ಕನ್ನಡ ಹಾಗೂ ಕನ್ನಡಿಗರ ಅಸ್ಮಿತೆಯಾಗಿ, ತೆರೆಯ ಮೇಲೆ ತಮ್ಮ ಅದ್ಭುತ ನಟನೆಯಿಂದ, ತೆರೆಯ ಹಿಂದೆ ತಮ್ಮ ಹೃದಯ ವೈಶಾಲ್ಯತೆಯಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿರುವ ಡಾ.ರಾಜ್ ಅವರು ಈ ನಾಡು, ನುಡಿಗೆ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು" ಮುಖ್ಯಮಂತ್ರಿ @BSBommai
— CM of Karnataka (@CMofKarnataka) April 24, 2022
2/2
ಆದರ್ಶಯಮಯವಾದ ಬದುಕು ಮತ್ತು ಕಲಾಸೇವೆ ಮೂಲಕ ಸಾರ್ವಕಾಲಿಕ ಮಾದರಿಯನ್ನು ಹಾಕಿಕೊಟ್ಟು ನಮ್ಮೆಲ್ಲ ನಡೆ-ನುಡಿಯನ್ನು ಪ್ರಭಾವಿಸುತ್ತಲೇ ಇರುವ ನಾಡಿನ ಹೆಮ್ಮೆಯ ಪುರುಷೋತ್ತಮ ಮತ್ತು 'ನಮ್ಮ ಕಾಡಿನ' ಹಿರಿಯ ಡಾ.ರಾಜಕುಮಾರ್ ಎಂಬ ಚೇತನಕ್ಕೆ ಹುಟ್ಟುಹಬ್ಬದ ದಿನದ ಗೌರವ ಪೂರ್ವಕ ನಮನಗಳು.#Rajkumar pic.twitter.com/QfnH4fwZul
— Siddaramaiah (@siddaramaiah) April 24, 2022
ಡಾ.ರಾಜ್ಕುಮಾರ್ ಅವರು ಕನ್ನಡದ ಅಸ್ಮಿತೆಯಾಗಿ ಮನೆಮನಗಳಲ್ಲಿ ನೆಲೆಸಿದ್ದಾರೆ. ನಟನಾಗಿ, ಗಾಯಕನಾಗಿ ಎಲ್ಲಕ್ಕಿಂತ ಮಿಗಿಲಾಗಿ ಪರಿಪೂರ್ಣತೆಯ ಸಾಕಾರಮೂರ್ತಿಯಾಗಿ ಕೋಟ್ಯಂತರ ಜನರಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಅಣ್ಣಾವ್ರ ಜನ್ಮದಿನದ ಶುಭಸಂದರ್ಭದಲ್ಲಿ ಹೃದಯಪೂರ್ವಕ ನಮನಗಳು. pic.twitter.com/2fdz8oSEKd
— DK Shivakumar (@DKShivakumar) April 24, 2022
ಸಿನಿಮಾ ಎಂದರೆ ಮನರಂಜನೆಯಷ್ಟೇ ಅಲ್ಲ, ಸಮಾಜದ ಪಾಲಿನ ಚಿಕಿತ್ಸಕ ಮಾರ್ಗ ಎಂದು ನಂಬಿ ನಡೆದ ಭಾರತೀಯ ಚಿತ್ರರಂಗದ ಏಕೈಕ ಕಲಾಸಂತರು ಅವರು. ಈ ಕಾರಣಕ್ಕಾಗಿಯೇ ಅಣ್ಣಾವ್ರು ಅಜರಾಮರ.
— H D Kumaraswamy (@hd_kumaraswamy) April 24, 2022
ಅವರ ಚಿತ್ರಗಳನ್ನೇ ನೋಡಿಕೊಂಡು ಬೆಳೆದ ನನ್ನ ಮೇಲೆ ಅವರ ಪ್ರಭಾವ ಹೆಚ್ಚು. ʼಬಂಗಾರದ ಮನುಷ್ಯʼ ಚಿತ್ರವೇ ನಾನಿಂದು ಕೃಷಿಕನಾಗಲು ಪ್ರೇರಣೆ. 2/3
ನಟಸಾರ್ವಭೌಮ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಪದ್ಮಭೂಷಣ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಜನ್ಮದಿನದಂದು ಆ ಮೇರು ನಟನಿಗೆ ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ ’ಅಣ್ಣಾವ್ರು', ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. pic.twitter.com/UQ2aRiO7EX
— Dr Sudhakar K (@mla_sudhakar) April 24, 2022
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.