ಜಾತಿ ವ್ಯವಸ್ಥೆ, ಮೇಲು-ಕೀಳು,ಅಸ್ಪೃಶ್ಯತೆಯಲ್ಲಿ ಅರಳುವ ಪ್ರೀತಿ, ಮಾನಸಿಕ ದಾರಿದ್ರ್ಯಕ್ಕೆ ಅಂಟಿಕೊಳ್ಳುವ ಪ್ರೇಮ ವೈಫಲ್ಯ, ರಾಜಕಾರಣಿಗಳು ಯುವ ಪಿಳಿಗೆಯನ್ನು ಅವರ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದು, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮೋಸ, ಹೀಗೆ ಹಲವಾರು ಪ್ರಮುಖ ಅಂಶಗಳನ್ನು ವಾಸ್ತವವಾಗಿ ಕಟ್ಟಿಕೊಡುವ ಕೆಲಸವನ್ನು ನಿರ್ದೇಶಕರು ಮಾಡಿದ್ದಾರೆ ಎಂದಿದೆ ಚಿತ್ರತಂಡ.