<p><strong>ಬೆಂಗಳೂರು:</strong>'ಯುವ ಸಾಮ್ರಾಟ್' ನಟ ಚಿರಂಜೀವಿ ಸರ್ಜಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ತ್ಯಾಗರಾಜನಗರದಲ್ಲಿ ಇರುವ ಅವರ ಮನೆಯ ಮುಂದೆ ಇಡಲಾಗಿದೆ.</p>.<p>ಚಿರು ಅವರ ಮೃತದೇಹವನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಫಲಿತಾಂಶ ನೆಗೆಟಿವ್ ಬಂದಿದ್ದರಿಂದ ಅಂತಿಮ ದರ್ಶನಕ್ಕೆ ವೈದ್ಯರು ಅವಕಾಶ ಕಲ್ಪಿಸಿದ್ದರು.</p>.<p>ರಾತ್ರಿಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿ ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆದರು. ಸೋಮವಾರ ಬೆಳಿಗ್ಗೆ 6 ಗಂಟೆಯಿಂದಲೂ ಅಭಿಮಾನಿಗಳು ಅಂತಿಮ ದರ್ಶನ ಪಡೆಯಲು ಆಗಮಿಸಿದ್ದರು. ಅವರ ಸೋದರ ಮಾವ ಅರ್ಜುನ್ ಸರ್ಜಾ ಅವರು ಚಿರು ಅವರ ಪಾರ್ಥಿವ ಶರೀರದ ಮುಂದೆಯೇ ರಾತ್ರಿ ಇಡೀ ಕುಳಿತಿದ್ದರು.</p>.<p>ಮನೆಯ ಸುತ್ತಲೂ ದಕ್ಷಿಣ ವಿಭಾಗದ ಪೊಲೀಸರಿಂದ ಬಿಗಿಭದ್ರತೆ ಒದಗಿಸಲಾಗಿದೆ. 10 ಇನ್ ಸ್ಪೆಕ್ಟರ್ ಗಳು,15 ಸಬ್ ಇನ್ ಸ್ಪೆಕ್ಟರ್ ಗಳು ಮತ್ತು 150ಕ್ಕೂ ಹೆಚ್ಚು ಕಾನ್ ಸ್ಟೆಬಲ್ ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/entertainment/cinema/chiranjeevi-sarja-died-cremation-details-734501.html" itemprop="url">ಮಧ್ಯಾಹ್ನ 1 ಗಂಟೆವರೆಗೆ ಚಿರಂಜೀವಿ ಸರ್ಜಾ ಅಂತಿಮ ದರ್ಶನಕ್ಕೆ ಅವಕಾಶ</a></p>.<p>'ಚಿತ್ರರಂಗದ ಉದಯೋನ್ಮುಖನಟ ಚಿರಂಜೀವಿ ಸರ್ಜಾ ಅವರು ವಿಧಿವಶರಾದ ವಿಷಯ ಕೇಳಿ ತುಂಬ ನೋವಾಯಿತು. ಹಲವು ವರ್ಷಗಳು ಚಿತ್ರರಂಗದಲ್ಲಿ ನಾಯಕ ನಟರಾಗಿ ಕಲಾಸೇವೆ ಮಾಡಬೇಕಾಗಿದ್ದ ಯುವನಟನಿಗೆ ಆ ದೇವರು ಇಷ್ಟು ಬೇಗ ಸಾವು ಕೊಡಬಾರದಿತ್ತು. ಈ ಸಾವು ಅವರ ಕುಟುಂಬಕ್ಕೆ ಅಲ್ಲದೆ ಇಡೀ ಚಿತ್ರರಂಗಕ್ಕೆ ನೋವು ಕೊಟ್ಟಿದೆ. ಅವರ ಕುಟುಂಬಗಳಿಗೆ ಆ ದೇವರು ನೋವು ತಡೆದುಕೊಳ್ಳುವ ಶಕ್ತಿ ಕೊಡಲಿ. ಚಿರು ಆತ್ಮಕ್ಕೆ ಶಾಂತಿ ದೊರಕಲಿ’ ಎಂದುಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಕೃಷ್ಣ (ಪ್ರವೀಣ್) ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>'ಯುವ ಸಾಮ್ರಾಟ್' ನಟ ಚಿರಂಜೀವಿ ಸರ್ಜಾ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ತ್ಯಾಗರಾಜನಗರದಲ್ಲಿ ಇರುವ ಅವರ ಮನೆಯ ಮುಂದೆ ಇಡಲಾಗಿದೆ.