<p>ಬೆಂಗಳೂರಿನ ಆಟೊ ಚಾಲಕರ ಕುರಿತಾದ ಕಥೆಯನ್ನು ಹೊಂದಿರುವ ‘ದೊಡ್ಮನ್ಸ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಬಹುತೇಕ ಹೊಸಬರಿಂದಲೇ ಕೂಡಿರುವ ಚಿತ್ರಕ್ಕೆ ಶರತ್ ಕೃಷ್ಣ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.</p>.<p>‘ಸಾಮಾನ್ಯ ಆಟೊ ಚಾಲಕನೊಬ್ಬ ಜೀವನದಲ್ಲಿ ಹೇಗೆ ದೊಡ್ಡ ಮನುಷ್ಯನಾಗುತ್ತಾನೆ? ಅದಕ್ಕೆ ಕಾರಣವೇನು? ಎಂಬುದೇ ಚಿತ್ರದ ಕಥೆ. ಮಾಸ್, ಆ್ಯಕ್ಷನ್ನೊಂದಿಗೆ ಮನರಂಜಿಸುವ ಚಿತ್ರ. ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕ ಘೋಷಿಸುತ್ತೇವೆ’ ಎಂದರು ನಿರ್ದೇಶಕ.</p>.<p>ರೇಷ್ಮಾ ಲಿಂಗರಾಜಪ್ಪ ನಾಯಕಿ. ಹುಲಿ ಕಾರ್ತಿಕ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಶರತ್ ಕೃಷ್ಣ ಇಡೀ ಸಿನಿಮಾವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ. ಸಿನಿಮಾದ ಆರಂಭದಿಂದ ಅಂತ್ಯದವರೆಗೂ ಈ ಚಿತ್ರತಂಡದ ಪ್ರಯಾಣದಲ್ಲಿ ಜತೆಯಾಗಿದ್ದು, ಏಳು-ಬೀಳುಗಳನ್ನು ಹತ್ತಿರದಿಂದ ಕಂಡಿದ್ದೇನೆ. ಈ ಸಿನಿಮಾ ಖಂಡಿತವಾಗಿಯೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂದರು ಕಾರ್ತಿಕ್.</p>.<p>ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಶ್ರೀಧರ ಕಶ್ಯಪ್ ಮತ್ತು ಅಲೆಕ್ಸ್ ಸಂಗೀತ ಸಂಯೋಜಿಸಿದ್ದಾರೆ. ಆನಂದ ಇಳಯರಾಜ ಛಾಯಾಚಿತ್ರಗ್ರಹಣ, ವೇದಿಕ್ ಸಂಕಲನ ಚಿತ್ರಕ್ಕಿದೆ. ‘ವೇದಿಕ್ ಕಾಸ್ಮೋಸ್’ ಬ್ಯಾನರಿನಲ್ಲಿ ವೇದಿಕ್ ವೀರ್ ಬಂಡವಾಳ ಹೂಡಿದ್ದು, ಬೆಂಗಳೂರು, ಅಹಮದಾಬಾದ್ ಸುತ್ತಮುತ್ತ ಚಿತ್ರೀಕರಣಗೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-491956092</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರಿನ ಆಟೊ ಚಾಲಕರ ಕುರಿತಾದ ಕಥೆಯನ್ನು ಹೊಂದಿರುವ ‘ದೊಡ್ಮನ್ಸ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಬಹುತೇಕ ಹೊಸಬರಿಂದಲೇ ಕೂಡಿರುವ ಚಿತ್ರಕ್ಕೆ ಶರತ್ ಕೃಷ್ಣ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.</p>.<p>‘ಸಾಮಾನ್ಯ ಆಟೊ ಚಾಲಕನೊಬ್ಬ ಜೀವನದಲ್ಲಿ ಹೇಗೆ ದೊಡ್ಡ ಮನುಷ್ಯನಾಗುತ್ತಾನೆ? ಅದಕ್ಕೆ ಕಾರಣವೇನು? ಎಂಬುದೇ ಚಿತ್ರದ ಕಥೆ. ಮಾಸ್, ಆ್ಯಕ್ಷನ್ನೊಂದಿಗೆ ಮನರಂಜಿಸುವ ಚಿತ್ರ. ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕ ಘೋಷಿಸುತ್ತೇವೆ’ ಎಂದರು ನಿರ್ದೇಶಕ.</p>.<p>ರೇಷ್ಮಾ ಲಿಂಗರಾಜಪ್ಪ ನಾಯಕಿ. ಹುಲಿ ಕಾರ್ತಿಕ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಶರತ್ ಕೃಷ್ಣ ಇಡೀ ಸಿನಿಮಾವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ. ಸಿನಿಮಾದ ಆರಂಭದಿಂದ ಅಂತ್ಯದವರೆಗೂ ಈ ಚಿತ್ರತಂಡದ ಪ್ರಯಾಣದಲ್ಲಿ ಜತೆಯಾಗಿದ್ದು, ಏಳು-ಬೀಳುಗಳನ್ನು ಹತ್ತಿರದಿಂದ ಕಂಡಿದ್ದೇನೆ. ಈ ಸಿನಿಮಾ ಖಂಡಿತವಾಗಿಯೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂದರು ಕಾರ್ತಿಕ್.</p>.<p>ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಶ್ರೀಧರ ಕಶ್ಯಪ್ ಮತ್ತು ಅಲೆಕ್ಸ್ ಸಂಗೀತ ಸಂಯೋಜಿಸಿದ್ದಾರೆ. ಆನಂದ ಇಳಯರಾಜ ಛಾಯಾಚಿತ್ರಗ್ರಹಣ, ವೇದಿಕ್ ಸಂಕಲನ ಚಿತ್ರಕ್ಕಿದೆ. ‘ವೇದಿಕ್ ಕಾಸ್ಮೋಸ್’ ಬ್ಯಾನರಿನಲ್ಲಿ ವೇದಿಕ್ ವೀರ್ ಬಂಡವಾಳ ಹೂಡಿದ್ದು, ಬೆಂಗಳೂರು, ಅಹಮದಾಬಾದ್ ಸುತ್ತಮುತ್ತ ಚಿತ್ರೀಕರಣಗೊಂಡಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-491956092</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>