<p>ಸ್ಟಾರ್ ನಟರು ಇತ್ತೀಚೆಗೆ ವರ್ಷಕ್ಕೆ ಒಂದು ಸಿನಿಮಾಕ್ಕೆ ಸೀಮಿತರಾಗುತ್ತಿದ್ದಾರೆ. ಇದು ಎಲ್ಲಾ ಭಾಷೆಯ ಚಿತ್ರರಂಗದಲ್ಲೂ ಕಂಡುಬರುತ್ತಿರುವ ಸಾಮಾನ್ಯ ಬೆಳವಣಿಗೆ. ಟಾಲಿವುಡ್ ನಟರು ಇದರಿಂದ ಹೊರತಲ್ಲ. ಆದರೆ, ಇದರಿಂದ ಚಿತ್ರಮಂದಿರದ ಮಾಲೀಕರು ಅನುಭವಿಸುವ ಸಂಕಷ್ಟ ಹೇಳತೀರದು. ಒಳ್ಳೆಯ ಚಿತ್ರಗಳಿಲ್ಲದೆ ಥಿಯೇಟರ್ಗಳು ನಷ್ಟ ಅನುಭವಿಸುವಂತಾಗಿದೆ.</p>.<p>ಕಳೆದ ವರ್ಷ ‘ಮೆಗಾಸ್ಟಾರ್’ ಚಿರಂಜೀವಿ ಅವರು ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟಿಸಿದ್ದರು. ಈ ವರ್ಷ ‘ಆಚಾರ್ಯ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಕೊರಟಾಲ ಶಿವ ನಿರ್ದೇಶಿಸುತ್ತಿದ್ದಾರೆ. ಕಾಜಲ್ ಅಗರ್ ವಾಲ್ ಈ ಚಿತ್ರದ ನಾಯಕಿ.ಆಗಸ್ಟ್ನಲ್ಲಿ ಈ ಸಿನಿಮಾದ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿತ್ತು. ಆದರೆ, ಕೊರೊನಾ ಸೋಂಕಿನ ಭೀತಿಯಿಂದ ಚಿತ್ರೀಕರಣ ಸ್ಥಗಿತಗೊಂಡಿದೆ.</p>.<p>‘ಆಚಾರ್ಯ’ ಚಿತ್ರದ ಬಳಿಕ ಚಿರಂಜೀವಿ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಕಾತರ ಅವರ ಅಭಿಮಾನಿಗಳಲ್ಲಿತ್ತು. ಎರಡು ಸಿನಿಮಾಗಳಲ್ಲಿ ನಟಿಸುವುದಾಗಿ ಚಿರು ಅವರೇ ಇತ್ತೀಚಿನ ಸಂದರ್ಶನದಲ್ಲಿ ಘೋಷಿಸಿದ್ದಾರೆ.</p>.<p>ಮಲಯಾಳದ ‘ಲೂಸಿಫರ್’ ಚಿತ್ರದ ತೆಲುಗು ರಿಮೇಕ್ನಲ್ಲಿ ಅವರು ನಟಿಸಲಿದ್ದಾರಂತೆ. ಇದಕ್ಕೆ ‘ಸಾಹೊ’ ಚಿತ್ರದ ನಿರ್ದೇಶಕ ಸುಜಿತ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಮೂಲ ಚಿತ್ರದ ಸ್ಕ್ರಿಪ್ಟ್ ಅನ್ನು ತೆಲುಗಿನ ನೇಟಿವಿಟಿಗೆ ತಕ್ಕಂತೆ ಬದಲಾಯಿಸುವ ಪ್ರಕ್ರಿಯೆಯಲ್ಲಿ ಅವರು ತೊಡಗಿದ್ದಾರೆ.</p>.<p>ಇದಾದ ಬಳಿಕ ಕೆ.ಎಸ್. ರವೀಂದ್ರ ಬಾಬಿ ನಿರ್ದೇಶನದ ಹೊಸ ಚಿತ್ರದಲ್ಲಿ ಚಿರಂಜೀವಿ ನಟಿಸಲಿದ್ದಾರೆ. ರವೀಂದ್ರ ಟಿಪಿಕಲ್ ಕಮರ್ಷಿಯಲ್ ಡೈರೆಕ್ಟರ್. ಅವರು ನಿರ್ದೇಶಿಸಿದ್ದ ‘ಜೈ ಲವ ಕುಶ’, ‘ವೆಂಕಿ ಮಾಮ’ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಂಡಿದ್ದವು. ಈ ಯಶಸ್ಸೇ ಚಿರು ಹೊಸ ಸಿನಿಮಾದ ನಿರ್ದೇಶನಕ್ಕೆ ಅವರಿಗೆ ಅವಕಾಶದ ಬಾಗಿಲು ತೆರೆದಿದೆ ಎಂಬುದು ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿರುವ ಮಾತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸ್ಟಾರ್ ನಟರು ಇತ್ತೀಚೆಗೆ ವರ್ಷಕ್ಕೆ ಒಂದು ಸಿನಿಮಾಕ್ಕೆ ಸೀಮಿತರಾಗುತ್ತಿದ್ದಾರೆ. ಇದು ಎಲ್ಲಾ ಭಾಷೆಯ ಚಿತ್ರರಂಗದಲ್ಲೂ ಕಂಡುಬರುತ್ತಿರುವ ಸಾಮಾನ್ಯ ಬೆಳವಣಿಗೆ. ಟಾಲಿವುಡ್ ನಟರು ಇದರಿಂದ ಹೊರತಲ್ಲ. ಆದರೆ, ಇದರಿಂದ ಚಿತ್ರಮಂದಿರದ ಮಾಲೀಕರು ಅನುಭವಿಸುವ ಸಂಕಷ್ಟ ಹೇಳತೀರದು. ಒಳ್ಳೆಯ ಚಿತ್ರಗಳಿಲ್ಲದೆ ಥಿಯೇಟರ್ಗಳು ನಷ್ಟ ಅನುಭವಿಸುವಂತಾಗಿದೆ.</p>.<p>ಕಳೆದ ವರ್ಷ ‘ಮೆಗಾಸ್ಟಾರ್’ ಚಿರಂಜೀವಿ ಅವರು ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟಿಸಿದ್ದರು. ಈ ವರ್ಷ ‘ಆಚಾರ್ಯ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದನ್ನು ಕೊರಟಾಲ ಶಿವ ನಿರ್ದೇಶಿಸುತ್ತಿದ್ದಾರೆ. ಕಾಜಲ್ ಅಗರ್ ವಾಲ್ ಈ ಚಿತ್ರದ ನಾಯಕಿ.ಆಗಸ್ಟ್ನಲ್ಲಿ ಈ ಸಿನಿಮಾದ ಬಿಡುಗಡೆಗೆ ಚಿತ್ರತಂಡ ನಿರ್ಧರಿಸಿತ್ತು. ಆದರೆ, ಕೊರೊನಾ ಸೋಂಕಿನ ಭೀತಿಯಿಂದ ಚಿತ್ರೀಕರಣ ಸ್ಥಗಿತಗೊಂಡಿದೆ.</p>.<p>‘ಆಚಾರ್ಯ’ ಚಿತ್ರದ ಬಳಿಕ ಚಿರಂಜೀವಿ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಕಾತರ ಅವರ ಅಭಿಮಾನಿಗಳಲ್ಲಿತ್ತು. ಎರಡು ಸಿನಿಮಾಗಳಲ್ಲಿ ನಟಿಸುವುದಾಗಿ ಚಿರು ಅವರೇ ಇತ್ತೀಚಿನ ಸಂದರ್ಶನದಲ್ಲಿ ಘೋಷಿಸಿದ್ದಾರೆ.</p>.<p>ಮಲಯಾಳದ ‘ಲೂಸಿಫರ್’ ಚಿತ್ರದ ತೆಲುಗು ರಿಮೇಕ್ನಲ್ಲಿ ಅವರು ನಟಿಸಲಿದ್ದಾರಂತೆ. ಇದಕ್ಕೆ ‘ಸಾಹೊ’ ಚಿತ್ರದ ನಿರ್ದೇಶಕ ಸುಜಿತ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಮೂಲ ಚಿತ್ರದ ಸ್ಕ್ರಿಪ್ಟ್ ಅನ್ನು ತೆಲುಗಿನ ನೇಟಿವಿಟಿಗೆ ತಕ್ಕಂತೆ ಬದಲಾಯಿಸುವ ಪ್ರಕ್ರಿಯೆಯಲ್ಲಿ ಅವರು ತೊಡಗಿದ್ದಾರೆ.</p>.<p>ಇದಾದ ಬಳಿಕ ಕೆ.ಎಸ್. ರವೀಂದ್ರ ಬಾಬಿ ನಿರ್ದೇಶನದ ಹೊಸ ಚಿತ್ರದಲ್ಲಿ ಚಿರಂಜೀವಿ ನಟಿಸಲಿದ್ದಾರೆ. ರವೀಂದ್ರ ಟಿಪಿಕಲ್ ಕಮರ್ಷಿಯಲ್ ಡೈರೆಕ್ಟರ್. ಅವರು ನಿರ್ದೇಶಿಸಿದ್ದ ‘ಜೈ ಲವ ಕುಶ’, ‘ವೆಂಕಿ ಮಾಮ’ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸು ಕಂಡಿದ್ದವು. ಈ ಯಶಸ್ಸೇ ಚಿರು ಹೊಸ ಸಿನಿಮಾದ ನಿರ್ದೇಶನಕ್ಕೆ ಅವರಿಗೆ ಅವಕಾಶದ ಬಾಗಿಲು ತೆರೆದಿದೆ ಎಂಬುದು ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿರುವ ಮಾತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>