<p>‘ಕೋಲಾರ’, ‘ಇಂಗ್ಲಿಷ್ ಮಂಜ’ ಸಿನಿಮಾದ ಸಾರಥಿ ಆರ್ಯ ಎನ್.ಮಹೇಶ್ ನಿರ್ದೇಶನದಲ್ಲಿ ಸೆಟ್ಟೇರಿರುವಬಂಬೂ ಸವಾರಿ ಸಿನಿಮಾದ ಮುಹೂರ್ತ ಭಾನುವಾರ ಬೆಂಗಳೂರಿನ ಗುಂಡಾಂಜನೇಯ ದೇಗುಲದಲ್ಲಿ ನೆರವೇರಿತು. ನಿರ್ದೇಶಕ ಸಿಂಪಲ್ ಸುನಿ, ನಟ ಶ್ರೀನಗರ ಕಿಟ್ಟಿ, ವಿನೋದ್ ಪ್ರಭಾಕರ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಭಾಗವಹಿಸಿದ್ದರು.</p>.<p>ಸಿಂಪಲ್ ಸುನಿ ಮಾತನಾಡಿ, ‘ಈ ಚಿತ್ಸದ ಹೆಸರಲ್ಲಿಯೇ ಸಕಾರಾತ್ಮಕ ಶಕ್ತಿ ಇದೆ. ‘ಸವಾರಿ’ ಅನ್ನುವ ಸಿನಿಮಾ ಮೈಲುಗಲ್ಲು ಸಾಧಿಸಿತ್ತು. ಮಹೇಶ್ ಪ್ರಚಲಿತ ವಿದ್ಯಮಾನಗಳ ಮೇಲೆ ಸಿನಿಮಾ ಕಥೆ ಹೇಳುತ್ತಾರೆ. ವರ್ಧನ್ ಒಳ್ಳೆ ಕಲಾವಿದ’ ಎಂದರು.</p>.<p>ಶ್ರೀನಗರ ಕಿಟ್ಟಿ, ಮಹೇಶ್ ಮುಂದಿನ ಪ್ರಯತ್ನ. ನಾನು ಜಂಬೂ ಸವಾರಿ ಅಂದುಕೊಂಡಿದ್ದೆ. ಟೈಟಲ್ ಹೇಳಿದ ಮೇಲೆ ‘ಬಂಬೂ ಸವಾರಿ’ ಎಂದು ಗೊತ್ತಾಯಿತು’ ಎಂದರು.</p>.<p>‘ಬಂಬೂ ಸವಾರಿ’ ಸಿನಿಮಾದಲ್ಲಿ ತಾಂಡವ ರಾಮ, ವರ್ಧನ್, ದೀಪಕ್ ವಿ. ಮುಖ್ಯಭೂಮಿಕೆಯಲ್ಲಿದ್ದಾರೆ. ಆದ್ಯ ಪ್ರಿಯಾ, ಅಭಿ ಸಾರಿಕಾ ನಾಯಕಿಯರು. ವಿ.ನಾಗೇಂದ್ರ ಪ್ರಸಾದ್, ನಾಗೇಂದ್ರ ಅರಸ್, ಬಾಲರಾಜ್ ವಾಡಿ, ಷರೀಫ್ ತಾರಾಗಣದಲ್ಲಿದ್ದಾರೆ.</p>.<p>ಬಿ.ಆರ್.ಹೇಮಂತ್ ಕುಮಾರ್ ಸಂಗೀತ, ಮಂಜು ಛಾಯಾಗ್ರಹಣ, ಗಿರೀಶ್ ಕುಮಾರ್ ಕೆ. ಸಂಕಲನ,<br />ಕವಿರತ್ನ ಡಾ.ವಿ. ನಾಗೇಂದ್ರ ಪ್ರಸಾದ್ ,ಸಿಂಪಲ್ ಸುನಿ, ವಿಜಯ್ ಟಿ.ಪಿ. ಸಾಹಿತ್ಯವಿದೆ. ವೇದಾನಂದ್ ಸಹಾಯಕ ನಿರ್ದೇಶಕರು. ಚಿತ್ರಕ್ಕೆ ಇನ್ಫ್ಯಾಂಟ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿ ಡೇವಿಡ್ ಆರ್ ಬಂಡವಾಳ ಹೂಡಿದ್ದಾರೆ.</p>.<p>‘ಬಂಬೂ ಸವಾರಿ’ ಕಲ್ಟ್ ಜಾನರ್ ಸಿನಿಮಾವಾಗಿದ್ದು, ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕೋಲಾರ’, ‘ಇಂಗ್ಲಿಷ್ ಮಂಜ’ ಸಿನಿಮಾದ ಸಾರಥಿ ಆರ್ಯ ಎನ್.