<p><strong>ಮೈಸೂರು: </strong>ಎಲ್ಲಾ ಕ್ಷೇತ್ರಗಳಿಗೂ ಕೋವಿಡ್ ಕಠಿಣ ನಿಯಮಗಳಿಂದ ವಿನಾಯಿತಿ ನೀಡಿ ಚಿತ್ರಮಂದಿರಗಳಿಗೆ ಮಾತ್ರ ನೀಡಿಲ್ಲ. ಚಿತ್ರಮಂದಿರಗಳಿಗೂ ವಿನಾಯಿತಿ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡುವೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು.</p>.<p>‘ಮುಖ್ಯಮಂತ್ರಿ ಅವರು ಈ ಹಿಂದೆ ಸಾಕಷ್ಟು ಬರಿ ಚಿತ್ರೋದ್ಯಮಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಬಾರಿಯೂ ನಮ್ಮ ಮನವಿಯನ್ನು ಪುರಸ್ಕರಿಸುತ್ತಾರೆ ಎಂಬ ವಿಶ್ವಾಸ ಇದೆ’ ಎಂದು ಇಲ್ಲಿ ಭಾನುವಾರ ಸುದ್ದಿಗಾರರಿಗೆ ಹೇಳಿದರು.</p>.<p>ಕೋವಿಡ್ ಜತೆಯಲ್ಲೇ ಬದುಕುಬೇಕಾದ ಅನಿವಾರ್ಯತೆ ಈಗ ಎದುರಾಗಿದೆ. ಅದಕ್ಕೆ ತಕ್ಕಂತಹ ವ್ಯವಸ್ಥೆಯನ್ನು ಎಲ್ಲ ಕ್ಷೇತ್ರಗಳಲ್ಲಿಯೂ ರೂಪಿಸಿಕೊಳ್ಳಬೇಕಿದೆ ಎಂದರು.</p>.<p>‘ಪುನೀತ್ ರಾಜಕುಮಾರ್ ನಿಧನ ನೆನೆಸಿಕೊಂಡಾಗಲೆಲ್ಲ ನಮ್ಮ ಧ್ವನಿಯೇ ಬದಲಾಗುತ್ತದೆ. ಆ ನೋವನ್ನು ಸಂಪೂರ್ಣವಾಗಿ ಹೇಳಿಕೊಳ್ಳುವ ಸ್ಥಿತಿಯಲ್ಲಿಯೂ ನಾವಿಲ್ಲ. ಆ ನೋವಿನ ಜತೆಯೇ ಬದುಕು ಸಾಗಿಸುತ್ತಿದ್ದೇವೆ. ಪುನೀತ್ನದು ಅದ್ಭುತ ಆತ್ಮವಾಗಿರುವುದರಿಂದಲೆ ಜನರು ಇಂದಿಗೂ ಆತನನ್ನು ನೆನಸಿಕೊಳ್ಳುತ್ತಾರೆ. ಆತ ಗಳಿಸಿರುವ ಪ್ರೀತಿ ಕಂಡು ನನಗೆ ಹೆಮ್ಮೆಯಾಗುತ್ತಿದೆ’ ಎಂದು ಭಾವುಕರಾದರು.</p>.<p>‘ಇಲ್ಲಿನ ಶಕ್ತಿಧಾಮದ ಜವಾಬ್ದಾರಿ ನಮ್ಮ ಮೇಲಿದೆ. ಅಲ್ಲಿಗೆ ಬಂದು ಮಕ್ಕಳೊಡನೆ ಬೆರೆತರೆ ಮನಸ್ಸಿಗೆ ಬದಲಾವಣೆ ಉಂಟಾಗುತ್ತದೆ. ಅಲ್ಲೊಂದು ಶಾಲೆ ತೆರೆಯಲು ಅನುಮತಿ ಸಿಗುವ ವಿಶ್ವಾಸ ಇದೆ’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಅವರು ಇಲ್ಲಿನ ದಟ್ಟಗಳ್ಳಿಯಲ್ಲಿ ನಯನ ಕುಮಾರ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ, ‘ಆಕಾಶವೇ ಬೀಳಲಿ ಮೇಲೆ ನಾನೆಂದು ನಿಮ್ಮವನು’ ಎಂಬ ಹಾಡು ಹಾಡುವ ಮೂಲಕ ಸಭಿಕರನ್ನು ರಂಜಿಸಿದರು.</p>.