ ಅವರೇ ಚಿತ್ರಕಥೆ ಬರೆದಿದ್ದಾರೆ. ‘ಗರುಡ ಗಮನ ವೃಷಭ ವಾಹನ’ ಸಿನಿಮಾದ ಯಶಸ್ಸಿನ ಬಳಿಕ,ರಾಜ್ ಬಿ.ಶೆಟ್ಟಿ ಇದೀಗ ನಟಿ ರಮ್ಯಾ ಅವರ ಜೊತೆಗೂಡಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಪ್ರೊಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಈ ನಡುವೆಯೇ ಮತ್ತೊಂದು ಸಿನಿಮಾವನ್ನು ರಾಜ್ ಒಪ್ಪಿಕೊಂಡಿದ್ದಾರೆ. ಅವರ ಪಾತ್ರದ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ.