ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರಂಡಿ ನಿರ್ಮಾಣ ವಿಳಂಬ: ಸಂಚಾರಕ್ಕೆ ಅಡಚಣೆ

Last Updated 10 ಫೆಬ್ರುವರಿ 2018, 9:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವಿದ್ಯಾನಗರದಿಂದ(ಕೆನರಾ ಬ್ಯಾಂಕ್‌ ಪಕ್ಕ) ಲೋಕಪ್ಪನ ಹಕ್ಕಲು ಕಡೆಗೆ ಹೋಗುವ ರಸ್ತೆಯ ಬಲಭಾಗದಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವುದರಿಂದ ಈ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.

ವಿದ್ಯಾನಗರ–ಲೋಕಪ್ಪನಹಕ್ಕಲು ಮುಖ್ಯ ರಸ್ತೆಗೆ ಸಂಪರ್ಕಿಸುವ ಅಡ್ಡ ರಸ್ತೆಗಳ ಬಳಿ ಚರಂಡಿ ಕಾಮಗಾರಿ ನಡೆಯುತ್ತಿರುವುದರಿಂದ ಈ ಭಾಗದ ನಿವಾಸಿಗಳು ತಮ್ಮ ವಾಹನಗಳನ್ನು ಸುತ್ತಿಬಳಸಿಕೊಂಡು ಮನೆ ಬಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯ ಆಜುಬಾಜು ಮಣ್ಣು, ಕಲ್ಲು, ಜಲ್ಲಿಯ ರಾಶಿ ಹಾಕಿರುವುದರಿಂದ ಪಾದಾಚಾರಿಗಳು ನಡೆದಾಡಲು ಸಮಸ್ಯೆಯಾಗಿದೆ.

ರಸ್ತೆಯಿಂದ 35 ಸೆಂಟಿ ಮೀಟರ್ (ಒಂದು ಅಡಿ ಒಂದು ಇಂಚು)ಎತ್ತರದಲ್ಲಿರುವ ಕಲವಟ್ ನಿರ್ಮಾಣ ಮಾಡಲಾಗಿದೆ. ಇದರಿಂದ ಕಲವಟ್ ಎತ್ತರಕ್ಕೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡುವವರೆಗೂ ವಾಹನ ಸವಾರರು ಉಸಿರು ಬಿಗಿ ಹಿಡಿದು ಈ ರಸ್ತೆ ದಾಟಬೇಕಾಗಿದೆ.

ಇಲ್ಲಿನ ನಿವಾಸಿಗಳು ತಮ್ಮ ವಾಹನಗಳನ್ನು ಮನೆ ಬಳಿಗೆ ತೆಗೆದುಕೊಂಡು ಹೋಗಲಾಗದೇ ರಸ್ತೆ ಬದಿಯಲ್ಲಿ ನಿಲ್ಲಿಸಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಈ ರಸ್ತೆಯಲ್ಲಿ ತೆರಳುವ ಇತರೆ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ.

ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಅಳಲು ತೋಡಿಕೊಂಡ ಸ್ಥಳೀಯ ನಿವಾಸಿ ಹಿರೇಗೌಡ್ರು, ‘ಚರಂಡಿ ನಿರ್ಮಾಣ ಕಾಮಗಾರಿ ಆರಂಭವಾಗಿ ತಿಂಗಳ ಮೇಲಾಯಿತು, ಇನ್ನೂ ಮುಗಿದಿಲ್ಲ. ನಿತ್ಯವೂ ವಾಹನ ತೆಗೆಯಲು ಹಾಗೂ ನಿಲ್ಲಿಸಲು ಅರ್ಧ ಕಿಲೋ ಮೀಟರ್ ದೂರ ಸುತ್ತಿ ಬಳಸಿ ಓಡಾಡಬೇಕು. ಕಾಮಗಾರಿ ದೂಳಿನಿಂದ ಜನರ ಆರೋಗ್ಯ ಹಾಳಾಗುತ್ತಿದೆ’ ಎಂದು ದೂರಿದರು.

‘ಸಹಕರಿಸಿ’

‘ಹೊಸ ರಸ್ತೆ ನಿರ್ಮಾಣ ಮಾಡುವ ಉದ್ದೇಶದಿಂದ ಮೊದಲಿಗೆ ಚರಂಡಿ ನಿರ್ಮಾಣ ಕಾಮಗಾರಿ ನಡೆದಿದೆ. 21 ದಿನಗಳ ಕಾಂಕ್ರೀಟ್‌ ಕ್ಯೂರಿಂಗ್ ಮುಗಿದ ನಂತರ ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ. ಅಲ್ಲಿಯ ವರೆಗೆ ಜನರು ಸಹಕರಿಸಬೇಕು ’ ಎಂದು ಎಂಜಿನಿಯರ್‌ ಧನರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT