ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ಅಪಘಾತ: ತೆಲುಗು ನಟ ಸಾಯಿ ಧರಂ ತೇಜ್ ಆರೋಗ್ಯದಲ್ಲಿ ಚೇತರಿಕೆ -ಚಿರಂಜೀವಿ

Last Updated 22 ಸೆಪ್ಟೆಂಬರ್ 2021, 12:36 IST
ಅಕ್ಷರ ಗಾತ್ರ

ಹೈದರಾಬಾದ್‌: ಬೈಕ್‌ ಅಪಘಾತದಲ್ಲಿ ಗಾಯಗೊಂಡಿರುವ ತೆಲುಗು ನಟ ಸಾಯಿ ಧರಂ ತೇಜ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ ಎಂದುಮೆಗಾಸ್ಟಾರ್ ಚಿರಂಜೀವಿ ಟ್ವೀಟ್‌ ಮಾಡಿದ್ದಾರೆ.

ಸಾಯಿ ತೇಜ್ ಅಭಿನಯದ ’ರಿಪಬ್ಲಿಕ್’ ಸಿನಿಮಾದ ಟ್ರೈಲರ್‌ ಬಿಡುಗಡೆ ಮಾಡಿ, ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಾಯಿ ತೇಜ್ ಚೇತರಿಸಿಕೊಳ್ಳುತ್ತಿದ್ದಾರೆ, ಸಾಯಿ ಬಯಸಿದಂತೆ ರಿಪಬ್ಲಿಕ್‌ ಸಿನಿಮಾ ಅಕ್ಟೋಬರ್‌ 1ರಂದು ಬಿಡುಗಡೆಯಾಗಲಿದೆ. ಅಭಿಮಾನಿಗಳ ವಾತ್ಸಲ್ಯ, ಪ್ರೀತಿ, ಶ್ರೀರಾಮನ ಕೃಪೆಯಿಂದ ಸಾಯಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಚಿರಂಜೀವಿ ಹೇಳಿದ್ದಾರೆ.

ದೇವರ ಕಟ್ಟ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ. ನಾಯಕಿಯಾಗಿ ಐಶ್ವರ್ಯಾ ರಾಜೇಶ್‌, ಮುಖ್ಯ ಪಾತ್ರಗಳಲ್ಲಿ ರಮ್ಯಾ ಕೃಷ್ಣ, ಜಗಪತಿ ಬಾಬು ನಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT