‘ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ?’ ಎಂಬುದು ನಮ್ಮ ಚಿತ್ರದ ಕಥೆ ಎನ್ನುವ ನಿರ್ದೇಶಕ ವೇಮಗಲ್ ಜಗನ್ನಾಥರಾವ್, ನವೆಂಬರ್ 18 ರಂದು ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿದರು.