<p><strong>ಮುಂಬೈ</strong>: ಪ್ರವಾಹ ಪೀಡಿತ ಪಂಜಾಬ್ ಜನರ ನೆರವಿಗೆ ಧಾವಿಸಿ ಎಂದು ಬಾಲಿವುಡ್ ನಟ ಶಾರುಕ್ ಖಾನ್, ಆಲಿಯಾ ಭಟ್, ರಣದೀಪ್ ಹೂಡಾ, ಕರಣ್ ಜೋಹರ್ ಸೇರಿದಂತೆ ಅನೇಕ ಸೆಲೆಬ್ರೆಟಿ ಮನವಿ ಮಾಡಿದ್ದಾರೆ.</p><p>ಪಂಜಾಬ್ನಲ್ಲಿ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 3.5 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.</p> .ಭಾರತ ಸುಂಕದ ಮೂಲಕ ನಮ್ಮನ್ನು ಕೊಲ್ಲುತ್ತಿದೆ: ಟ್ರಂಪ್.ಅಪ್ಪನ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ಸಾನ್ವಿ ಸುದೀಪ್.<p>ಪ್ರವಾಹ ಪೀಡಿತ ಪಂಜಾಬ್ ನೋಡಲು ಹೃದಯ ಭಾರವಾಗಿದೆ. ಕುಟುಂಬದವರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿ ದೇವರು ಕರುಣಿಸಲಿ. ಪರಿಹಾರ ಕಾರ್ಯಗಳಿಗೆ ಕೈ ಜೋಡಿಸಿ ಎಂದು ಶಾರುಕ್ ಖಾನ್ 'ಎಕ್ಸ್' ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಪಂಜಾಬ್ನಲ್ಲಿರುವ ಜನರಿಗೆ ಇದು ಕಠಿಣ ಸಮಯ. ಈ ಪ್ರತಿಕೂಲ ಪರಿಸ್ಥಿತಿ ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ. ನಿಮ್ಮ ಕೈಲಾದಷ್ಟು ಸಹಾಯವನ್ನು ಮಾಡಿ, ಬಳಿಕ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಿ ಎಂದು ನಿರ್ಮಾಪಕ ಕರಣ್ ಜೋಹರ್ ಜನರಿಗೆ ಮನವಿ ಮಾಡಿದ್ದಾರೆ.</p><p>ಸೋನು ಸೂದ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ನಿಮ್ಮ ಜತೆ ನಾವಿದ್ದೇವೆ. ನೀವು ಒಂಟಿಯಲ್ಲ. ಕುಗ್ಗಬೇಡಿ ಎಂದಿರುವ ಅವರು, ಸಹಾಯದ ಅಗತ್ಯತೆ ಇರುವವರು ನಮ್ಮನ್ನು ಸಂಪರ್ಕಿಸಬಹುದು. ಕೈಲಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.</p>.PHOTOS | ದಸರಾ ಮಹೋತ್ಸವ: 500 ಕೆ.ಜಿ.ಮರಳು ಮೂಟೆ ಹೊತ್ತು ತಾಲೀಮು ನಡೆಸಿದ ಗಜಪಡೆ.‘ತಪ್ಪು ಭಾವಿಸಿ ದೂರು ದಾಖಲಿಸಿದೆ’ ಎಂದ ಮಹಿಳೆ: ಅತ್ಯಾಚಾರ ಆರೋಪಿ ಖುಲಾಸೆ. <p>ಪಂಜಾಬ್ನಲ್ಲಿ ಪ್ರವಾಹದಿಂದ ತೊಂದರೆಗೊಳಗಾದ ಎಲ್ಲರಿಗಾಗಿ ನನ್ನ ಹೃದಯ ಮಿಡಿದಿದೆ, ದಣಿವರಿಯಿಲ್ಲದೆ ಪರಿಹಾರ ಕಾರ್ಯಗಳಲ್ಲಿ ತೊಡಗಿರುವವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ ಎಂದು ನಟಿ ಆಲಿಯಾ ಭಟ್ ತಿಳಿಸಿದ್ದಾರೆ.</p><p>ಪ್ರವಾಹದಿಂದ ಉಂಟಾಗಿರುವ ಹಾನಿ ಹೃದಯ ವಿದ್ರಾವಕವಾಗಿದೆ. ಗುರುದಾಸ್ಪುರ ಜಿಲ್ಲೆಯಲ್ಲಿ ಸಾಧ್ಯವಾದಷ್ಟು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದೇನೆ ಎಂದು ರಣದೀಪ್ ಹೂಡಾ ತಿಳಿಸಿದ್ದಾರೆ.</p><p>ದಿಲ್ಜಿತ್ ದೋಸಾಂಜ್, ಸಂಜಯ್ ದತ್ ಸೇರಿದಂತೆ ಪಂಜಾಬಿ ನಟ–ನಟಿಯರು ಸಹಾಯದ ಹಸ್ತ ಚಾಚಿದ್ದಾರೆ.</p>.45 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ ಶ್ವಾಸಕೋಶದ ಕಾಯಿಲೆ ಹೆಚ್ಚು: ವರದಿ .ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಸೆಪ್ಟೆಂಬರ್ 6ರವರೆಗೆ ಎಸ್ಐಟಿ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಪ್ರವಾಹ ಪೀಡಿತ ಪಂಜಾಬ್ ಜನರ ನೆರವಿಗೆ ಧಾವಿಸಿ ಎಂದು ಬಾಲಿವುಡ್ ನಟ ಶಾರುಕ್ ಖಾನ್, ಆಲಿಯಾ ಭಟ್, ರಣದೀಪ್ ಹೂಡಾ, ಕರಣ್ ಜೋಹರ್ ಸೇರಿದಂತೆ ಅನೇಕ ಸೆಲೆಬ್ರೆಟಿ ಮನವಿ ಮಾಡಿದ್ದಾರೆ.</p><p>ಪಂಜಾಬ್ನಲ್ಲಿ ಕೆಲವು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ 30ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 3.5 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.</p> .ಭಾರತ ಸುಂಕದ ಮೂಲಕ ನಮ್ಮನ್ನು ಕೊಲ್ಲುತ್ತಿದೆ: ಟ್ರಂಪ್.ಅಪ್ಪನ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ಸಾನ್ವಿ ಸುದೀಪ್.<p>ಪ್ರವಾಹ ಪೀಡಿತ ಪಂಜಾಬ್ ನೋಡಲು ಹೃದಯ ಭಾರವಾಗಿದೆ. ಕುಟುಂಬದವರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿ ದೇವರು ಕರುಣಿಸಲಿ. ಪರಿಹಾರ ಕಾರ್ಯಗಳಿಗೆ ಕೈ ಜೋಡಿಸಿ ಎಂದು ಶಾರುಕ್ ಖಾನ್ 'ಎಕ್ಸ್' ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಪಂಜಾಬ್ನಲ್ಲಿರುವ ಜನರಿಗೆ ಇದು ಕಠಿಣ ಸಮಯ. ಈ ಪ್ರತಿಕೂಲ ಪರಿಸ್ಥಿತಿ ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತೇನೆ. ನಿಮ್ಮ ಕೈಲಾದಷ್ಟು ಸಹಾಯವನ್ನು ಮಾಡಿ, ಬಳಿಕ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಿ ಎಂದು ನಿರ್ಮಾಪಕ ಕರಣ್ ಜೋಹರ್ ಜನರಿಗೆ ಮನವಿ ಮಾಡಿದ್ದಾರೆ.</p><p>ಸೋನು ಸೂದ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವಿಡಿಯೊ ಹಂಚಿಕೊಂಡಿದ್ದು, ನಿಮ್ಮ ಜತೆ ನಾವಿದ್ದೇವೆ. ನೀವು ಒಂಟಿಯಲ್ಲ. ಕುಗ್ಗಬೇಡಿ ಎಂದಿರುವ ಅವರು, ಸಹಾಯದ ಅಗತ್ಯತೆ ಇರುವವರು ನಮ್ಮನ್ನು ಸಂಪರ್ಕಿಸಬಹುದು. ಕೈಲಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.</p>.PHOTOS | ದಸರಾ ಮಹೋತ್ಸವ: 500 ಕೆ.ಜಿ.ಮರಳು ಮೂಟೆ ಹೊತ್ತು ತಾಲೀಮು ನಡೆಸಿದ ಗಜಪಡೆ.‘ತಪ್ಪು ಭಾವಿಸಿ ದೂರು ದಾಖಲಿಸಿದೆ’ ಎಂದ ಮಹಿಳೆ: ಅತ್ಯಾಚಾರ ಆರೋಪಿ ಖುಲಾಸೆ. <p>ಪಂಜಾಬ್ನಲ್ಲಿ ಪ್ರವಾಹದಿಂದ ತೊಂದರೆಗೊಳಗಾದ ಎಲ್ಲರಿಗಾಗಿ ನನ್ನ ಹೃದಯ ಮಿಡಿದಿದೆ, ದಣಿವರಿಯಿಲ್ಲದೆ ಪರಿಹಾರ ಕಾರ್ಯಗಳಲ್ಲಿ ತೊಡಗಿರುವವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ ಎಂದು ನಟಿ ಆಲಿಯಾ ಭಟ್ ತಿಳಿಸಿದ್ದಾರೆ.</p><p>ಪ್ರವಾಹದಿಂದ ಉಂಟಾಗಿರುವ ಹಾನಿ ಹೃದಯ ವಿದ್ರಾವಕವಾಗಿದೆ. ಗುರುದಾಸ್ಪುರ ಜಿಲ್ಲೆಯಲ್ಲಿ ಸಾಧ್ಯವಾದಷ್ಟು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದೇನೆ ಎಂದು ರಣದೀಪ್ ಹೂಡಾ ತಿಳಿಸಿದ್ದಾರೆ.</p><p>ದಿಲ್ಜಿತ್ ದೋಸಾಂಜ್, ಸಂಜಯ್ ದತ್ ಸೇರಿದಂತೆ ಪಂಜಾಬಿ ನಟ–ನಟಿಯರು ಸಹಾಯದ ಹಸ್ತ ಚಾಚಿದ್ದಾರೆ.</p>.45 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ ಶ್ವಾಸಕೋಶದ ಕಾಯಿಲೆ ಹೆಚ್ಚು: ವರದಿ .ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಸೆಪ್ಟೆಂಬರ್ 6ರವರೆಗೆ ಎಸ್ಐಟಿ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>