</p>.<p>ಚಿರು ಅವರ ಮೃತದೇಹವನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಫಲಿತಾಂಶ ನೆಗೆಟಿವ್ ಬಂದಿದ್ದರಿಂದ ಅಂತಿಮ ದರ್ಶನಕ್ಕೆ ವೈದ್ಯರು ಅವಕಾಶ ಕಲ್ಪಿಸಿದ್ದರು.</p>.<p>ರಾತ್ರಿಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿ ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆದರು. ಸೋಮವಾರ ಬೆಳಿಗ್ಗೆ 6 ಗಂಟೆಯಿಂದಲೂ ಅಭಿಮಾನಿಗಳು ಅಂತಿಮ ದರ್ಶನ ಪಡೆಯಲು ಆಗಮಿಸಿದ್ದರು. ಅವರ ಸೋದರ ಮಾವ ಅರ್ಜುನ್ ಸರ್ಜಾ ಅವರು ಚಿರು ಅವರ ಪಾರ್ಥಿವ ಶರೀರದ ಮುಂದೆಯೇ ರಾತ್ರಿ ಇಡೀ ಕುಳಿತಿದ್ದರು.</p>.<p>ಮನೆಯ ಸುತ್ತಲೂ ದಕ್ಷಿಣ ವಿಭಾಗದ ಪೊಲೀಸರಿಂದ ಬಿಗಿಭದ್ರತೆ ಒದಗಿಸಲಾಗಿದೆ. 10 ಇನ್ ಸ್ಪೆಕ್ಟರ್ ಗಳು,15 ಸಬ್ ಇನ್ ಸ್ಪೆಕ್ಟರ್ ಗಳು ಮತ್ತು 150ಕ್ಕೂ ಹೆಚ್ಚು ಕಾನ್ ಸ್ಟೆಬಲ್ ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://cms.prajavani.net/entertainment/cinema/chiranjeevi-sarja-died-cremation-details-734501.html" itemprop="url">ಮಧ್ಯಾಹ್ನ 1 ಗಂಟೆವರೆಗೆ ಚಿರಂಜೀವಿ ಸರ್ಜಾ ಅಂತಿಮ ದರ್ಶನಕ್ಕೆ ಅವಕಾಶ</a></p>.<p>'ಚಿತ್ರರಂಗದ ಉದಯೋನ್ಮುಖನಟ ಚಿರಂಜೀವಿ ಸರ್ಜಾ ಅವರು ವಿಧಿವಶರಾದ ವಿಷಯ ಕೇಳಿ ತುಂಬ ನೋವಾಯಿತು. ಹಲವು ವರ್ಷಗಳು ಚಿತ್ರರಂಗದಲ್ಲಿ ನಾಯಕ ನಟರಾಗಿ ಕಲಾಸೇವೆ ಮಾಡಬೇಕಾಗಿದ್ದ ಯುವನಟನಿಗೆ ಆ ದೇವರು ಇಷ್ಟು ಬೇಗ ಸಾವು ಕೊಡಬಾರದಿತ್ತು. ಈ ಸಾವು ಅವರ ಕುಟುಂಬಕ್ಕೆ ಅಲ್ಲದೆ ಇಡೀ ಚಿತ್ರರಂಗಕ್ಕೆ ನೋವು ಕೊಟ್ಟಿದೆ. ಅವರ ಕುಟುಂಬಗಳಿಗೆ ಆ ದೇವರು ನೋವು ತಡೆದುಕೊಳ್ಳುವ ಶಕ್ತಿ ಕೊಡಲಿ. ಚಿರು ಆತ್ಮಕ್ಕೆ ಶಾಂತಿ ದೊರಕಲಿ’ ಎಂದುಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಕೃಷ್ಣ (ಪ್ರವೀಣ್) ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>