ಚಿತ್ರವು ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಸಂಸ್ಥೆಯ ಪುಟ್ಟಣನವರಿಂದ ನಿರ್ಮಾಣಗೊಂಡಿದ್ದು, ಮುಂಬೈನ ಸಂಸ್ಥೆಯೊಂದು ಪ್ರದರ್ಶನದ ಹಕ್ಕುಗಳನ್ನು ಪಡೆದಿದ್ದು, ಕೋವಿಡ್ ಕಡಿಮೆಯಾದ ಮೇಲೆ ಚಿತ್ರವು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಎಂದು ಬರಗೂರು ತಿಳಿಸಿದ್ದಾರೆ. ಚಿತ್ರದಲ್ಲಿ ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ನಟಿಸಿದ್ದಾರೆ. ಹಿರಿಯ ನಟ ಸುಂದರ್ ರಾಜ್, ಪ್ರಮೀಳಾ ಜೋಷಾಯ್, ತಿಲಕ್, ಸುಪ್ರಿಯಾ ರಾವ್, ವತ್ಸಲಾ ಮೋಹನ್, ಅಂಬರೀಷ್ ಸಾರಂಗಿ, ಭೂಮಿಕಾ ಲಕ್ಷ್ಮಿನಾರಾಯಣ ತಾರಾಗಣವಿದೆ.