<p><strong>ಬೆಂಗಳೂರು</strong>: ‘ಆರ್ಸಿಬಿ ತಂಡದ ವಿಜಯೋತ್ಸವ ಕಾರ್ಯಕ್ರಮಕ್ಕೆ ಹೋಗಲು ಪಾಸ್ ಸಿಕ್ಕಿತ್ತು. ಅಲ್ಲಿ ಬಹಳ ಜನಸಂದಣಿಯಿತ್ತು. ಒಂದು ಕ್ಷಣ ನನಗೆ ಉಸಿರಾಡಲು ಕಷ್ಟ ಆಯ್ತು’ ಎಂದು ನಟ ಚಂದನ್ ಶೆಟ್ಟಿ ಹೇಳಿದ್ದಾರೆ.</p>.<p>‘ಗೇಟ್ ನಂಬರ್ 3ಕ್ಕೆ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಅದರ ಬಳಿ ಹೋಗಲು ಸಾಧ್ಯವಾಗಲಿಲ್ಲ. ಅಲ್ಲಿಂದ ಹೇಗೋ ಗೇಟ್ ನಂಬರ್ 10ರ ಬಳಿ ಬಂದಾಗ ಜನಸಂದಣಿ ಇತ್ತು. ಇದರಿಂದಾಗಿ ಉಸಿರಾಡಲು ಕಷ್ಟವಾಯಿತು. ದುರಂತದಲ್ಲಿ ಪ್ರಾಣ ಕಳೆದುಕೊಂಡ ಆ ಜೀವಗಳಿಗೆ ಎಷ್ಟು ಕಷ್ಟ ಆಗಿತ್ತೋ, ಏನೋ? ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೇಳಿಕೊಳ್ಳುತ್ತಿದ್ದೇನೆ’ ಎಂದು ಚಂದನ್ ಅವರು ವಿಡಿಯೊ ಸಂದೇಶ ಹಂಚಿಕೊಂಡಿದ್ದಾರೆ.</p>.<p>‘ನಿಜವಾಗಿಯೂ ಬೇಸರ ಆಗುತ್ತಿದೆ. ದುರಂತಕ್ಕೆ ಯಾರು ಹೊಣೆ ಎನ್ನುವುದನ್ನು ಹೇಳುವುದು ತುಂಬಾ ಕಷ್ಟ. ಸರಿಯಾಗಿ ವ್ಯವಸ್ಥೆ ಮಾಡಲಿಲ್ವಾ?. ಈ ರೀತಿ ಇರುತ್ತೆ ಅಂತಾ ಯಾರಿಗೂ ಗೊತ್ತಿರಲಿಲ್ಲ. ಶನಿವಾರ ಅಥವಾ ಭಾನುವಾರ ಕಾರ್ಯಕ್ರಮ ಮಾಡಬಹುದಿತ್ತು. ದುರಂತದಲ್ಲಿ ಗಾಯಗೊಂಡಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆರ್ಸಿಬಿ ತಂಡದ ವಿಜಯೋತ್ಸವ ಕಾರ್ಯಕ್ರಮಕ್ಕೆ ಹೋಗಲು ಪಾಸ್ ಸಿಕ್ಕಿತ್ತು. ಅಲ್ಲಿ ಬಹಳ ಜನಸಂದಣಿಯಿತ್ತು. ಒಂದು ಕ್ಷಣ ನನಗೆ ಉಸಿರಾಡಲು ಕಷ್ಟ ಆಯ್ತು’ ಎಂದು ನಟ ಚಂದನ್ ಶೆಟ್ಟಿ ಹೇಳಿದ್ದಾರೆ.</p>.<p>‘ಗೇಟ್ ನಂಬರ್ 3ಕ್ಕೆ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಅದರ ಬಳಿ ಹೋಗಲು ಸಾಧ್ಯವಾಗಲಿಲ್ಲ. ಅಲ್ಲಿಂದ ಹೇಗೋ ಗೇಟ್ ನಂಬರ್ 10ರ ಬಳಿ ಬಂದಾಗ ಜನಸಂದಣಿ ಇತ್ತು. ಇದರಿಂದಾಗಿ ಉಸಿರಾಡಲು ಕಷ್ಟವಾಯಿತು. ದುರಂತದಲ್ಲಿ ಪ್ರಾಣ ಕಳೆದುಕೊಂಡ ಆ ಜೀವಗಳಿಗೆ ಎಷ್ಟು ಕಷ್ಟ ಆಗಿತ್ತೋ, ಏನೋ? ಕಾಲ್ತುಳಿತದಲ್ಲಿ ಜೀವ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೇಳಿಕೊಳ್ಳುತ್ತಿದ್ದೇನೆ’ ಎಂದು ಚಂದನ್ ಅವರು ವಿಡಿಯೊ ಸಂದೇಶ ಹಂಚಿಕೊಂಡಿದ್ದಾರೆ.</p>.<p>‘ನಿಜವಾಗಿಯೂ ಬೇಸರ ಆಗುತ್ತಿದೆ. ದುರಂತಕ್ಕೆ ಯಾರು ಹೊಣೆ ಎನ್ನುವುದನ್ನು ಹೇಳುವುದು ತುಂಬಾ ಕಷ್ಟ. ಸರಿಯಾಗಿ ವ್ಯವಸ್ಥೆ ಮಾಡಲಿಲ್ವಾ?. ಈ ರೀತಿ ಇರುತ್ತೆ ಅಂತಾ ಯಾರಿಗೂ ಗೊತ್ತಿರಲಿಲ್ಲ. ಶನಿವಾರ ಅಥವಾ ಭಾನುವಾರ ಕಾರ್ಯಕ್ರಮ ಮಾಡಬಹುದಿತ್ತು. ದುರಂತದಲ್ಲಿ ಗಾಯಗೊಂಡಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>