ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದ ಮುಂದೆ ಭಾನುವಾರ ಮಾತನಾಡಿದ ಅವರು, 'ಅಭಿಮಾನಿಗಳು ಹಿಂದಿನ ವರ್ಷದಂತೆಯೇ ಈ ಬಾರಿಯೂ ನನ್ನ ಹುಟ್ಟುಹಬ್ಬಕ್ಕೆ ದವಸ ಧಾನ್ಯಗಳನ್ನು ನೀಡುತ್ತಿದ್ದಾರೆ. ಅವರು ನೀಡಿದ್ದನ್ನು ಒಂದೆಡೆ ಸಂಗ್ರಹಿಸಲಾಗುತ್ತಿದ್ದು, ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ನೀಡಲಾಗುವುದು. ಕೆಲವು ಅಭಿಮಾನಿಗಳು ಮೊಲ, ಬಾತುಕೋಳಿಗಳನ್ನು ನೀಡಿದ್ದಾರೆ. ಅವುಗಳನ್ನು ನನ್ನ ಫಾರ್ಮ್ ಹೌಸ್ಗೆ ಕಳುಹಿಸುತ್ತೇನೆ' ಎಂದು ತಿಳಿಸಿದರು.