<p>ಚಾಮರಾಜನಗರ: ‘ಕನ್ನಡ ಚಲನಚಿತ್ರ ರಂಗದಲ್ಲಿ ವಿಶೇಷ ಹಾವಭಾವ, ನಟನೆ, ನೇರನುಡಿ ಹಾಗೂ ಸಂಕಷ್ಟಕ್ಕೆ ಸದಾ ಮಿಡಿಯುವ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಂಡಿರುವ ಅಂಬರೀಷ್ ಮಾದರಿ ನಟ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಅಭಿಪ್ರಾಯಪಟ್ಟರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಈಚೆಗೆ ಕಸಾಪ ಹಮ್ಮಿಕೊಂಡಿದ್ದ ಕನ್ನಡ ಚಲನಚಿತ್ರರಂಗಕ್ಕೆ ಅಂಬರೀಷ್ ಕೊಡುಗೆ ಕುರಿತು ಮಾತನಾಡಿ, ‘ಮಳವಳ್ಳಿ ಹುಚ್ಚೇಗೌಡ ಅಮರನಾಥ್ ಕನ್ನಡ ಸಿನಿಮಾ ರಂಗದಲ್ಲಿ ರೆಬೆಲ್ಸ್ಟಾರ್ ಅಂಬರೀಶ್ ಆಗಿ ಬೆಳೆದು ಕನ್ನಡಿಗರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.</p>.<p>ಪ್ರೀತಿ, ವಿಶ್ವಾಸ, ಸ್ನೇಹ, ಸಹಾಯ ಹಸ್ತಕ್ಕೆ ಮಾದರಿಯಾಗಿದ್ದು ಡಾ.ರಾಜಕುಮಾರ್, ವಿಷ್ಣುವರ್ಧನ್ ಅವರ ಸಾಲಿನಲ್ಲಿ ನಿಂತಿದ್ದಾರೆ. ಸಿನಿಮಾ ಕ್ಷೇತ್ರದ ಜೊತೆಗೆ ರಾಜಕಾರಣಕ್ಕೆ ಪ್ರವೇಶಿಸಿ ಯಶಸ್ವಿಯಾದ ಅಂಬರೀಶ್ ಸಂಸದರಾಗಿ, ಕೇಂದ್ರ ಸಚಿವರಾಗಿ, ರಾಜ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು.</p>.<p>ಮಂಡ್ಯದ ಗಂಡು ಎಂದೇ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಅಂಬರೀಶ್ ನೇರ ನಡೆ, ನುಡಿಯಿಂದ ಪ್ರಸಿದ್ಧರಾಗಿದ್ದರು. ಜಾತಿ, ಮತ, ಧರ್ಮ ಬೇಧವಿಲ್ಲದೆ ಸಂಕಷ್ಟದಲ್ಲಿದ್ದ ಕಲಾವಿದರಿಗೆ ಸಹಾಯ ಮಾಡಿದ್ದಾರೆ. ಅವರ ಕಲಾಸೇವೆ ರಾಜ್ಯ ಪ್ರಶಸ್ತಿಗಳು ಸಂದಿವೆ ಎಂದರು.</p>.<p>ಜನಪದ ಕಲಾವಿದ ರವಿಚಂದ್ರ ಪ್ರಸಾದ್ ಕಹಳೆ ಮಾತನಾಡಿ ‘ಹಿಂದೆ ಅಂಬರೀಶ್ ಅವರನ್ನು ಜಿಲ್ಲೆಗೆ ಕರೆಸಿದ ಕನ್ನಡ ಸಂಘಟನೆಗಳು ಬೆಳ್ಳಿ ಕಿರೀಟ ಧಾರಣೆ ಮಾಡುವ ಜಿಲ್ಲೆಯ ಪರವಾಗಿ ನಾಗರಿಕ ಸನ್ಮಾನ ನೀಡಿದ್ದರು. ಸ್ನೇಹಮಯ ವ್ಯಕ್ತಿತ್ವದ ಅಂಬರೀಶ್ ಚಲನಚಿತ್ರರಂಗಕ್ಕೆ ಮಾದರಿ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯೆ ಪದ್ಮಾ ಪುರುಷೋತ್ತಮ್ ಮಾತನಾಡಿದರು. ಸದಸ್ಯ ಶಿವಲಿಂಗ ಮೂರ್ತಿ ಅಂಬರೀಶ್ ಚಲನಚಿತ್ರ ಗೀತೆಗಳನ್ನು ಹಾಡಿದರು. ಸರಸ್ವತಿ, ಬಿ.ಕೆ.