<p><strong>ಶೃಂಗೇರಿ</strong>: ಇಂಡಸ್ ಹರ್ಬ್ಸ್ನ ರವೀಂದ್ರ ತುಂಬರಮನೆ ನಿರ್ಮಿಸಿ, ಮಲೆನಾಡಿನ ರಮೇಶ್ ಬೇಗಾರ್ ರಚಿಸಿ, ನಿರ್ದೇಶಿಸಿದ ‘ಜಲಪಾತ’ ಸಿನಿಮಾಕ್ಕೆ 2024ರ ಚಿತ್ತಾರ ಸ್ಟಾರ್ ಪ್ರಶಸ್ತಿ ಲಭಿಸಿದೆ.</p>.<p>ಉತ್ತಮ ಸಾಮಾಜಿಕ ಪರಿಣಾಮ ಬೀರುವ ಚಿತ್ರ ಎಂಬ ವಿಭಾಗದಲ್ಲಿ ಜಲಪಾತ ನಾಮ ನಿರ್ದೇಶನಗೊಂಡಿತ್ತು. ಚಿತ್ರದ ನಾಯಕಿ ನಾಗಶ್ರೀ ಬೇಗಾರ್ ಮೊದಲ ಸಿನಿಮಾದ ಶ್ರೇಷ್ಠ ನಾಯಕಿ ವಿಭಾಗದಲ್ಲಿ ಪ್ರಸ್ತಾವನೆ ಸಲ್ಲಿಸಿದ್ದರು. ಆನ್ಲೈನ್ ಮತ ಮತ್ತು ತೀರ್ಪುಗಾರ ತಂಡದ ಮೂಲಕ ಆಯ್ಕೆ ಪ್ರಕ್ರಿಯೆ ನಡೆದಿತ್ತು.</p>.<p>ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್ ಸಭಾಂಗಣದಲ್ಲಿ ಚಿತ್ತಾರ ಸಿನಿ ಮ್ಯಾಗಜಿನ್ ಕಲರ್ಸ್ ಕನ್ನಡ ಸಹಯೋಗದಲ್ಲಿ ಆಯೋಜಿಸಿದ್ದ ಚಂದನವನ ಸಂಭ್ರಮ ಕಾರ್ಯಕ್ರಮದಲ್ಲಿ ನಿರ್ದೇಶಕ ಮನ್ಸೋರೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಜಲಪಾತ ಸಿನಿಮಾ ತಂಡದ ಪರವಾಗಿ ನಿರ್ಮಾಪಕ ರವೀಂದ್ರ, ನಿರ್ದೇಶಕ ರಮೇಶ್ ಬೇಗಾರ್, ನಾಯಕ ರಜನೀಶ್, ನಾಯಕಿ ನಾಗಶ್ರೀ ಪ್ರಶಸ್ತಿ ಸ್ವೀಕರಿದರು.</p>.<p>ಛಾಯಾಗ್ರಾಹಕ ಶಶಿರ ಶೃಂಗೇರಿ, ಸಂಕಲನಕಾರ ಅವಿನಾಶ್ ಶೃಂಗೇರಿ, ಕಲಾ ನಿರ್ದೇಶಕ ಅಭಿಷೇಕ್, ನಿರ್ವಾಹಕ ಕಾರ್ತಿಕ್ ಶೃಂಗೇರಿ ಭಾಗವಹಿಸಿದ್ದರು.</p>.<p>ರಮೇಶ್ ಬೇಗಾರ್ ಮಾತನಾಡಿ, ‘ಇದೊಂದು ಸಾಮಾಜಿಕ ಸಂದೇಶದ ಚಿತ್ರವಾದರೂ ವಾಣಿಜ್ಯ ವಿಭಾಗದಲ್ಲೂ ಉತ್ತಮ ಸಾಧನೆ ಮಾಡಿದ ಹೆಗ್ಗಳಿಕೆ ಪಡೆದಿದೆ. ಮಲೆನಾಡ ಗ್ರಾಮೀಣ ಪ್ರದೇಶದ ಕಲಾವಿದ ತಂತ್ರಜ್ಞರಿಗೆ ಒಲಿದ ಮೊದಲ ಪ್ರಶಸ್ತಿ ಇದಾಗಿದ್ದು, ಮಲೆನಾಡ ಸಮಸ್ತ ಜನತೆಗೆ ಪ್ರಶಸ್ತಿಯನ್ನು ಸಮರ್ಪಿಸುತ್ತೇವೆ’ ಎಂದರು.</p>.<p>2023ರಲ್ಲಿ ಚಿತ್ರೀಕರಣಗೊಂಡು ಬಿಡುಗಡೆ ಆಗಿ ಎಬಿಸಿ ಕೇಂದ್ರಗಳಲ್ಲಿ 50 ದಿನ ಪ್ರದರ್ಶನಗೊಂಡ ಜಲಪಾತ ಅಮೆಜಾನ್ ಪ್ರೈಮ್ನಲ್ಲೂ ಬಿಡುಗಡೆಗೊಂಡಿದೆ. 