‘ಕೆಲಸಕ್ಕೆಂದು ಉತ್ತರ ಭಾರತದಿಂದ ಬಂದ ಐದು ಹುಡುಗರು ಬೆಂಗಳೂರಿನಲ್ಲಿ ಚೈನೀಸ್ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತ, ತಾವೇ ಸ್ವಂತ ಹೋಟೆಲ್ ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ.ಕೊನೆಗೆ ಅದೆಲ್ಲದರಿಂದ ಪಾರಾಗಿ ಗೆಲ್ಲುತ್ತಾರಾ, ಇಲ್ಲವೇ? ಎಂಬುದೇ ಚಿತ್ರದ ಕಥೆ. ಹಿಂದಿಯ ಪದ್ಮಾವತ್, ಮಲಯಾಳ, ಗುಜರಾತಿ ಭಾಷೆಯ ಹಲವು ಸಿನಿಮಾಗಳಿಗೆ ಕೆಲಸ ಮಾಡಿ, ಕೆಲ ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ ’ ಎಂದರು ನಿರ್ದೇಶಕರು.