ಆರಾಧ್ಯ, ನವೀನ್, ಸುರೇಶ್ ದೊಡ್ಡಮೋಳೆ, ಧನಂಜಯ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-37-446389300</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ‘ಕನ್ನಡ ಚಲನಚಿತ್ರ ರಂಗದಲ್ಲಿ ವಿಶೇಷ ಹಾವಭಾವ, ನಟನೆ, ನೇರನುಡಿ ಹಾಗೂ ಸಂಕಷ್ಟಕ್ಕೆ ಸದಾ ಮಿಡಿಯುವ ವ್ಯಕ್ತಿತ್ವದೊಂದಿಗೆ ಗುರುತಿಸಿಕೊಂಡಿರುವ ಅಂಬರೀಷ್ ಮಾದರಿ ನಟ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಅಭಿಪ್ರಾಯಪಟ್ಟರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಈಚೆಗೆ ಕಸಾಪ ಹಮ್ಮಿಕೊಂಡಿದ್ದ ಕನ್ನಡ ಚಲನಚಿತ್ರರಂಗಕ್ಕೆ ಅಂಬರೀಷ್ ಕೊಡುಗೆ ಕುರಿತು ಮಾತನಾಡಿ, ‘ಮಳವಳ್ಳಿ ಹುಚ್ಚೇಗೌಡ ಅಮರನಾಥ್ ಕನ್ನಡ ಸಿನಿಮಾ ರಂಗದಲ್ಲಿ ರೆಬೆಲ್ಸ್ಟಾರ್ ಅಂಬರೀಶ್ ಆಗಿ ಬೆಳೆದು ಕನ್ನಡಿಗರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.</p>.<p>ಪ್ರೀತಿ, ವಿಶ್ವಾಸ, ಸ್ನೇಹ, ಸಹಾಯ ಹಸ್ತಕ್ಕೆ ಮಾದರಿಯಾಗಿದ್ದು ಡಾ.ರಾಜಕುಮಾರ್, ವಿಷ್ಣುವರ್ಧನ್ ಅವರ ಸಾಲಿನಲ್ಲಿ ನಿಂತಿದ್ದಾರೆ. ಸಿನಿಮಾ ಕ್ಷೇತ್ರದ ಜೊತೆಗೆ ರಾಜಕಾರಣಕ್ಕೆ ಪ್ರವೇಶಿಸಿ ಯಶಸ್ವಿಯಾದ ಅಂಬರೀಶ್ ಸಂಸದರಾಗಿ, ಕೇಂದ್ರ ಸಚಿವರಾಗಿ, ರಾಜ್ಯ ಸಚಿವರಾಗಿ ಕೆಲಸ ಮಾಡಿದ್ದಾರೆ ಎಂದು ಸ್ಮರಿಸಿದರು.</p>.<p>ಮಂಡ್ಯದ ಗಂಡು ಎಂದೇ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಅಂಬರೀಶ್ ನೇರ ನಡೆ, ನುಡಿಯಿಂದ ಪ್ರಸಿದ್ಧರಾಗಿದ್ದರು. ಜಾತಿ, ಮತ, ಧರ್ಮ ಬೇಧವಿಲ್ಲದೆ ಸಂಕಷ್ಟದಲ್ಲಿದ್ದ ಕಲಾವಿದರಿಗೆ ಸಹಾಯ ಮಾಡಿದ್ದಾರೆ. ಅವರ ಕಲಾಸೇವೆ ರಾಜ್ಯ ಪ್ರಶಸ್ತಿಗಳು ಸಂದಿವೆ ಎಂದರು.</p>.<p>ಜನಪದ ಕಲಾವಿದ ರವಿಚಂದ್ರ ಪ್ರಸಾದ್ ಕಹಳೆ ಮಾತನಾಡಿ ‘ಹಿಂದೆ ಅಂಬರೀಶ್ ಅವರನ್ನು ಜಿಲ್ಲೆಗೆ ಕರೆಸಿದ ಕನ್ನಡ ಸಂಘಟನೆಗಳು ಬೆಳ್ಳಿ ಕಿರೀಟ ಧಾರಣೆ ಮಾಡುವ ಜಿಲ್ಲೆಯ ಪರವಾಗಿ ನಾಗರಿಕ ಸನ್ಮಾನ ನೀಡಿದ್ದರು. ಸ್ನೇಹಮಯ ವ್ಯಕ್ತಿತ್ವದ ಅಂಬರೀಶ್ ಚಲನಚಿತ್ರರಂಗಕ್ಕೆ ಮಾದರಿ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯೆ ಪದ್ಮಾ ಪುರುಷೋತ್ತಮ್ ಮಾತನಾಡಿದರು. ಸದಸ್ಯ ಶಿವಲಿಂಗ ಮೂರ್ತಿ ಅಂಬರೀಶ್ ಚಲನಚಿತ್ರ ಗೀತೆಗಳನ್ನು ಹಾಡಿದರು. ಸರಸ್ವತಿ, ಬಿ.ಕೆ.ಆರಾಧ್ಯ, ನವೀನ್, ಸುರೇಶ್ ದೊಡ್ಡಮೋಳೆ, ಧನಂಜಯ ಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-37-446389300</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>