<p>‘ಪ್ರಾಣ ಎಂಬುದು ಎಲ್ಲರಿಗೂ ಒಂದೇ. ಇದನ್ನು ಅರಿತು ಬಡವರು ಮತ್ತು ಶ್ರೀಮಂತರು ಇಬ್ಬರಿಗೂ ಒಂದೇ ಬಗೆಯ ಚಿಕಿತ್ಸೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಎಲ್ಲಾ ಕ್ಷೇತ್ರಗಳಿಗೂ ಕೋವಿಡ್ ಕಠಿಣ ನಿಯಮಗಳಿಂದ ವಿನಾಯಿತಿ ನೀಡಿ ಚಿತ್ರಮಂದಿರಗಳಿಗೆ ಮಾತ್ರ ನೀಡಿಲ್ಲ. ಚಿತ್ರಮಂದಿರಗಳಿಗೂ ವಿನಾಯಿತಿ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡುವೆ ಎಂದು ನಟ ಶಿವರಾಜ್ ಕುಮಾರ್ ತಿಳಿಸಿದರು.</p>.<p>‘ಮುಖ್ಯಮಂತ್ರಿ ಅವರು ಈ ಹಿಂದೆ ಸಾಕಷ್ಟು ಬರಿ ಚಿತ್ರೋದ್ಯಮಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಬಾರಿಯೂ ನಮ್ಮ ಮನವಿಯನ್ನು ಪುರಸ್ಕರಿಸುತ್ತಾರೆ ಎಂಬ ವಿಶ್ವಾಸ ಇದೆ’ ಎಂದು ಇಲ್ಲಿ ಭಾನುವಾರ ಸುದ್ದಿಗಾರರಿಗೆ ಹೇಳಿದರು.</p>.<p>ಕೋವಿಡ್ ಜತೆಯಲ್ಲೇ ಬದುಕುಬೇಕಾದ ಅನಿವಾರ್ಯತೆ ಈಗ ಎದುರಾಗಿದೆ. ಅದಕ್ಕೆ ತಕ್ಕಂತಹ ವ್ಯವಸ್ಥೆಯನ್ನು ಎಲ್ಲ ಕ್ಷೇತ್ರಗಳಲ್ಲಿಯೂ ರೂಪಿಸಿಕೊಳ್ಳಬೇಕಿದೆ ಎಂದರು.</p>.<p>‘ಪುನೀತ್ ರಾಜಕುಮಾರ್ ನಿಧನ ನೆನೆಸಿಕೊಂಡಾಗಲೆಲ್ಲ ನಮ್ಮ ಧ್ವನಿಯೇ ಬದಲಾಗುತ್ತದೆ. ಆ ನೋವನ್ನು ಸಂಪೂರ್ಣವಾಗಿ ಹೇಳಿಕೊಳ್ಳುವ ಸ್ಥಿತಿಯಲ್ಲಿಯೂ ನಾವಿಲ್ಲ. ಆ ನೋವಿನ ಜತೆಯೇ ಬದುಕು ಸಾಗಿಸುತ್ತಿದ್ದೇವೆ. ಪುನೀತ್ನದು ಅದ್ಭುತ ಆತ್ಮವಾಗಿರುವುದರಿಂದಲೆ ಜನರು ಇಂದಿಗೂ ಆತನನ್ನು ನೆನಸಿಕೊಳ್ಳುತ್ತಾರೆ. ಆತ ಗಳಿಸಿರುವ ಪ್ರೀತಿ ಕಂಡು ನನಗೆ ಹೆಮ್ಮೆಯಾಗುತ್ತಿದೆ’ ಎಂದು ಭಾವುಕರಾದರು.</p>.<p>‘ಇಲ್ಲಿನ ಶಕ್ತಿಧಾಮದ ಜವಾಬ್ದಾರಿ ನಮ್ಮ ಮೇಲಿದೆ. ಅಲ್ಲಿಗೆ ಬಂದು ಮಕ್ಕಳೊಡನೆ ಬೆರೆತರೆ ಮನಸ್ಸಿಗೆ ಬದಲಾವಣೆ ಉಂಟಾಗುತ್ತದೆ. ಅಲ್ಲೊಂದು ಶಾಲೆ ತೆರೆಯಲು ಅನುಮತಿ ಸಿಗುವ ವಿಶ್ವಾಸ ಇದೆ’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಅವರು ಇಲ್ಲಿನ ದಟ್ಟಗಳ್ಳಿಯಲ್ಲಿ ನಯನ ಕುಮಾರ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ, ‘ಆಕಾಶವೇ ಬೀಳಲಿ ಮೇಲೆ ನಾನೆಂದು ನಿಮ್ಮವನು’ ಎಂಬ ಹಾಡು ಹಾಡುವ ಮೂಲಕ ಸಭಿಕರನ್ನು ರಂಜಿಸಿದರು.</p>.<p>‘ಪ್ರಾಣ ಎಂಬುದು ಎಲ್ಲರಿಗೂ ಒಂದೇ. ಇದನ್ನು ಅರಿತು ಬಡವರು ಮತ್ತು ಶ್ರೀಮಂತರು ಇಬ್ಬರಿಗೂ ಒಂದೇ ಬಗೆಯ ಚಿಕಿತ್ಸೆ ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>