<p>ಬೆಂಗಳೂರು: ಗುಬ್ಬಿವಾಣಿ ಟ್ರಸ್ಟ್ ಮೇ 24ರಂದು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ‘ಅವಳ ಹೆಜ್ಜೆ...’ ಕಿರುಚಿತ್ರೋತ್ಸವದಲ್ಲಿ ಆಯ್ದ ಕಿರುಚಿತ್ರಗಳ ಪ್ರದರ್ಶನ ಹಮ್ಮಿಕೊಂಡಿದೆ.</p>.<p>ವಿಜೇತ ಕಿರುಚಿತ್ರಕ್ಕೆ ₹1 ಲಕ್ಷ ನಗದು ಬಹುಮಾನ ಘೋಷಿಸಲಾಗುವುದು ಎಂದು ಟ್ರಸ್ಟ್ನ ಅಧ್ಯಕ್ಷೆ ಮಾಳವಿಕಾ ಗುಬ್ಬಿವಾಣಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಚಿತ್ರೋತ್ಸವವು ಮಹಿಳಾ ನಿರ್ದೇಶಕಿಯರಿಗಾಗಿ ಮೀಸಲಾಗಿದೆ. ಸಂಗೀತಾ ನಂಜುಂಡಸ್ವಾಮಿ, ದೀಪ್ತಿ ಮೂರ್ತಿ ಅಯ್ಯರ್, ಸುಮನಾ ಚಂದ್ರಗಿರಿ ಅವರನ್ನು ಒಳಗೊಂಡ ತೀರ್ಪುಗಾರರ ತಂಡವು ‘ಕಾಶಿ ಕೈಲಾಸ, ಸೋರುತಿಹುದು ಮನೆಯ ಮಾಳಿಗೆ, ರೊಟ್ಟಿ, ಎ ಲಿಟ್ಲ್ ಕೇರ್, ಹುಲಿಯಪ್ಪ, ದಾರಿ, ಮೌನರಾಗ, ಆ ಮಾಡಿ, ಗೆಜ್ಜೆ, ನಿತ್ಯ’ ಎಂಬ10 ಕಿರುಚಿತ್ರಗಳನ್ನು ಆಯ್ಕೆ ಮಾಡಿದೆ’ ಎಂದರು.</p>.<p>ಅವಳ ಹೆಜ್ಜೆ ಕಿರುಚಿತ್ರೋತ್ಸವದ ನಿರ್ದೇಶಕಿ ಶಾಂತಲಾ ದಾಮ್ಲೆ ಮಾತನಾಡಿ, ‘ಕಿರು ಚಿತ್ರೋತ್ಸವದಲ್ಲಿ ಸಿನಿಮಾದಲ್ಲಿ ಅವಳ ಹೆಜ್ಜೆ: ‘ಅ’ ಯಿಂದ ‘ಅಃ’ವರೆಗೆ ವಿಷಯಾಧಾರಿತ ಚರ್ಚಾಗೋಷ್ಠಿ ನಡೆಯಲಿದ್ದು, ನೀತೂ ಶೆಟ್ಟಿ, ಗ್ರೀಷ್ಮಾ ಶ್ರೀಧರ್, ಸಂಗೀತಾ ನಂಜುಂಡಸ್ವಾಮಿ, ಸಂಜೋತಾ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಪ್ರಥಮ ಸ್ಥಾನ ಪಡೆದ ಕಿರುಚಿತ್ರಕ್ಕೆ ಅವಳ ಹೆಜ್ಜೆ ಪ್ರಶಸ್ತಿ ಹಾಗೂ ₹1 ಲಕ್ಷ ನಗದು ಬಹುಮಾನ ನೀಡಲಾಗುವುದು. ಆಯ್ದ ಕೆಲವು ಕಿರುಚಿತ್ರಗಳಿಗೆ ₹10 ಸಾವಿರ ಬಹುಮಾನ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-4-1320392235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗುಬ್ಬಿವಾಣಿ ಟ್ರಸ್ಟ್ ಮೇ 24ರಂದು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ‘ಅವಳ ಹೆಜ್ಜೆ...’ ಕಿರುಚಿತ್ರೋತ್ಸವದಲ್ಲಿ ಆಯ್ದ ಕಿರುಚಿತ್ರಗಳ ಪ್ರದರ್ಶನ ಹಮ್ಮಿಕೊಂಡಿದೆ.</p>.<p>ವಿಜೇತ ಕಿರುಚಿತ್ರಕ್ಕೆ ₹1 ಲಕ್ಷ ನಗದು ಬಹುಮಾನ ಘೋಷಿಸಲಾಗುವುದು ಎಂದು ಟ್ರಸ್ಟ್ನ ಅಧ್ಯಕ್ಷೆ ಮಾಳವಿಕಾ ಗುಬ್ಬಿವಾಣಿ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಚಿತ್ರೋತ್ಸವವು ಮಹಿಳಾ ನಿರ್ದೇಶಕಿಯರಿಗಾಗಿ ಮೀಸಲಾಗಿದೆ. ಸಂಗೀತಾ ನಂಜುಂಡಸ್ವಾಮಿ, ದೀಪ್ತಿ ಮೂರ್ತಿ ಅಯ್ಯರ್, ಸುಮನಾ ಚಂದ್ರಗಿರಿ ಅವರನ್ನು ಒಳಗೊಂಡ ತೀರ್ಪುಗಾರರ ತಂಡವು ‘ಕಾಶಿ ಕೈಲಾಸ, ಸೋರುತಿಹುದು ಮನೆಯ ಮಾಳಿಗೆ, ರೊಟ್ಟಿ, ಎ ಲಿಟ್ಲ್ ಕೇರ್, ಹುಲಿಯಪ್ಪ, ದಾರಿ, ಮೌನರಾಗ, ಆ ಮಾಡಿ, ಗೆಜ್ಜೆ, ನಿತ್ಯ’ ಎಂಬ10 ಕಿರುಚಿತ್ರಗಳನ್ನು ಆಯ್ಕೆ ಮಾಡಿದೆ’ ಎಂದರು.</p>.<p>ಅವಳ ಹೆಜ್ಜೆ ಕಿರುಚಿತ್ರೋತ್ಸವದ ನಿರ್ದೇಶಕಿ ಶಾಂತಲಾ ದಾಮ್ಲೆ ಮಾತನಾಡಿ, ‘ಕಿರು ಚಿತ್ರೋತ್ಸವದಲ್ಲಿ ಸಿನಿಮಾದಲ್ಲಿ ಅವಳ ಹೆಜ್ಜೆ: ‘ಅ’ ಯಿಂದ ‘ಅಃ’ವರೆಗೆ ವಿಷಯಾಧಾರಿತ ಚರ್ಚಾಗೋಷ್ಠಿ ನಡೆಯಲಿದ್ದು, ನೀತೂ ಶೆಟ್ಟಿ, ಗ್ರೀಷ್ಮಾ ಶ್ರೀಧರ್, ಸಂಗೀತಾ ನಂಜುಂಡಸ್ವಾಮಿ, ಸಂಜೋತಾ ಭಂಡಾರಿ ಪಾಲ್ಗೊಳ್ಳಲಿದ್ದಾರೆ. ಪ್ರಥಮ ಸ್ಥಾನ ಪಡೆದ ಕಿರುಚಿತ್ರಕ್ಕೆ ಅವಳ ಹೆಜ್ಜೆ ಪ್ರಶಸ್ತಿ ಹಾಗೂ ₹1 ಲಕ್ಷ ನಗದು ಬಹುಮಾನ ನೀಡಲಾಗುವುದು. ಆಯ್ದ ಕೆಲವು ಕಿರುಚಿತ್ರಗಳಿಗೆ ₹10 ಸಾವಿರ ಬಹುಮಾನ ನೀಡಲಾಗುವುದು’ ಎಂದು ಮಾಹಿತಿ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-4-1320392235</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>