<p>‘ಬಾಬು ಮಾರ್ಲಿ’ ಚಿತ್ರ ಅಕ್ಟೋಬರ್ 8ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕ್ರೀಡಾ ವಿಷಯ ಆಧಾರಿತ ಚಿತ್ರವಿದು.</p>.<p>ವಾಲಿಬಾಲ್ ಆಟಗಾರನೊಬ್ಬನ ಜೀವನದಲ್ಲಿ ನಡೆದ ಘಟನೆಗಳನ್ನಾಧರಿಸಿ ನಿರ್ಮಾಣವಾಗಿರುವ ಚಿತ್ರವಿದು.</p>.<p>ಅವಿನಾಶ್ ಸಂಪತ್ ಈ ಚಿತ್ರದ ನಾಯಕ. ವಾಲಿಬಾಲ್ ಆಟಗಾರ ಬಾಬು ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಬೆಡಗಿ ಮೀನಾಕ್ಷಿ ದೀಕ್ಷಿತ್ ನಾಯಕಿ.</p>.<p>ಬಾಬು ಕಾಲಕ್ರಮೇಣ ಮಾದಕದ್ರವ್ಯ ವ್ಯಸನಿಯಾಗುತ್ತಾನೆ. ನಂತರ ಅವನ ಜೀವನದ ಹಾದಿಯೇ ಬೇರೆಯಾಗುತ್ತದೆ. ಆನಂತರ ಸ್ನೇಹದ ಸುಳಿಯಲ್ಲಿ ಸಿಲುಕುವ ನಾಯಕ ಮೊದಲಿನಂತಾಗುತ್ತಾನೆ. ಆಟದಲ್ಲಿ ಉತ್ತಮ ಹೆಸರು ಗಳಿಸುತ್ತಾನೆ. ಇದೇ ಚಿತ್ರದ ಪ್ರಮುಖ ಕಥಾವಸ್ತು. ಬರೀ ಕ್ರೀಡೆ ಅಷ್ಟೇ ಅಲ್ಲ. ಪ್ರೇಮಕಥೆಯೂ ಈ ಚಿತ್ರದಲ್ಲಿದೆ. ಇದೊಂದು ಯುವಜನತೆಯ ಮನಸ್ಸಿಗೆ ಹೇಳಿ ಮಾಡಿಸಿದ ಕಥಾವಸ್ತು ಎಂದಿದೆ ಚಿತ್ರತಂಡ.</p>.<p>ಊಟಿ, ಬೆಂಗಳೂರಿನಲ್ಲಿ 45 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಮಾಹಿ ಜಿ.ವೈ.ಕೆ ಈ ಚಿತ್ರದ ನಿರ್ದೇಶಕರು. ಇವರೇ ಕಥೆ ಚಿತ್ರಕಥೆ ಬರೆದಿದ್ದಾರೆ. ಜಗನ್ಮೋಹನ್ ಫಿಲಂಸ್ ಲಾಂಛನದಲ್ಲಿ ಜಗನ್ಮೋಹನ ರಾವ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಕೃತಿಕಾ ಈ ಚಿತ್ರದ ಸಹ ನಿರ್ಮಾಪಕರು.</p>.<p>ತ್ರಿವೇಣಿ (ಟಗರು ಸರೋಜ), ಸಾರಿಕಾ, ಕಿಲ್ಲರ್ ವೆಂಕಟೇಶ್, ಅಶೋಕ್, ಶಿಲ್ಪ, ಪೂಜಾ ಈ ಚಿತ್ರದಲ್ಲಿದ್ದಾರೆ. ಐದು ಹಾಡುಗಳಿವೆ. ಎಂ.ಸಿ.ಬಿಜು, ರಾಹುಲ್ ಡಿಟೊ ಹಾಗೂ ಎಸ್ ಐ ಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಖ್ಯಾತ್ ನಾರಾಯಣ್ ಛಾಯಾಗ್ರಹಣ, ಬಿಪಿನ್ಪಾಲ್ ಸಾಮುಯಲ್, ವಿಷ್ಣು ಮಾನಿಕ್, ಜಾರ್ಜ್ ಸಂಕಲನ ಹಾಗೂ ನೀರ್ಜಾ ರಾಕಿಲ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಾಮಕೃಷ್ಣ ರಣಗಟ್ಟಿ ಸಂಭಾಷಣೆ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಬಾಬು ಮಾರ್ಲಿ’ ಚಿತ್ರ ಅಕ್ಟೋಬರ್ 8ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕ್ರೀಡಾ ವಿಷಯ ಆಧಾರಿತ ಚಿತ್ರವಿದು.