ಬೆಂಗಳೂರು:ಮಾದಕ ವಸ್ತುವಾದ ಗಾಂಜಾವನ್ನು ತುಳಸಿಗೆ ಹೋಲಿಸಿ ಮಾತನಾಡಿದ್ದಾರೆ ಎನ್ನಲಾದ ನಟಿ ನಿವೇದಿತಾ ವಿರುದ್ಧ ಮಲ್ಲೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಗಾಂಜಾ ಔಷಧಿ ಗುಣವುಳ್ಳ ಸಸಿ. ತುಳಸಿ ತರವೇ ಅದನ್ನು ಬಳಕೆ ಮಾಡಬೇಕು‘ಎಂಬುದಾಗಿ ನಟಿ ನಿವೇದಿತಾ ಹೇಳಿಕೆ ನೀಡಿದ್ದರು.
ಇಂಥ ಹೇಳಿಕೆಯಿಂದ ಗಾಂಜಾ ಸೇವನೆಗೆ ಪ್ರಚೋದನೆ ನೀಡಿದ ಆರೋಪದಡಿ ನಿವೇದಿತಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಎ. ದೀಪಕ್ ಎಂಬುವರು ದೂರು ನೀಡಿದ್ದರು.
‘ತುಳಸಿಯನ್ನು ಗಾಂಜಾ ಗಿಡಕ್ಕೆ ಹೋಲಿಸಿರುವ ನಟಿ ನಿವೇದಿತಾ, ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ’ಎಂದು ದೀಪಕ್ ದೂರಿನಲ್ಲಿ ಹೇಳಿದ್ದರು. ಅದನ್ನು ಆಧರಿಸಿಯೇ ಇದೀಗ ಎಫ್ಐಆರ್ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.