‘ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ’ ಸಿನಿಮಾದಲ್ಲಿ ಎರಡು ಪ್ರಮುಖ ಪಾತ್ರಗಳಿದ್ದು, ಆಸ್ಕರ್ ಕೃಷ್ಣ ಮತ್ತು ಲೋಕೇಂದ್ರ ಸೂರ್ಯ ಅವರೇ ನಿರ್ವಹಿಸಲಿದ್ದಾರೆ. ನಾಯಕಿಯ ಹುಡುಕಾಟ ನಡೆದಿದೆ. ಸ್ನೇಹ, ಪ್ರೀತಿ, ರಾಜಕೀಯ, ಅಪರಾಧ ಮತ್ತು ಪೊಲೀಸ್ ವ್ಯವಸ್ಥೆಯ ಸುತ್ತ ಚಿತ್ರದ ಕಥೆ ಹೊಸೆಯಲಾಗಿದೆಯಂತೆ. ಕಾಮಿಡಿ ಕ್ರೈಂ ಥ್ರಿಲ್ಲರ್ ಕಥನ ಇದು. ಇದೇ ತಿಂಗಳಿನಿಂದ ಶೂಟಿಂಗ್ ಆರಂಭವಾಗಲಿದೆ.ಅನಂತು ಸಂಗೀತ ಸಂಯೋಜಿಸಿದ್ದು. ವಿನಯ್ ಗೌಡ ಅವರ ಛಾಯಾಗ್ರಹಣವಿದೆ.