</p>.<p>ವಾಲಿಬಾಲ್ ಆಟಗಾರನೊಬ್ಬನ ಜೀವನದಲ್ಲಿ ನಡೆದ ಘಟನೆಗಳನ್ನಾಧರಿಸಿ ನಿರ್ಮಾಣವಾಗಿರುವ ಚಿತ್ರವಿದು.</p>.<p>ಅವಿನಾಶ್ ಸಂಪತ್ ಈ ಚಿತ್ರದ ನಾಯಕ. ವಾಲಿಬಾಲ್ ಆಟಗಾರ ಬಾಬು ಹೆಸರಿನ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ಬೆಡಗಿ ಮೀನಾಕ್ಷಿ ದೀಕ್ಷಿತ್ ನಾಯಕಿ.</p>.<p>ಬಾಬು ಕಾಲಕ್ರಮೇಣ ಮಾದಕದ್ರವ್ಯ ವ್ಯಸನಿಯಾಗುತ್ತಾನೆ. ನಂತರ ಅವನ ಜೀವನದ ಹಾದಿಯೇ ಬೇರೆಯಾಗುತ್ತದೆ. ಆನಂತರ ಸ್ನೇಹದ ಸುಳಿಯಲ್ಲಿ ಸಿಲುಕುವ ನಾಯಕ ಮೊದಲಿನಂತಾಗುತ್ತಾನೆ. ಆಟದಲ್ಲಿ ಉತ್ತಮ ಹೆಸರು ಗಳಿಸುತ್ತಾನೆ. ಇದೇ ಚಿತ್ರದ ಪ್ರಮುಖ ಕಥಾವಸ್ತು. ಬರೀ ಕ್ರೀಡೆ ಅಷ್ಟೇ ಅಲ್ಲ. ಪ್ರೇಮಕಥೆಯೂ ಈ ಚಿತ್ರದಲ್ಲಿದೆ. ಇದೊಂದು ಯುವಜನತೆಯ ಮನಸ್ಸಿಗೆ ಹೇಳಿ ಮಾಡಿಸಿದ ಕಥಾವಸ್ತು ಎಂದಿದೆ ಚಿತ್ರತಂಡ.</p>.<p>ಊಟಿ, ಬೆಂಗಳೂರಿನಲ್ಲಿ 45 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಮಾಹಿ ಜಿ.ವೈ.ಕೆ ಈ ಚಿತ್ರದ ನಿರ್ದೇಶಕರು. ಇವರೇ ಕಥೆ ಚಿತ್ರಕಥೆ ಬರೆದಿದ್ದಾರೆ. ಜಗನ್ಮೋಹನ್ ಫಿಲಂಸ್ ಲಾಂಛನದಲ್ಲಿ ಜಗನ್ಮೋಹನ ರಾವ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಕೃತಿಕಾ ಈ ಚಿತ್ರದ ಸಹ ನಿರ್ಮಾಪಕರು.</p>.<p>ತ್ರಿವೇಣಿ (ಟಗರು ಸರೋಜ), ಸಾರಿಕಾ, ಕಿಲ್ಲರ್ ವೆಂಕಟೇಶ್, ಅಶೋಕ್, ಶಿಲ್ಪ, ಪೂಜಾ ಈ ಚಿತ್ರದಲ್ಲಿದ್ದಾರೆ. ಐದು ಹಾಡುಗಳಿವೆ. ಎಂ.ಸಿ.ಬಿಜು, ರಾಹುಲ್ ಡಿಟೊ ಹಾಗೂ ಎಸ್ ಐ ಡಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಖ್ಯಾತ್ ನಾರಾಯಣ್ ಛಾಯಾಗ್ರಹಣ, ಬಿಪಿನ್ಪಾಲ್ ಸಾಮುಯಲ್, ವಿಷ್ಣು ಮಾನಿಕ್, ಜಾರ್ಜ್ ಸಂಕಲನ ಹಾಗೂ ನೀರ್ಜಾ ರಾಕಿಲ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಾಮಕೃಷ್ಣ ರಣಗಟ್ಟಿ ಸಂಭಾಷಣೆ ಬರೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>