ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಯುಷ್ಮಾನ್‌ಭವ’ ಸಿನಿಮಾ ಬಿಡುಗಡೆ ಮುಂದೂಡಿಕೆ

Last Updated 29 ಅಕ್ಟೋಬರ್ 2019, 7:15 IST
ಅಕ್ಷರ ಗಾತ್ರ

‘ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ನಟಿಸಿರುವ ಪಿ. ವಾಸು ನಿರ್ದೇಶನದ ‘ಆಯುಷ್ಮಾನ್‌ಭವ’ ಚಿತ್ರದ ಬಿಡುಗಡೆಯ ದಿನಾಂಕ ಮುಂದಕ್ಕೆ ಹೋಗಿದೆ.

ನವೆಂಬರ್‌ 1ರಂದು ರಾಜ್ಯದಾದ್ಯಂತ ಈ ಸಿನಿಮಾದ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿತ್ತು. ಈಗಾಗಲೇ, ಚಿತ್ರದ ಹಾಡುಗಳು, ಟ್ರೇಲರ್‌ ಬಿಡುಗಡೆಗೊಂಡಿದ್ದು ಶಿವಣ್ಣ ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಆದರೆ, ತಾಂತ್ರಿಕ ಕಾರಣಗಳಿಂದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ. ಹಾಗಾಗಿ, ಶಿವಣ್ಣ ಅವರ ಅಭಿಮಾನಿಗಳಲ್ಲಿ ಬೇಸರ ಮನೆ ಮಾಡಿದೆ.

ಚಿತ್ರತಂಡ ಬಿಡುಗಡೆಯ ಮುಂದಿನ ದಿನಾಂಕವನ್ನೂ ಪ್ರಕಟಿಸಿಲ್ಲ. ಆದರೆ, ನವೆಂಬರ್‌ 15ರಂದು ಸಿನಿಮಾ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದು ದ್ವಾರಕೀಶ್‌ ಬ್ಯಾನರ್‌ನ 52ನೇ ಸಿನಿಮಾ. ‘ಆಪ್ತಮಿತ್ರ’, ‘ಆಪ್ತರಕ್ಷಕ’ ಮತ್ತು ‘ಶಿವಲಿಂಗ’ದಂತಹ ಸೂಪರ್‌ ಹಿಟ್‌ ಚಿತ್ರಗಳನ್ನು ನೀಡಿದ್ದ ವಾಸು ನಿರ್ದೇಶಿಸಿರುವ ಈ ಸಿನಿಮಾದ ಮೇಲೂ ನಿರೀಕ್ಷೆ ಹೆಚ್ಚಿದೆ. ಸೈಕಲಾಜಿಕಲ್‌ ಎಳೆ ಇರುವ ಇದು ಥ್ರಿಲ್ಲರ್‌ ಚಿತ್ರ.

‘ಡಿಂಪಲ್‌ ಕ್ವೀನ್’ ರಚಿತಾ ರಾಮ್ ಅವರು ಶಿವಣ್ಣ ಅವರಿಗೆ ಜೋಡಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ಶಿವರಾಜ್‌ಕುಮಾರ್‌ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿರುವುದು ಈ ಚಿತ್ರದ ವಿಶೇಷ. ಉಳಿದಂತೆ ಅನಂತನಾಗ್, ಶಿವಾಜಿ ಪ್ರಭು, ಸುಹಾಸಿನಿ ಮಣಿರತ್ನಂ, ನಿಧಿ ಸುಬ್ಬಯ್ಯ ತಾರಾಗಣದಲ್ಲಿದ್ದಾರೆ. ಗುರುಕಿರಣ್ ಸಂಗೀತ ಸಂಯೋಜಿಸಿದ್ದಾರೆ. ಪಿ.ಕೆ.ಎಚ್. ದಾಸ್ ಅವರ ಛಾಯಾಗ್ರಹಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT