<p><strong>ಮುಂಬೈ:</strong> ಬ್ಲಾಕ್ಬಸ್ಟರ್ 'ಬಾಹುಬಲಿ' ಸರಣಿಯಲ್ಲಿ ಕಟ್ಟಪ್ಪ ಪಾತ್ರದಲ್ಲಿ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ ಅವರು ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಅವರ ಮಗ ಸಿಬಿ ಸತ್ಯರಾಜ್ ಮಂಗಳವಾರ ತಿಳಿಸಿದ್ದಾರೆ.</p>.<p>67 ವರ್ಷದ ನಟ, ಬಾಹುಬಲಿಯಲ್ಲಿನ ತಮ್ಮ ನಟನೆಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ. ಅವರಿಗೆ ಕೋವಿಡ್ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.</p>.<p>ಸತ್ಯರಾಜ್ ಅವರು ಆಸ್ಪತ್ರೆಗೆ ದಾಖಲಾದ ನಂತರ 'ಸಂಪೂರ್ಣವಾಗಿ ಚೆನ್ನಾಗಿದ್ದಾರೆ' ಮತ್ತು ಕೆಲವೇ ದಿನಗಳಲ್ಲಿ ಕೆಲಸವನ್ನು ಪುನರಾರಂಭಿಸಲು ಸಜ್ಜಾಗಿದ್ದಾರೆ ಎಂದು ಅವರ ಮಗ ತಿಳಿಸಿದ್ದಾರೆ.</p>.<p>'ಅಪ್ಪಾ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಕೆಲವು ದಿನಗಳ ವಿಶ್ರಾಂತಿಯ ನಂತರ ಕೆಲಸವನ್ನು ಪುನರಾರಂಭಿಸುತ್ತಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಎಲ್ಲರಿಗೂ ಧನ್ಯವಾದಗಳು! ಎಂದು ಅವರು ಸಿಬಿ ಸತ್ಯರಾಜ್ ಟ್ವೀಟ್ ಮಾಡಿದ್ದಾರೆ.</p>.<p>ಮತ್ತೊಂದು ಟ್ವೀಟ್ನಲ್ಲಿ, 'ಹಿರಿಯ ನಟ ಯಾವುದೇ ಸಾಮಾಜಿಕ ಮಾಧ್ಯಮದಲ್ಲಿಯೂ ಖಾತೆಯನ್ನು ಹೊಂದಿಲ್ಲ. ಹೀಗಾಗಿ ಅವರ ಹೆಸರಿನಲ್ಲಿ ಯಾವುದೇ ಖಾತೆಯನ್ನು ಬಳಸುತ್ತಿದ್ದರೆ, ಅಂತಹ ಖಾತೆಯನ್ನು 'ಅನ್ಫಾಲೋ, ಬ್ಲಾಕ್ ಮತ್ತು ರಿಪೋರ್ಟ್' ಮಾಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.</p>.<p>ಇತ್ತೀಚೆಗಷ್ಟೇ ತೆಲುಗು ನಟ ಮಹೇಶ್ ಬಾಬು (46), ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರಿಗೂ ಕೋವಿಡ್ ದೃಢಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬ್ಲಾಕ್ಬಸ್ಟರ್ 'ಬಾಹುಬಲಿ' ಸರಣಿಯಲ್ಲಿ ಕಟ್ಟಪ್ಪ ಪಾತ್ರದಲ್ಲಿ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ ಅವರು ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಅವರ ಮಗ ಸಿಬಿ ಸತ್ಯರಾಜ್ ಮಂಗಳವಾರ ತಿಳಿಸಿದ್ದಾರೆ.</p>.<p>67 ವರ್ಷದ ನಟ, ಬಾಹುಬಲಿಯಲ್ಲಿನ ತಮ್ಮ ನಟನೆಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ. ಅವರಿಗೆ ಕೋವಿಡ್ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.</p>.<p>ಸತ್ಯರಾಜ್ ಅವರು ಆಸ್ಪತ್ರೆಗೆ ದಾಖಲಾದ ನಂತರ 'ಸಂಪೂರ್ಣವಾಗಿ ಚೆನ್ನಾಗಿದ್ದಾರೆ' ಮತ್ತು ಕೆಲವೇ ದಿನಗಳಲ್ಲಿ ಕೆಲಸವನ್ನು ಪುನರಾರಂಭಿಸಲು ಸಜ್ಜಾಗಿದ್ದಾರೆ ಎಂದು ಅವರ ಮಗ ತಿಳಿಸಿದ್ದಾರೆ.</p>.<p>'ಅಪ್ಪಾ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಕೆಲವು ದಿನಗಳ ವಿಶ್ರಾಂತಿಯ ನಂತರ ಕೆಲಸವನ್ನು ಪುನರಾರಂಭಿಸುತ್ತಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಎಲ್ಲರಿಗೂ ಧನ್ಯವಾದಗಳು! ಎಂದು ಅವರು ಸಿಬಿ ಸತ್ಯರಾಜ್ ಟ್ವೀಟ್ ಮಾಡಿದ್ದಾರೆ.</p>.<p>ಮತ್ತೊಂದು ಟ್ವೀಟ್ನಲ್ಲಿ, 'ಹಿರಿಯ ನಟ ಯಾವುದೇ ಸಾಮಾಜಿಕ ಮಾಧ್ಯಮದಲ್ಲಿಯೂ ಖಾತೆಯನ್ನು ಹೊಂದಿಲ್ಲ. ಹೀಗಾಗಿ ಅವರ ಹೆಸರಿನಲ್ಲಿ ಯಾವುದೇ ಖಾತೆಯನ್ನು ಬಳಸುತ್ತಿದ್ದರೆ, ಅಂತಹ ಖಾತೆಯನ್ನು 'ಅನ್ಫಾಲೋ, ಬ್ಲಾಕ್ ಮತ್ತು ರಿಪೋರ್ಟ್' ಮಾಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.</p>.<p>ಇತ್ತೀಚೆಗಷ್ಟೇ ತೆಲುಗು ನಟ ಮಹೇಶ್ ಬಾಬು (46), ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರಿಗೂ ಕೋವಿಡ್ ದೃಢಪಟ್ಟಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>