<p>ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿರುವ ಶರಣ್ ಮತ್ತು ಆಶಿಕಾ ನಟಿಸಿರುವ ‘ಅವತಾರ ಪುರುಷ’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಮೂರು ಹಾಡುಗಳ ಕಂಪೋಸ್ ಮತ್ತು ಚಿತ್ರೀಕರಣವಷ್ಟೇ ಬಾಕಿ ಉಳಿದಿದೆ.</p>.<p>ಅರ್ಜುನ್ ಜನ್ಯ ಇತ್ತೀಚೆಗಷ್ಟೇ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಆಂಜಿಯೋಪ್ಲಾಸ್ಟ್ ಚಿಕಿತ್ಸೆ ಮಾಡಿಸಿಕೊಂಡಿರುವ ಅವರು ವಿಶ್ರಾಂತಿಯಲ್ಲಿದ್ದಾರೆ. ಅವರು ಚೇತರಿಸಿಕೊಂಡು ಸಂಗೀತ ಸಂಯೋಜನೆಗೆ ವಾಪಸಾಗುವುದನ್ನೇ ಚಿತ್ರತಂಡ ಎದುರು ನೋಡುತ್ತಿದೆ.</p>.<p>‘ಈಗಾಗಲೇ, 62 ದಿನಗಳ ಶೂಟಿಂಗ್ ಮುಗಿಸಿದ್ದೇವೆ. ಮೂರು ಹಾಡುಗಳ ಚಿತ್ರೀಕರಣವಷ್ಟೇ ಬಾಕಿ ಉಳಿದಿದೆ. ಜನ್ಯ ಚೇತರಿಸಿಕೊಂಡು ಬಂದ ನಂತರ ಹಾಡುಗಳ ಚಿತ್ರೀಕರಣ ಕೈಗೆತ್ತಿಕೊಳ್ಳುತ್ತೇವೆ. ಯುರೋಪ್ನಲ್ಲಿ ಒಂದು ಹಾಡಿನ ಶೂಟಿಂಗ್ ನಡೆಸಲು ನಿರ್ಧರಿಸಲಾಗಿತ್ತು. ಕೊರೊನಾ ಸೋಂಕಿನ ಭೀತಿಯಿಂದಾಗಿ ವಿದೇಶ ಪ್ರವಾಸ ಕೈಬಿಡಲಾಗಿದೆ. ಬೆಂಗಳೂರಿನಲ್ಲೇ ಆ ಹಾಡಿನ ಚಿತ್ರೀಕರಣಕ್ಕೆ ನಿರ್ಧರಿಸಲಾಗಿದೆ’ ಎಂದು ನಿರ್ದೇಶಕ ಸಿಂಪಲ್ ಸುನಿ ‘ಪ್ರಜಾಪ್ಲಸ್’ಗೆ ತಿಳಿಸಿದರು.</p>.<p>‘ರ್ಯಾಂಬೊ 2’ ಚಿತ್ರದಲ್ಲೂ ಶರಣ್– ಆಶಿಕಾ ಜೋಡಿ ‘ಚುಟು ಚುಟು...’ ಹಾಡಿಗೆ ಹೆಜ್ಜೆ ಹಾಕಿತ್ತು. ಕನ್ನಡದಲ್ಲಿ ಹೊಸ ದಾಖಲೆ ಬರೆದ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದು ಅರ್ಜುನ್ ಜನ್ಯ. ‘ಅವತಾರ ಪುರುಷ’ದಲ್ಲೂ ಈ ಜೋಡಿ ಇಂತಹದ್ದೆ ಮೋಡಿ ಮಾಡುವ ನಿರೀಕ್ಷೆಯಿದೆ. ಇದರಲ್ಲಿಯೂ ‘ಚುಟು ಚುಟು...’ ಹಾಡು ನೆನಪಿಸುವ ರೀತಿಯಲ್ಲೇ ಉತ್ತರ ಕರ್ನಾಟಕ ಶೈಲಿಯ ಹಾಡೊಂದು ಇದೆಯಂತೆ.</p>.<p>ನಾಯಕನ ಇಂಟ್ರಡಕ್ಷನ್, ರೊಮ್ಯಾಂಟಿಕ್ ಹಾಡು ಸೇರಿ ಒಟ್ಟು ಮೂರು ಹಾಡುಗಳಿಗೆ ಜನ್ಯ ಸಂಗೀತ ಸಂಯೋಜಿಸಲಿದ್ದಾರೆ. ಜತೆಗೆ ಇದಕ್ಕೆ ಹಿನ್ನೆಲೆ ಸಂಗೀತ ನೀಡಿರುವುದೂ ಅವರೇ. ಪುಷ್ಕರ್<br />ಮಲ್ಲಿಕಾರ್ಜುನಯ್ಯ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳಿರುವ ಶರಣ್ ಮತ್ತು ಆಶಿಕಾ ನಟಿಸಿರುವ ‘ಅವತಾರ ಪುರುಷ’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಮೂರು ಹಾಡುಗಳ ಕಂಪೋಸ್ ಮತ್ತು ಚಿತ್ರೀಕರಣವಷ್ಟೇ ಬಾಕಿ ಉಳಿದಿದೆ.