ಮಹೇಶ್ ನಿರ್ದೇಶನದಲ್ಲಿ ಸೆಟ್ಟೇರಿರುವಬಂಬೂ ಸವಾರಿ ಸಿನಿಮಾದ ಮುಹೂರ್ತ ಭಾನುವಾರ ಬೆಂಗಳೂರಿನ ಗುಂಡಾಂಜನೇಯ ದೇಗುಲದಲ್ಲಿ ನೆರವೇರಿತು. ನಿರ್ದೇಶಕ ಸಿಂಪಲ್ ಸುನಿ, ನಟ ಶ್ರೀನಗರ ಕಿಟ್ಟಿ, ವಿನೋದ್ ಪ್ರಭಾಕರ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಭಾಗವಹಿಸಿದ್ದರು.</p>.<p>ಸಿಂಪಲ್ ಸುನಿ ಮಾತನಾಡಿ, ‘ಈ ಚಿತ್ಸದ ಹೆಸರಲ್ಲಿಯೇ ಸಕಾರಾತ್ಮಕ ಶಕ್ತಿ ಇದೆ. ‘ಸವಾರಿ’ ಅನ್ನುವ ಸಿನಿಮಾ ಮೈಲುಗಲ್ಲು ಸಾಧಿಸಿತ್ತು. ಮಹೇಶ್ ಪ್ರಚಲಿತ ವಿದ್ಯಮಾನಗಳ ಮೇಲೆ ಸಿನಿಮಾ ಕಥೆ ಹೇಳುತ್ತಾರೆ. ವರ್ಧನ್ ಒಳ್ಳೆ ಕಲಾವಿದ’ ಎಂದರು.</p>.<p>ಶ್ರೀನಗರ ಕಿಟ್ಟಿ, ಮಹೇಶ್ ಮುಂದಿನ ಪ್ರಯತ್ನ. ನಾನು ಜಂಬೂ ಸವಾರಿ ಅಂದುಕೊಂಡಿದ್ದೆ. ಟೈಟಲ್ ಹೇಳಿದ ಮೇಲೆ ‘ಬಂಬೂ ಸವಾರಿ’ ಎಂದು ಗೊತ್ತಾಯಿತು’ ಎಂದರು.</p>.<p>‘ಬಂಬೂ ಸವಾರಿ’ ಸಿನಿಮಾದಲ್ಲಿ ತಾಂಡವ ರಾಮ, ವರ್ಧನ್, ದೀಪಕ್ ವಿ. ಮುಖ್ಯಭೂಮಿಕೆಯಲ್ಲಿದ್ದಾರೆ. ಆದ್ಯ ಪ್ರಿಯಾ, ಅಭಿ ಸಾರಿಕಾ ನಾಯಕಿಯರು. ವಿ.ನಾಗೇಂದ್ರ ಪ್ರಸಾದ್, ನಾಗೇಂದ್ರ ಅರಸ್, ಬಾಲರಾಜ್ ವಾಡಿ, ಷರೀಫ್ ತಾರಾಗಣದಲ್ಲಿದ್ದಾರೆ.</p>.<p>ಬಿ.ಆರ್.ಹೇಮಂತ್ ಕುಮಾರ್ ಸಂಗೀತ, ಮಂಜು ಛಾಯಾಗ್ರಹಣ, ಗಿರೀಶ್ ಕುಮಾರ್ ಕೆ. ಸಂಕಲನ,<br />ಕವಿರತ್ನ ಡಾ.ವಿ. ನಾಗೇಂದ್ರ ಪ್ರಸಾದ್ ,ಸಿಂಪಲ್ ಸುನಿ, ವಿಜಯ್ ಟಿ.ಪಿ. ಸಾಹಿತ್ಯವಿದೆ. ವೇದಾನಂದ್ ಸಹಾಯಕ ನಿರ್ದೇಶಕರು. ಚಿತ್ರಕ್ಕೆ ಇನ್ಫ್ಯಾಂಟ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿ ಡೇವಿಡ್ ಆರ್ ಬಂಡವಾಳ ಹೂಡಿದ್ದಾರೆ.</p>.<p>‘ಬಂಬೂ ಸವಾರಿ’ ಕಲ್ಟ್ ಜಾನರ್ ಸಿನಿಮಾವಾಗಿದ್ದು, ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>