‘ಅಪ್ಪು ಅವರು ತಮ್ಮ ಅಪ್ರತಿಮ ಪ್ರತಿಭೆ, ಕರುಣೆ ಮತ್ತು ಮಾನವೀಯತೆಯ ಮೌಲ್ಯಗಳಿಂದ ನಮ್ಮ ಹೃದಯದ ಅಂತರಾಳವನ್ನು ಸದಾ ಬೆಳಗಿಸುತ್ತಲೇ ಇದ್ದಾರೆ. ಪುನೀತ್ ರಾಜ್ಕುಮಾರ್ ಅವರು ಮಾನವೀಯತೆಯ ಮೌಲ್ಯಗಳ ಮೇಲೆ ಇರಿಸಿದ್ದ ಅಚಲ ನಂಬಿಕೆ, ಅವರ ಹಾದಿಯಲ್ಲಿ ನಡೆಯಲು ನಮಗೆ ಸದಾ ಸ್ಫೂರ್ತಿದಾಯಕವಾಗಿರುತ್ತದೆ' ಎಂದು ಪೋಸ್ಟ್ನಲ್ಲಿ ತಿಳಿಸಿದ್ದಾರೆ.
1975 ಮಾರ್ಚ್ 17ರಂದು ಡಾ. ರಾಜ್ಕುಮಾರ್ ಹಾಗೂ ಪಾರ್ವತಮ್ಮ ದಂಪತಿಯ ಮೂರನೇ ಮಗನಾಗಿ ಪುನೀತ್ ಜನಿಸಿದ್ದರು.
‘ಬೆಟ್ಟದ ಹೂವು’ ಚಿತ್ರದ ರಾಮು ಪಾತ್ರಕ್ಕಾಗಿ ಪುನೀತ್ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ಬಾಲನಟನಾಗಿ ಬೆಳ್ಳಿತೆರೆ ಪ್ರವೇಶಿಸಿದ್ದ ಪುನೀತ್, 2002ರಲ್ಲಿ ‘ಅಪ್ಪು’ ಸಿನಿಮಾ ಮೂಲಕ ನಾಯಕನಾಗಿ ತೆರೆ ಮೇಲೆ ಕಾಣಿಸಿಕೊಂಡಿದ್ದರು.