<p><strong>ಹೈದರಾಬಾದ್</strong>: ಪುಷ್ಪ–2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟಾಲಿವುಡ್ ನಟ ಅಲ್ಲು ಅರ್ಜುನ್ ಬಂಧನವಬ್ಬು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಖಂಡಿಸಿದ್ದಾರೆ.</p><p>ಯಾವುದೇ ಸೂಚನೆ ಇಲ್ಲದೆ ಅಲ್ಲು ಅರ್ಜುನ್ ಅವರನ್ನು ಬಂಧಿಸಿರುವುದು ಮತ್ತು ಸಾಮಾನ್ಯ ಕ್ರಿಮಿನಲ್ಗಳಂತೆ ನಡೆಸಿಕೊಂಡಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.</p><p>ರಾಷ್ಟ್ರ ಪ್ರಶಸ್ತಿ ವಿಜೇತ ನಟನನ್ನು ಈ ರೀತಿ ಬಂಧಿಸಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಭದ್ರತೆಯನ್ನು ಪ್ರದರ್ಶಿಸಿದೆ ಎಂದು ಟೀಕಿಸಿದ್ದಾರೆ.</p><p>‘ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿರುವ ಬಗ್ಗೆ ಅತೀವ ದುಃಖವಿದೆ. ಇಲ್ಲಿ ನಿಜವಾಗಿಯೂ ಏನು ಲೋಪವಾಗಿದೆ? ಅಲ್ಲು ಅರ್ಜುನ್ ತಾವು ನೇರವಾಗಿ ಜವಾಬ್ದಾರರಲ್ಲದ ಪ್ರಕರಣದಲ್ಲಿ ಅವರನ್ನು ಒಬ್ಬ ಕ್ರಿಮಿನಲ್ ರೀತಿ ನಡೆಸಿಕೊಂಡಿರುವುದು ಸರಿ ಎಲ್ಲ’ ಎಂದು ಎಕ್ಸ್ ಪೋಸ್ಟ್ನಲ್ಲಿ ಟೀಕಿಸಿದ್ದಾರೆ.</p><p>ಆರೋಪಿಗಳನ್ನು ನಡೆಸಿಕೊಳ್ಳುವಲ್ಲಿ ತೋರಬೇಕಾದ ಗೌರವದ ವಿಷಯದಲ್ಲಿ ಸರ್ಕಾರದ ನಡವಳಿಕೆಯನ್ನು ಖಂಡಿಸಿದ್ದಾರೆ.</p><p>ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಪುಷ್ಪ–2 ಚಿತ್ರದ ಪ್ರೀಮಿಯರ್ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು.</p> .ಪುಷ್ಪ–2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಪುಷ್ಪ–2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟಾಲಿವುಡ್ ನಟ ಅಲ್ಲು ಅರ್ಜುನ್ ಬಂಧನವಬ್ಬು ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಖಂಡಿಸಿದ್ದಾರೆ.</p><p>ಯಾವುದೇ ಸೂಚನೆ ಇಲ್ಲದೆ ಅಲ್ಲು ಅರ್ಜುನ್ ಅವರನ್ನು ಬಂಧಿಸಿರುವುದು ಮತ್ತು ಸಾಮಾನ್ಯ ಕ್ರಿಮಿನಲ್ಗಳಂತೆ ನಡೆಸಿಕೊಂಡಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.</p><p>ರಾಷ್ಟ್ರ ಪ್ರಶಸ್ತಿ ವಿಜೇತ ನಟನನ್ನು ಈ ರೀತಿ ಬಂಧಿಸಿರುವ ಕಾಂಗ್ರೆಸ್ ಸರ್ಕಾರವು ತನ್ನ ಅಭದ್ರತೆಯನ್ನು ಪ್ರದರ್ಶಿಸಿದೆ ಎಂದು ಟೀಕಿಸಿದ್ದಾರೆ.</p><p>‘ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟಿರುವ ಬಗ್ಗೆ ಅತೀವ ದುಃಖವಿದೆ. ಇಲ್ಲಿ ನಿಜವಾಗಿಯೂ ಏನು ಲೋಪವಾಗಿದೆ? ಅಲ್ಲು ಅರ್ಜುನ್ ತಾವು ನೇರವಾಗಿ ಜವಾಬ್ದಾರರಲ್ಲದ ಪ್ರಕರಣದಲ್ಲಿ ಅವರನ್ನು ಒಬ್ಬ ಕ್ರಿಮಿನಲ್ ರೀತಿ ನಡೆಸಿಕೊಂಡಿರುವುದು ಸರಿ ಎಲ್ಲ’ ಎಂದು ಎಕ್ಸ್ ಪೋಸ್ಟ್ನಲ್ಲಿ ಟೀಕಿಸಿದ್ದಾರೆ.</p><p>ಆರೋಪಿಗಳನ್ನು ನಡೆಸಿಕೊಳ್ಳುವಲ್ಲಿ ತೋರಬೇಕಾದ ಗೌರವದ ವಿಷಯದಲ್ಲಿ ಸರ್ಕಾರದ ನಡವಳಿಕೆಯನ್ನು ಖಂಡಿಸಿದ್ದಾರೆ.</p><p>ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಪುಷ್ಪ–2 ಚಿತ್ರದ ಪ್ರೀಮಿಯರ್ ವೇಳೆ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು.</p> .ಪುಷ್ಪ–2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>