<p>ಖ್ಯಾತ ನಟ, ನಿರ್ದೇಶಕ ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಪುತ್ರಿಗಾಗಿ ‘ಸೀತಾ ಪಯಣ’ ಚಿತ್ರವನ್ನು ನಿರ್ದೇಶಿಸಿ, ನಿರ್ಮಾಣ ಮಾಡುತ್ತಿದ್ದಾರೆ. </p><p>ಉಪೇಂದ್ರನ ಅಣ್ಣನ ಮಗ ನಿರಂಜನ್ಗೆ ಐಶ್ವರ್ಯಾ ಜೋಡಿಯಾಗಿದ್ದಾರೆ. ಸರ್ಜಾ ಈ ಹಿಂದೆ ‘ಜೈ ಹಿಂದ್’ ಮತ್ತು ‘ಅಭಿಮನ್ಯು’, ‘ ಪ್ರೇಮಬರಹ’ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು. </p><p>‘ಶೀರ್ಷಿಕೆಯೇ ಸೂಚಿಸುವಂತೆ ಇದೊಂದು ಪಯಣ ಕುರಿತಾದ ಚಿತ್ರವಾಗಿದ್ದು, ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವಿದೆ. ಈಗಾಗಲೇ ಚಿತ್ರದ ಡಬ್ಬಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಏಪ್ರಿಲ್ನಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ’ ಎಂದಿದೆ ಚಿತ್ರತಂಡ.</p><p>ಪ್ರಕಾಶ್ ರಾಜ್, ಸತ್ಯರಾಜ್ ಮುಂತಾದವರು ನಟಿಸಿದ್ದಾರೆ. ಅರ್ಜುನ್ ಸರ್ಜಾ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಅನುಪ್ ರುಬೆನ್ಸ್ ಸಂಗೀತ, ಬಾಲಮುರುಗನ್ ಛಾಯಾಚಿತ್ರಗ್ರಹಣವಿದೆ. ‘ದೃಶ್ಯಂ’ ಸಿನಿಮಾ ಖ್ಯಾತಿಯ ಸಂಕಲನಕಾರ ಆಯೂಬ್ ಖಾನ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಖ್ಯಾತ ನಟ, ನಿರ್ದೇಶಕ ಅರ್ಜುನ್ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಪುತ್ರಿಗಾಗಿ ‘ಸೀತಾ ಪಯಣ’ ಚಿತ್ರವನ್ನು ನಿರ್ದೇಶಿಸಿ, ನಿರ್ಮಾಣ ಮಾಡುತ್ತಿದ್ದಾರೆ. </p><p>ಉಪೇಂದ್ರನ ಅಣ್ಣನ ಮಗ ನಿರಂಜನ್ಗೆ ಐಶ್ವರ್ಯಾ ಜೋಡಿಯಾಗಿದ್ದಾರೆ. ಸರ್ಜಾ ಈ ಹಿಂದೆ ‘ಜೈ ಹಿಂದ್’ ಮತ್ತು ‘ಅಭಿಮನ್ಯು’, ‘ ಪ್ರೇಮಬರಹ’ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿದ್ದರು. </p><p>‘ಶೀರ್ಷಿಕೆಯೇ ಸೂಚಿಸುವಂತೆ ಇದೊಂದು ಪಯಣ ಕುರಿತಾದ ಚಿತ್ರವಾಗಿದ್ದು, ಅಭಿ ಮತ್ತು ಸೀತಾ ಎಂಬ ಹದಿಹರೆಯದವರ ಭಾವನಾತ್ಮಕ ಪಯಣವಿದೆ. ಈಗಾಗಲೇ ಚಿತ್ರದ ಡಬ್ಬಿಂಗ್ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಏಪ್ರಿಲ್ನಲ್ಲಿ ಈ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ’ ಎಂದಿದೆ ಚಿತ್ರತಂಡ.</p><p>ಪ್ರಕಾಶ್ ರಾಜ್, ಸತ್ಯರಾಜ್ ಮುಂತಾದವರು ನಟಿಸಿದ್ದಾರೆ. ಅರ್ಜುನ್ ಸರ್ಜಾ ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಅನುಪ್ ರುಬೆನ್ಸ್ ಸಂಗೀತ, ಬಾಲಮುರುಗನ್ ಛಾಯಾಚಿತ್ರಗ್ರಹಣವಿದೆ. ‘ದೃಶ್ಯಂ’ ಸಿನಿಮಾ ಖ್ಯಾತಿಯ ಸಂಕಲನಕಾರ ಆಯೂಬ್ ಖಾನ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>