<p>ಬಹುತೇಕ ಹೊಸಬರಿಂದಲೇ ಕೂಡಿರುವ ‘ಭರವಸೆ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತು. ‘ಪ್ರೀತ್ಸೋ ಹೃದಯಕ್ಕೆ’ ಎಂಬ ಅಡಿಬರಹ ಚಿತ್ರಕ್ಕಿದೆ. ಮುತ್ತು ಗಂಗೂರ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಶಿವಮೊಗ್ಗದ ಲಕ್ಷೀ ನಾಗರಾಜ್ ನಿರ್ಮಾಪಕರು.</p>.<p>‘ಅನಿವಾರ್ಯ ಕಾರಣಗಳಿಂದ ಚಿತ್ರ ತಡವಾಗಿದೆ. ಪ್ರೀತಿ, ಕ್ರೈಂ ಎಳೆ ಇದ್ದರೂ ಸಾಕಷ್ಟು ಭಾವನಾತ್ಮಕ ಸನ್ನಿವೇಶಗಳಿವೆ. ಪ್ರತಿಯೊಬ್ಬ ವ್ಯಕ್ತಿಯು ತನ್ನ ಬದುಕಿನಲ್ಲೊಂದು ಭರವಸೆಯನ್ನು ಇಟ್ಟುಕೊಂಡಿರುತ್ತಾನೆ. ಸೋತವನು ಗೆಲ್ಲುತ್ತಾನೆ. ಗೆದ್ದವನಿಗೆ ಇನ್ನೆನೋ ಸಾಧಿಸಬೇಕೆಂಬ ಹಪಾಹಪಿ ಇರುತ್ತದೆ. ಅಂಥ ಹುಡುಗರ ಕಥೆಯಿದು’ ಎಂದರು ನಿರ್ದೇಶಕರು. <br /><br /> ತಾರಾಗಣದಲ್ಲಿ ವಿನಯರಾಜ್, ಅಹಲ್ಯ ಸುರೇಶ್, ಹೊನ್ನವಳ್ಳಿ ಕೃಷ್ಣ, ಶೋಭರಾಜ್, ಮನಮೋಹನ್ ರೈ, ಕಿಲ್ಲರ್ವೆಂಕಟೇಶ್, ಕೆಂಪೆಗೌಡ ಮುಂತಾದವರು ನಟಿಸಿದ್ದಾರೆ.</p>.<p>ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉಡುಪಿ ಮೊದಲಾದೆಡೆ ಚಿತ್ರೀಕರಣ ನಡೆಸಲಾಗಿದೆ. ಶ್ರೀಹರ್ಷ ಕೊಗೋಡ್ ಸಂಗೀತ, ವೀನಸ್ ಮೂರ್ತಿ ಛಾಯಾಚಿತ್ರಗ್ರಹಣ, ಕುಮಾರ್.ಸಿ.ಹೆಚ್ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಹುತೇಕ ಹೊಸಬರಿಂದಲೇ ಕೂಡಿರುವ ‘ಭರವಸೆ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿತು. ‘ಪ್ರೀತ್ಸೋ ಹೃದಯಕ್ಕೆ’ ಎಂಬ ಅಡಿಬರಹ ಚಿತ್ರಕ್ಕಿದೆ. ಮುತ್ತು ಗಂಗೂರ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಶಿವಮೊಗ್ಗದ ಲಕ್ಷೀ ನಾಗರಾಜ್ ನಿರ್ಮಾಪಕರು.</p>.<p>‘ಅನಿವಾರ್ಯ ಕಾರಣಗಳಿಂದ ಚಿತ್ರ ತಡವಾಗಿದೆ. ಪ್ರೀತಿ, ಕ್ರೈಂ ಎಳೆ ಇದ್ದರೂ ಸಾಕಷ್ಟು ಭಾವನಾತ್ಮಕ ಸನ್ನಿವೇಶಗಳಿವೆ. ಪ್ರತಿಯೊಬ್ಬ ವ್ಯಕ್ತಿಯು ತನ್ನ ಬದುಕಿನಲ್ಲೊಂದು ಭರವಸೆಯನ್ನು ಇಟ್ಟುಕೊಂಡಿರುತ್ತಾನೆ. ಸೋತವನು ಗೆಲ್ಲುತ್ತಾನೆ. ಗೆದ್ದವನಿಗೆ ಇನ್ನೆನೋ ಸಾಧಿಸಬೇಕೆಂಬ ಹಪಾಹಪಿ ಇರುತ್ತದೆ. ಅಂಥ ಹುಡುಗರ ಕಥೆಯಿದು’ ಎಂದರು ನಿರ್ದೇಶಕರು. <br /><br /> ತಾರಾಗಣದಲ್ಲಿ ವಿನಯರಾಜ್, ಅಹಲ್ಯ ಸುರೇಶ್, ಹೊನ್ನವಳ್ಳಿ ಕೃಷ್ಣ, ಶೋಭರಾಜ್, ಮನಮೋಹನ್ ರೈ, ಕಿಲ್ಲರ್ವೆಂಕಟೇಶ್, ಕೆಂಪೆಗೌಡ ಮುಂತಾದವರು ನಟಿಸಿದ್ದಾರೆ.</p>.<p>ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉಡುಪಿ ಮೊದಲಾದೆಡೆ ಚಿತ್ರೀಕರಣ ನಡೆಸಲಾಗಿದೆ. ಶ್ರೀಹರ್ಷ ಕೊಗೋಡ್ ಸಂಗೀತ, ವೀನಸ್ ಮೂರ್ತಿ ಛಾಯಾಚಿತ್ರಗ್ರಹಣ, ಕುಮಾರ್.ಸಿ.ಹೆಚ್ ಸಂಕಲನ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>