ಎರಡನೇ ಹಂತದ ಚಿತ್ರೀಕರಣ ಶೀಘ್ರವೇ ಆರಂಭವಾಗುವ ನಿರೀಕ್ಷೆಯಿದೆ. ಅನಿಲ್ ಕುಮಾರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಅವರು ‘ಶಕ್ತಿ’, ‘ದಿಲ್ವಾಲ’, ‘ಕೃಷ್ಣ ರುಕ್ಕು’,‘ರ್ಯಾಂಬೋ 2’, ‘ಕಿರಾತಕ 2’ ಮತ್ತು ‘ದಾರಿ ತಪ್ಪಿದ ಮಗ’ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯನ್ನೂ ಅವರೇ ಹೊತ್ತಿದ್ದಾರೆ.