</p>.<p>ಅರ್ಜುನ್ ಜನ್ಯ ಇತ್ತೀಚೆಗಷ್ಟೇ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಆಂಜಿಯೋಪ್ಲಾಸ್ಟ್ ಚಿಕಿತ್ಸೆ ಮಾಡಿಸಿಕೊಂಡಿರುವ ಅವರು ವಿಶ್ರಾಂತಿಯಲ್ಲಿದ್ದಾರೆ. ಅವರು ಚೇತರಿಸಿಕೊಂಡು ಸಂಗೀತ ಸಂಯೋಜನೆಗೆ ವಾಪಸಾಗುವುದನ್ನೇ ಚಿತ್ರತಂಡ ಎದುರು ನೋಡುತ್ತಿದೆ.</p>.<p>‘ಈಗಾಗಲೇ, 62 ದಿನಗಳ ಶೂಟಿಂಗ್ ಮುಗಿಸಿದ್ದೇವೆ. ಮೂರು ಹಾಡುಗಳ ಚಿತ್ರೀಕರಣವಷ್ಟೇ ಬಾಕಿ ಉಳಿದಿದೆ. ಜನ್ಯ ಚೇತರಿಸಿಕೊಂಡು ಬಂದ ನಂತರ ಹಾಡುಗಳ ಚಿತ್ರೀಕರಣ ಕೈಗೆತ್ತಿಕೊಳ್ಳುತ್ತೇವೆ. ಯುರೋಪ್ನಲ್ಲಿ ಒಂದು ಹಾಡಿನ ಶೂಟಿಂಗ್ ನಡೆಸಲು ನಿರ್ಧರಿಸಲಾಗಿತ್ತು. ಕೊರೊನಾ ಸೋಂಕಿನ ಭೀತಿಯಿಂದಾಗಿ ವಿದೇಶ ಪ್ರವಾಸ ಕೈಬಿಡಲಾಗಿದೆ. ಬೆಂಗಳೂರಿನಲ್ಲೇ ಆ ಹಾಡಿನ ಚಿತ್ರೀಕರಣಕ್ಕೆ ನಿರ್ಧರಿಸಲಾಗಿದೆ’ ಎಂದು ನಿರ್ದೇಶಕ ಸಿಂಪಲ್ ಸುನಿ ‘ಪ್ರಜಾಪ್ಲಸ್’ಗೆ ತಿಳಿಸಿದರು.</p>.<p>‘ರ್ಯಾಂಬೊ 2’ ಚಿತ್ರದಲ್ಲೂ ಶರಣ್– ಆಶಿಕಾ ಜೋಡಿ ‘ಚುಟು ಚುಟು...’ ಹಾಡಿಗೆ ಹೆಜ್ಜೆ ಹಾಕಿತ್ತು. ಕನ್ನಡದಲ್ಲಿ ಹೊಸ ದಾಖಲೆ ಬರೆದ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದು ಅರ್ಜುನ್ ಜನ್ಯ. ‘ಅವತಾರ ಪುರುಷ’ದಲ್ಲೂ ಈ ಜೋಡಿ ಇಂತಹದ್ದೆ ಮೋಡಿ ಮಾಡುವ ನಿರೀಕ್ಷೆಯಿದೆ. ಇದರಲ್ಲಿಯೂ ‘ಚುಟು ಚುಟು...’ ಹಾಡು ನೆನಪಿಸುವ ರೀತಿಯಲ್ಲೇ ಉತ್ತರ ಕರ್ನಾಟಕ ಶೈಲಿಯ ಹಾಡೊಂದು ಇದೆಯಂತೆ.</p>.<p>ನಾಯಕನ ಇಂಟ್ರಡಕ್ಷನ್, ರೊಮ್ಯಾಂಟಿಕ್ ಹಾಡು ಸೇರಿ ಒಟ್ಟು ಮೂರು ಹಾಡುಗಳಿಗೆ ಜನ್ಯ ಸಂಗೀತ ಸಂಯೋಜಿಸಲಿದ್ದಾರೆ. ಜತೆಗೆ ಇದಕ್ಕೆ ಹಿನ್ನೆಲೆ ಸಂಗೀತ ನೀಡಿರುವುದೂ ಅವರೇ. ಪುಷ್ಕರ್<br />ಮಲ್ಲಿಕಾರ್ಜುನಯ್ಯ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>