‘ಅಪಘಾತ ನಡೆದ ಸ್ಥಳದಲ್ಲಿ ಬೆಸ್ಕಾಂನ ಮೂರು ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ಪ್ರತ್ಯಕ್ಷದರ್ಶಿಗಳು ಅಪಘಾತಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ. ಯತಿರಾಜ್ ಅವರಿಗೆ ಮುಖ, ಹಣೆ ಮತ್ತು ಕಾಲಿಗೆ ಗಾಯವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದಾರೆ. ಅವರು ಗುಣವಾದ ನಂತರ ಮುಂದಿನಪ್ರಕ್ರಿಯೆಗಳನ್ನು ನಡೆಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ತಿಳಿಸಿದ್ದಾರೆ.