‘ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಮುನ್ನ, ಮಂಡಳಿಯ ಮಾರ್ಗಸೂಚಿಗಳನ್ನು ಅನುಸರಿಸಿದ ‘ಪಠಾಣ್’ ಚಿತ್ರದ ಪರಿಷ್ಕೃತ ಪ್ರತಿಯನ್ನು ಸಲ್ಲಿಸಲು ಚಿತ್ರದ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲಂಸ್ಗೆ ಸಿಬಿಎಫ್ಸಿ ಸೂಚಿಸಿದೆ’ ಎಂದು ಮಂಡಳಿಯ ಅಧ್ಯಕ್ಷ ಪ್ರಸೂನ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಿತ್ರತಂಡಕ್ಕೆ ಸೂಚಿಸಿರುವ ಬದಲಾವಣೆಗಳ ಬಗ್ಗೆ ವಿಸ್ತೃತ ಮಾಹಿತಿಯನ್ನು ಅವರು ಇಲ್ಲಿ ಉಲ್ಲೇಖಿಸಿಲ್ಲ. ‘ಸಿನಿಮಾ ನಿರ್ಮಾಣ ಮಾಡುವವರ ಸೃಜನಶೀಲತೆ ಮತ್ತು ಪ್ರೇಕ್ಷಕರ ಭಾವನೆಗಳ ನಡುವೆ ಸಮತೋಲನ ಸಾಧಿಸುವುದು ಮತ್ತು ಅದಕ್ಕೆ ಅನುಗುಣವಾಗಿ ಪರಿಹಾರ ಕಂಡುಕೊಳ್ಳುವುದು ಸಿಬಿಎಫ್ಸಿ ಗುರಿಯಾಗಿದೆ’ ಎಂದಿದ್ದಾರೆ ಜೋಶಿ.