'ಚಿತ್ರರಂಗದ ಉದಯೋನ್ಮುಖನಟ ಚಿರಂಜೀವಿ ಸರ್ಜಾ ಅವರು ವಿಧಿವಶರಾದ ವಿಷಯ ಕೇಳಿ ತುಂಬ ನೋವಾಯಿತು. ಹಲವು ವರ್ಷಗಳು ಚಿತ್ರರಂಗದಲ್ಲಿ ನಾಯಕ ನಟರಾಗಿ ಕಲಾಸೇವೆ ಮಾಡಬೇಕಾಗಿದ್ದ ಯುವನಟನಿಗೆ ಆ ದೇವರು ಇಷ್ಟು ಬೇಗ ಸಾವು ಕೊಡಬಾರದಿತ್ತು. ಈ ಸಾವು ಅವರ ಕುಟುಂಬಕ್ಕೆ ಅಲ್ಲದೆ ಇಡೀ ಚಿತ್ರರಂಗಕ್ಕೆ ನೋವು ಕೊಟ್ಟಿದೆ. ಅವರ ಕುಟುಂಬಗಳಿಗೆ ಆ ದೇವರು ನೋವು ತಡೆದುಕೊಳ್ಳುವ ಶಕ್ತಿ ಕೊಡಲಿ. ಚಿರು ಆತ್ಮಕ್ಕೆ ಶಾಂತಿ ದೊರಕಲಿ’ ಎಂದುಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಮಕೃಷ್ಣ (ಪ್ರವೀಣ್) ಪ್ರತಿಕ್ರಿಯಿಸಿದರು.