<p><strong>ಬೆಂಗಳೂರು: </strong>ಎಂ. ಸಿರಿ ಪ್ರೊಡಕ್ಷನ್ಸ್ನಡಿ ಡಾ.ಮಂಜುನಾಥ್ ಡಿ.ಎಸ್. ನಿರ್ಮಾಣದ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ‘ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು... ಶ್ರೀಮತಿ ಆಗು ಅಂದ್ರೆ ಮೂತಿ ತಿರುವಿ ಹೋದ್ಲು’ ಎಂಬ ಮೊದಲ ಹಾಡು ಕೂಡ ಬಿಡುಗಡೆಯಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.</p>.<p>ಆರವ್ ರಿಶಿಕ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ನವೀನ್ ಸಜ್ಜು ಕಂಠದಾನ ಮಾಡಿದ್ದಾರೆ. ಈ ಹಾಡಿಗೆ ಚಿತ್ರದ ನಿರ್ದೇಶಕ ಕುಮಾರ್ ಅವರೇ ಸಾಹಿತ್ಯ ರಚಿಸಿದ್ದಾರೆ. ಆನಂದ್ ಆಡಿಯೊ ಸಂಸ್ಥೆ ಚಿತ್ರದ ಲಿರಿಕಲ್ ಆಡಿಯೊ ಬಿಡುಗಡೆ ಮಾಡಿದೆ. ಲವ್ ಪ್ಯಾಥೋ ಸಾಂಗ್ ಇದಾಗಿದ್ದು, ಟಪ್ಪಾಂಗುಚ್ಚಿ ಶೈಲಿಯಲ್ಲಿದೆ.</p>.<p>‘ಕಿರಿಕ್ ಪಾರ್ಟಿ’ ಖ್ಯಾತಿಯ ಚಂದನ್ ಆಚಾರ್, ಯುವ ನಾಯಕಿ ಸಂಜನಾ ಆನಂದ್, ತಬಲ ನಾಣಿ, ಸುಚೇಂದ್ರಪ್ರಸಾದ್, ಮಂಜುನಾಥ್ ಡಿ.ಎಸ್., ಮೈಕೋ ನಾಗರಾಜ್, ರಾಕ್ಲೈನ್ ಸುಧಾಕರ್ ತಾರಾಗಣದಲ್ಲಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಟ್ರೇಲರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ.</p>.<p>ಸಜಯ್ ಕುಮಾರ್ ಅವರ ಹಿನ್ನೆಲೆ ಸಂಗೀತವಿದೆ. ಛಾಯಾಗ್ರಹಣ ಶಿವಸೇನಾ ಅವರದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಎಂ. ಸಿರಿ ಪ್ರೊಡಕ್ಷನ್ಸ್ನಡಿ ಡಾ.ಮಂಜುನಾಥ್ ಡಿ.ಎಸ್. ನಿರ್ಮಾಣದ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ‘ಊರ್ವಶಿ ಅವಳು, ನನ್ನ ಬೇವರ್ಸಿ ಮಾಡಿದ್ಲು... ಶ್ರೀಮತಿ ಆಗು ಅಂದ್ರೆ ಮೂತಿ ತಿರುವಿ ಹೋದ್ಲು’ ಎಂಬ ಮೊದಲ ಹಾಡು ಕೂಡ ಬಿಡುಗಡೆಯಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.</p>.<p>ಆರವ್ ರಿಶಿಕ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ನವೀನ್ ಸಜ್ಜು ಕಂಠದಾನ ಮಾಡಿದ್ದಾರೆ. ಈ ಹಾಡಿಗೆ ಚಿತ್ರದ ನಿರ್ದೇಶಕ ಕುಮಾರ್ ಅವರೇ ಸಾಹಿತ್ಯ ರಚಿಸಿದ್ದಾರೆ. ಆನಂದ್ ಆಡಿಯೊ ಸಂಸ್ಥೆ ಚಿತ್ರದ ಲಿರಿಕಲ್ ಆಡಿಯೊ ಬಿಡುಗಡೆ ಮಾಡಿದೆ. ಲವ್ ಪ್ಯಾಥೋ ಸಾಂಗ್ ಇದಾಗಿದ್ದು, ಟಪ್ಪಾಂಗುಚ್ಚಿ ಶೈಲಿಯಲ್ಲಿದೆ.</p>.<p>‘ಕಿರಿಕ್ ಪಾರ್ಟಿ’ ಖ್ಯಾತಿಯ ಚಂದನ್ ಆಚಾರ್, ಯುವ ನಾಯಕಿ ಸಂಜನಾ ಆನಂದ್, ತಬಲ ನಾಣಿ, ಸುಚೇಂದ್ರಪ್ರಸಾದ್, ಮಂಜುನಾಥ್ ಡಿ.ಎಸ್., ಮೈಕೋ ನಾಗರಾಜ್, ರಾಕ್ಲೈನ್ ಸುಧಾಕರ್ ತಾರಾಗಣದಲ್ಲಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಟ್ರೇಲರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದೆ.</p>.<p>ಸಜಯ್ ಕುಮಾರ್ ಅವರ ಹಿನ್ನೆಲೆ ಸಂಗೀತವಿದೆ. ಛಾಯಾಗ್ರಹಣ ಶಿವಸೇನಾ ಅವರದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>