8ಕ್ಕೂ ಮಿಕ್ಕಿದ ಐಎಂಡಿಬಿ ರೇಟಿಂಗ್ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ಇಂಡಸ್ ಹರ್ಬ್ಸ್ನ ರವೀಂದ್ರ ತುಂಬರಮನೆ ನಿರ್ಮಿಸಿ, ಮಲೆನಾಡಿನ ರಮೇಶ್ ಬೇಗಾರ್ ರಚಿಸಿ, ನಿರ್ದೇಶಿಸಿದ ‘ಜಲಪಾತ’ ಸಿನಿಮಾಕ್ಕೆ 2024ರ ಚಿತ್ತಾರ ಸ್ಟಾರ್ ಪ್ರಶಸ್ತಿ ಲಭಿಸಿದೆ.</p>.<p>ಉತ್ತಮ ಸಾಮಾಜಿಕ ಪರಿಣಾಮ ಬೀರುವ ಚಿತ್ರ ಎಂಬ ವಿಭಾಗದಲ್ಲಿ ಜಲಪಾತ ನಾಮ ನಿರ್ದೇಶನಗೊಂಡಿತ್ತು. ಚಿತ್ರದ ನಾಯಕಿ ನಾಗಶ್ರೀ ಬೇಗಾರ್ ಮೊದಲ ಸಿನಿಮಾದ ಶ್ರೇಷ್ಠ ನಾಯಕಿ ವಿಭಾಗದಲ್ಲಿ ಪ್ರಸ್ತಾವನೆ ಸಲ್ಲಿಸಿದ್ದರು. ಆನ್ಲೈನ್ ಮತ ಮತ್ತು ತೀರ್ಪುಗಾರ ತಂಡದ ಮೂಲಕ ಆಯ್ಕೆ ಪ್ರಕ್ರಿಯೆ ನಡೆದಿತ್ತು.</p>.<p>ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್ ಸಭಾಂಗಣದಲ್ಲಿ ಚಿತ್ತಾರ ಸಿನಿ ಮ್ಯಾಗಜಿನ್ ಕಲರ್ಸ್ ಕನ್ನಡ ಸಹಯೋಗದಲ್ಲಿ ಆಯೋಜಿಸಿದ್ದ ಚಂದನವನ ಸಂಭ್ರಮ ಕಾರ್ಯಕ್ರಮದಲ್ಲಿ ನಿರ್ದೇಶಕ ಮನ್ಸೋರೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಜಲಪಾತ ಸಿನಿಮಾ ತಂಡದ ಪರವಾಗಿ ನಿರ್ಮಾಪಕ ರವೀಂದ್ರ, ನಿರ್ದೇಶಕ ರಮೇಶ್ ಬೇಗಾರ್, ನಾಯಕ ರಜನೀಶ್, ನಾಯಕಿ ನಾಗಶ್ರೀ ಪ್ರಶಸ್ತಿ ಸ್ವೀಕರಿದರು.</p>.<p>ಛಾಯಾಗ್ರಾಹಕ ಶಶಿರ ಶೃಂಗೇರಿ, ಸಂಕಲನಕಾರ ಅವಿನಾಶ್ ಶೃಂಗೇರಿ, ಕಲಾ ನಿರ್ದೇಶಕ ಅಭಿಷೇಕ್, ನಿರ್ವಾಹಕ ಕಾರ್ತಿಕ್ ಶೃಂಗೇರಿ ಭಾಗವಹಿಸಿದ್ದರು.</p>.<p>ರಮೇಶ್ ಬೇಗಾರ್ ಮಾತನಾಡಿ, ‘ಇದೊಂದು ಸಾಮಾಜಿಕ ಸಂದೇಶದ ಚಿತ್ರವಾದರೂ ವಾಣಿಜ್ಯ ವಿಭಾಗದಲ್ಲೂ ಉತ್ತಮ ಸಾಧನೆ ಮಾಡಿದ ಹೆಗ್ಗಳಿಕೆ ಪಡೆದಿದೆ. ಮಲೆನಾಡ ಗ್ರಾಮೀಣ ಪ್ರದೇಶದ ಕಲಾವಿದ ತಂತ್ರಜ್ಞರಿಗೆ ಒಲಿದ ಮೊದಲ ಪ್ರಶಸ್ತಿ ಇದಾಗಿದ್ದು, ಮಲೆನಾಡ ಸಮಸ್ತ ಜನತೆಗೆ ಪ್ರಶಸ್ತಿಯನ್ನು ಸಮರ್ಪಿಸುತ್ತೇವೆ’ ಎಂದರು.</p>.<p>2023ರಲ್ಲಿ ಚಿತ್ರೀಕರಣಗೊಂಡು ಬಿಡುಗಡೆ ಆಗಿ ಎಬಿಸಿ ಕೇಂದ್ರಗಳಲ್ಲಿ 50 ದಿನ ಪ್ರದರ್ಶನಗೊಂಡ ಜಲಪಾತ ಅಮೆಜಾನ್ ಪ್ರೈಮ್ನಲ್ಲೂ ಬಿಡುಗಡೆಗೊಂಡಿದೆ. 8ಕ್ಕೂ ಮಿಕ್ಕಿದ ಐಎಂಡಿಬಿ ರೇಟಿಂಗ್ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>