ಇದು ಗೋಪಿಚಂದ್ ಅವರ 31ನೇ ಸಿನಿಮಾ. ತೆಲುಗಿನಲ್ಲಿ ಎ.ಹರ್ಷ ಆ್ಯಕ್ಷನ್ ಕಟ್ ಹೇಳುತ್ತಿರುವ ಮೊದಲ ಸಿನಿಮಾ ಇದಾಗಿದೆ. ‘ಭೀಮ’ ಕೌಟುಂಬಿಕ ಹಾಗೂ ಆ್ಯಕ್ಷನ್ ಎಂಟರ್ಟೈನರ್ ಕಥಾಹಂದರ ಹೊಂದಿದೆ. ಕೆ.ಕೆ.ರಾಧಾ ಮೋಹನ್ ಶ್ರೀ ಸತ್ಯ ಸಾಯಿ ಆರ್ಟ್ಸ್ ಪ್ರೊಡಕ್ಷನ್ನಡಿ ಅದ್ಧೂರಿಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ ಎಂದಿದೆ ಚಿತ್ರತಂಡ. ‘ಭೀಮ’ ಶ್ರೀ ಸತ್ಯ ಸಾಯಿ ಆರ್ಟ್ಸ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ 14ನೇ ಸಿನಿಮಾ. ಸ್ವಾಮಿ.ಜೆ ಛಾಯಾಚಿತ್ರಗ್ರಹಣ, ರವಿ ಬಸ್ರೂರ್ ಸಂಗೀತ ನಿರ್ದೇಶನ, ಅಜ್ಜು ಮಹಂಕಾಳಿ ಸಂಭಾಷಣೆ, ವೆಂಕಟ್ ಹಾಗೂ ರವಿವರ್ಮಾ ಸಾಹಸ ನಿರ್ದೇಶನ ಚಿತ್ರಕ್ಕಿದೆ.